ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 18 ಗುರುವಾರ 2022

ಇದು ಸನ್ನಡತೆ ಅಲ್ಲ!

ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ ಘಟನೆಗಳು ಶಿವಮೊಗ್ಗದಲ್ಲಿ ,ಇಲ್ಲವೇ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿವೆ. ಆಡಳಿತಾರೂಢ ಬಿಜೆಪಿ ಇಂತಹ ಸಂದರ್ಭದಲ್ಲಿ ಒಂದು ಸಮುದಾಯದವರಿಗೆ ಮಾತ್ರ ಸಾಂತ್ವನ ಹೇಳುತ್ತಾ ಮತ್ತೊಂದು ಸಮುದಾಯದ ವಿರುದ್ಧ ಪರೋಕ್ಷವಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಇಂತಹ ಘಟನೆಗಳು ಪದೇ ಪದೇ ಆಗುವುದನ್ನು ತಡೆಯುವ ಪ್ರಯತ್ನ ಮಾಡುತ್ತಲೇ ಇಲ್ಲ. ಜನರ ಗಮನವನ್ನು ಭಾವನಾತ್ಮಕ ವಿಚಾರಗಳತ್ತ ಸೆಳೆಯುವ ಮೂಲಕ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುತ್ತದೆ. ಇದು ಸನ್ನಡತೆ ಅಲ್ಲ.

-ನಂದಕುಮಾರ್, ಸರಸ್ವತಿಪುರಂ, ಮೈಸೂರು.


ಎಲ್ಲಿಗೆ ಬಂದಿದೆ ಸ್ವಾತಂತ್ರ್ಯ!?

ಸ್ವಾತಂತ್ರ್ಯ ಬಂದು ೭೫ ವರ್ಷಗಳೇ ಕಳೆದಿದೆ.

ಅಮೃತಮಹೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ.

ಹರ್ ಘರ್ ತಿರಂಗಾ ಅಂದುಕೊಂಡಂತೆಯೇ ಜರುಗಿದೆ.

ಬಡತನ, ನಿರುದ್ಯೋಗ, ಭ್ರಷ್ಟಾಚಾರ ಹಾಗೆಯೇ ಉಳಿದಿದೆ!

ಹೀಗಾದರೆ ಅಮೃತಮಹೋತ್ಸವದ ಸಂತೋಷಕ್ಕೆ ಅರ್ಥವೇನಿದೆ!?

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.


ಪ್ರತಿಭಾವಂತರಿಗೆ ಮನ್ನಣೆ ನೀಡಿ

ಭ್ರಷ್ಟಾಚಾರ ನಮ್ಮ ದೇಶದಲ್ಲಿ ಕುಣಿದು ಕುಪ್ಪಳಿಸುತ್ತಿದೆ. ಪಿ.ಎಸ್.ಐ. ನೇಮಕ ಸೇರಿದಂತೆ ಹಲವು ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರ ಎಲ್ಲೆಡೆ ವ್ಯಾಪಿಸುತ್ತಿದೆ. ಇದರಿಂದಾಗಿ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ. ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಆದರೆ, ಅವರ ಪ್ರತಿಭೆಗೆ ಮನ್ನಣೆ ದೊರೆಯದ ಕಾರಣ ಬೇರೆ ದೇಶಗಳಲ್ಲಿ ನೆಲೆಸುತ್ತಿದ್ದಾರೆ. ಅವರ ಪ್ರತಿಭೆಯ ಫಲ ನಮಗೆ ದಕ್ಕದಂತಾಗುತ್ತಿದೆ. ಯುವಜನತೆಯ ಪ್ರತಿಭೆಗೆ ಮನ್ನಣೆ ಕೊಟ್ಟು ನಮ್ಮ ದೇಶದ ಪ್ರಗತಿಗೆ ಅವಕಾಶ ಮಾಡಿಕೊಟ್ಟರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಪ್ರತಿಭಾವಂತ ಯುವಜನತೆ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತು ಹಾಕಿ ದೇಶವನ್ನು ಉಳಿಸಲು ಸಾಧ್ಯವಾಗುತ್ತದೆ.

-ನಿಸರ್ಗ ಮುತ್ತಪ್ಪ ಎಂ, ಮಹಾರಾಜ ಕಾಲೇಜು, ಮೈಸೂರು.


ಉತ್ತಮ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಈ ವರ್ಷ ದಸರಾ ಮಹೋತ್ಸವದ ಉದ್ಘಾಟನೆಗೆ ಮಣ್ಣಿನ ಮಗ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅವರನ್ನುಆಹ್ವಾನಿಸುವ ಪ್ರಸ್ತಾಪ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ಈ ವಯಸ್ಸಿನಲ್ಲಿಯೂ ನಾಡು ನುಡಿ ಸಂಸ್ಕೃತಿ ಬಗ್ಗೆ ಕಾಳಜಿ ಇರುವ ಮೇರು ವ್ಯಕ್ತಿ ದೇವೇಗೌಡರು. ಕಾವೇರಿ ನದಿ ನೀರಿನಲ್ಲಿ ಅಗ್ರಪಾಲು ನಮಗೆ ದಕ್ಕಿರುವುದರಲ್ಲಿ ದೇವೆಗೌಡರ ಪಾತ್ರ ಬಹಳ ಮುಖ್ಯ. ದೇವೇಗೌಡರು ಎಲ್ಲ ಪಕ್ಷಗಳ ಮುಖಂಡರ ಜೊತೆ ಉತ್ತಮ ಬಾಂಧವ್ಯದಿಂದ ಇದ್ದಾರೆ. ದೇವೆಗೌಡರು ಪ್ರಬುದ್ಧ ರಾಜಕೀಯ ಮುತ್ಸದ್ದಿ. ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದೆಂದರೆ ರಾಜ್ಯದ ಮಣ್ಣಿನ ಮಕ್ಕಳಾದ ರೈತರನ್ನೇ ಗೌರವಿಸಿದಂತಾಗುತ್ತದೆ.

-ಸಿದ್ದಲಿಂಗೆಗೌಡ. ಹೈರಿಗೆ ಗ್ರಾಮ. ಎಚ್ ಡಿ ಕೊಟೆ ತಾಲ್ಲೂಕು.


ಶೌಚಾಲಯ ಸೌಲಭ್ಯ ಒದಗಿಸಿ

ಹುಣಸೂರಿನಲ್ಲಿರುವ ಡಿ . ದೇವರಾಜು ಅರಸು ಕಾಲೇಜು ವ್ಯಾಸಂಗಕ್ಕೆ ಉತ್ತಮ ಶ್ರೇಣಿಯ ಕಾಲೇಜಾಗಿದೆ. ಇಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಇಷ್ಟು ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಕಾಲೇಜಿನಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ. ಇದರಿಂದಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ನಿತ್ಯವೂ ಪರದಾಡುವಂತಾಗಿದೆ. ಸಂಬಂಧ ಅಧಿಕಾರಿಗಳು ತಕ್ಷಣ ವ್ಯವಸ್ಥಿತವಾದ ಶೌಚಾಲಯ ಸೌಲಭ್ಯ ಒದಗಿಸಬೇಕಿದೆ.

– ಶಿವರಾಜು, ಮಹಾರಾಜ ಕಾಲೇಜು, ಮೈಸೂರು.

 

 

andolana

Recent Posts

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

58 mins ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

4 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

6 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

11 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

12 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

12 hours ago