ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 18 ಗುರುವಾರ 2022

ಇದು ಸನ್ನಡತೆ ಅಲ್ಲ!

ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ ಘಟನೆಗಳು ಶಿವಮೊಗ್ಗದಲ್ಲಿ ,ಇಲ್ಲವೇ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿವೆ. ಆಡಳಿತಾರೂಢ ಬಿಜೆಪಿ ಇಂತಹ ಸಂದರ್ಭದಲ್ಲಿ ಒಂದು ಸಮುದಾಯದವರಿಗೆ ಮಾತ್ರ ಸಾಂತ್ವನ ಹೇಳುತ್ತಾ ಮತ್ತೊಂದು ಸಮುದಾಯದ ವಿರುದ್ಧ ಪರೋಕ್ಷವಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಇಂತಹ ಘಟನೆಗಳು ಪದೇ ಪದೇ ಆಗುವುದನ್ನು ತಡೆಯುವ ಪ್ರಯತ್ನ ಮಾಡುತ್ತಲೇ ಇಲ್ಲ. ಜನರ ಗಮನವನ್ನು ಭಾವನಾತ್ಮಕ ವಿಚಾರಗಳತ್ತ ಸೆಳೆಯುವ ಮೂಲಕ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುತ್ತದೆ. ಇದು ಸನ್ನಡತೆ ಅಲ್ಲ.

-ನಂದಕುಮಾರ್, ಸರಸ್ವತಿಪುರಂ, ಮೈಸೂರು.


ಎಲ್ಲಿಗೆ ಬಂದಿದೆ ಸ್ವಾತಂತ್ರ್ಯ!?

ಸ್ವಾತಂತ್ರ್ಯ ಬಂದು ೭೫ ವರ್ಷಗಳೇ ಕಳೆದಿದೆ.

ಅಮೃತಮಹೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ.

ಹರ್ ಘರ್ ತಿರಂಗಾ ಅಂದುಕೊಂಡಂತೆಯೇ ಜರುಗಿದೆ.

ಬಡತನ, ನಿರುದ್ಯೋಗ, ಭ್ರಷ್ಟಾಚಾರ ಹಾಗೆಯೇ ಉಳಿದಿದೆ!

ಹೀಗಾದರೆ ಅಮೃತಮಹೋತ್ಸವದ ಸಂತೋಷಕ್ಕೆ ಅರ್ಥವೇನಿದೆ!?

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.


ಪ್ರತಿಭಾವಂತರಿಗೆ ಮನ್ನಣೆ ನೀಡಿ

ಭ್ರಷ್ಟಾಚಾರ ನಮ್ಮ ದೇಶದಲ್ಲಿ ಕುಣಿದು ಕುಪ್ಪಳಿಸುತ್ತಿದೆ. ಪಿ.ಎಸ್.ಐ. ನೇಮಕ ಸೇರಿದಂತೆ ಹಲವು ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರ ಎಲ್ಲೆಡೆ ವ್ಯಾಪಿಸುತ್ತಿದೆ. ಇದರಿಂದಾಗಿ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ. ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಆದರೆ, ಅವರ ಪ್ರತಿಭೆಗೆ ಮನ್ನಣೆ ದೊರೆಯದ ಕಾರಣ ಬೇರೆ ದೇಶಗಳಲ್ಲಿ ನೆಲೆಸುತ್ತಿದ್ದಾರೆ. ಅವರ ಪ್ರತಿಭೆಯ ಫಲ ನಮಗೆ ದಕ್ಕದಂತಾಗುತ್ತಿದೆ. ಯುವಜನತೆಯ ಪ್ರತಿಭೆಗೆ ಮನ್ನಣೆ ಕೊಟ್ಟು ನಮ್ಮ ದೇಶದ ಪ್ರಗತಿಗೆ ಅವಕಾಶ ಮಾಡಿಕೊಟ್ಟರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಪ್ರತಿಭಾವಂತ ಯುವಜನತೆ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತು ಹಾಕಿ ದೇಶವನ್ನು ಉಳಿಸಲು ಸಾಧ್ಯವಾಗುತ್ತದೆ.

-ನಿಸರ್ಗ ಮುತ್ತಪ್ಪ ಎಂ, ಮಹಾರಾಜ ಕಾಲೇಜು, ಮೈಸೂರು.


ಉತ್ತಮ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಈ ವರ್ಷ ದಸರಾ ಮಹೋತ್ಸವದ ಉದ್ಘಾಟನೆಗೆ ಮಣ್ಣಿನ ಮಗ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅವರನ್ನುಆಹ್ವಾನಿಸುವ ಪ್ರಸ್ತಾಪ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ಈ ವಯಸ್ಸಿನಲ್ಲಿಯೂ ನಾಡು ನುಡಿ ಸಂಸ್ಕೃತಿ ಬಗ್ಗೆ ಕಾಳಜಿ ಇರುವ ಮೇರು ವ್ಯಕ್ತಿ ದೇವೇಗೌಡರು. ಕಾವೇರಿ ನದಿ ನೀರಿನಲ್ಲಿ ಅಗ್ರಪಾಲು ನಮಗೆ ದಕ್ಕಿರುವುದರಲ್ಲಿ ದೇವೆಗೌಡರ ಪಾತ್ರ ಬಹಳ ಮುಖ್ಯ. ದೇವೇಗೌಡರು ಎಲ್ಲ ಪಕ್ಷಗಳ ಮುಖಂಡರ ಜೊತೆ ಉತ್ತಮ ಬಾಂಧವ್ಯದಿಂದ ಇದ್ದಾರೆ. ದೇವೆಗೌಡರು ಪ್ರಬುದ್ಧ ರಾಜಕೀಯ ಮುತ್ಸದ್ದಿ. ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದೆಂದರೆ ರಾಜ್ಯದ ಮಣ್ಣಿನ ಮಕ್ಕಳಾದ ರೈತರನ್ನೇ ಗೌರವಿಸಿದಂತಾಗುತ್ತದೆ.

-ಸಿದ್ದಲಿಂಗೆಗೌಡ. ಹೈರಿಗೆ ಗ್ರಾಮ. ಎಚ್ ಡಿ ಕೊಟೆ ತಾಲ್ಲೂಕು.


ಶೌಚಾಲಯ ಸೌಲಭ್ಯ ಒದಗಿಸಿ

ಹುಣಸೂರಿನಲ್ಲಿರುವ ಡಿ . ದೇವರಾಜು ಅರಸು ಕಾಲೇಜು ವ್ಯಾಸಂಗಕ್ಕೆ ಉತ್ತಮ ಶ್ರೇಣಿಯ ಕಾಲೇಜಾಗಿದೆ. ಇಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಇಷ್ಟು ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಕಾಲೇಜಿನಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ. ಇದರಿಂದಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ನಿತ್ಯವೂ ಪರದಾಡುವಂತಾಗಿದೆ. ಸಂಬಂಧ ಅಧಿಕಾರಿಗಳು ತಕ್ಷಣ ವ್ಯವಸ್ಥಿತವಾದ ಶೌಚಾಲಯ ಸೌಲಭ್ಯ ಒದಗಿಸಬೇಕಿದೆ.

– ಶಿವರಾಜು, ಮಹಾರಾಜ ಕಾಲೇಜು, ಮೈಸೂರು.

 

 

andolana

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

36 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago