ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 31 ಬುಧವಾರ 2022

ನಿಷ್ಪಕ್ಷಪಾತ ತನಿಖೆ ನಡೆಯಲಿ!


ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಬಂದಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಶ್ರೀಗಳು ಆರೋಪಿಸಿದ್ದಾರೆ.  ಈ ನೆಲದ ಕಾನೂನನ್ನು ಗೌರವಿಸುತ್ತೇನೆ, ತನಿಖೆಗೆ ಸಹಕರಿಸುತ್ತೇನೆ ಎಂದೂ  ಹೇಳಿದ್ದಾರೆ.  ತಮ್ಮ ವೈಚಾರಿಕ ನಡೆ ನುಡಿಗಳಿಂದಾಗಿ ಜನರ ಮೆಚ್ಚುಗೆ ಪಡೆದಿರುವ  ಶ್ರೀಗಳು ಇಂತಹ ಆರೋಪ ಬಾರದಂತೆ ಎಚ್ಚರಿಕೆ ವಹಿಸಬೇಕಿತ್ತು. ಷಡ್ಯಂತ್ರ ಮಾಡುವವರ ಬಣ್ಣ ಬಯಲು ಮಾಡಬೇಕಿತ್ತು. ಮುರುಘಾ ಮಠದಲ್ಲಿ ಆಡಳಿತಕ್ಕಾಗಿ ಕಿತ್ತಾಟ ನಡೆಯುತ್ತಿರುವುದು ಗುಟ್ಟಾಗೇನೂ ಉಳಿದಿಲ್ಲ.  ತಪ್ಪು ಎಸಗಿದ್ದಾರೋ ಇಲ್ಲವೋ ಅದು ತನಿಖೆಯಿಂದ ಗೊತ್ತಾಗುತ್ತದೆ.  ಈ ಘಟನೆಯ ಬಗ್ಗೆ ರಾಜಕೀಯ ಹಸ್ತಕ್ಷೇಪ ಇಲ್ಲದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಸತ್ಯವನ್ನು ಹೊರತರಬೇಕು.
-ಚಂದ್ರಶೇಖರ್ ಚಿಲ್ಕುಂದ, ಕ್ಯಾತಮಾರನಹಳ್ಳಿ, ಮೈಸೂರು.

ಗಣೇಶ ಮೂರ್ತಿಯ ತಯಾರಕರನ್ನು ಗೌರವಿಸಿ


ಗಣೇಶನ ಹಬ್ಬ ಬಂದರೆ ವಯಸ್ಸಿನ  ಅಂತರವಿಲ್ಲದೆ ಪ್ರತಿಯೊಬ್ಬರೂ ಹಲವಾರು ಬಡಾವಣೆಗಳಲ್ಲಿ ಗಣೇಶನನ್ನು ಪ್ರತ್ಯೇಕವಾಗಿ ಕೂರಿಸಿ ಸಂಭ್ರಮಿಸುತ್ತಾರೆ.  ಕಲಾವಿದನ ಕೈ ಚಳಕದಲ್ಲಿ ಗಣೇಶನ ಮೂರ್ತಿಯು ಅತ್ಯದ್ಭುತವಾಗಿ ಅರಳುತ್ತದೆ. ಈ ಸಂದರ್ಭದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಿ ಅನೇಕ ಗಣ್ಯರಿಗೆ ಸನ್ಮಾನಿಸುತ್ತಾರೆ.  ಇದೇ ಸಂದರ್ಭದಲ್ಲಿ ಗಣೇಶನನ್ನು ತಯಾರಿಸಿದ ಕಲಾವಿದರಿಗೂ ಗೌರವ ನೀಡಿ ಸನ್ಮಾನಿಸಿ. ಇದರಿಂದ ಅವರು ಸಂತೋಷಗೊಂಡು ವಿವಿಧ ಬಗೆಯ ಗಣೇಶನನ್ನು ತಯಾರಿಸಲು ಸ್ಫೂರ್ತಿ ಬರುತ್ತದೆ.   ಎಲ್ಲೆಡೆ ಗಣೇಶ ಮೂರ್ತಿಯ ತಯಾರಕರಾದ ಕಲಾವಿದರನ್ನು ಗೌರವಿಸಿ.  ಅವರು ಪಟ್ಟ ಶ್ರಮವು ಸಾರ್ಥಕವೆನಿಸುತ್ತದೆ. ಅವರ ಸಂತೋಷವು ದುಪ್ಪಟ್ಟವಾಗುತ್ತದೆ. ಎಲ್ಲರೂ ಈ ರೀತಿ ಯೋಚಿಸಿದರೆ ಒಳ್ಳೆಯದು.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು.

ಮನೆಗೊಂದು ತೆಪ್ಪ ಬೇಕಿದೆ!

ರಾಮನಗರದಲ್ಲಿ
ಬಿದ್ದ ಮಳೆ ಅಬ್ಬರ
ನೋಡಿದರೆ….
ಮುಂದಿನ ದಿನಗಳಲ್ಲಿ
ಯಾವುದಕ್ಕೂ
ಮನೆಗೊಂದು
ಬೇಕೇ ಬೇಕು ತೆಪ್ಪ
ತೆಪ್ಪ ಇಲ್ಲದವನು
ಆಗುವನು ಬೆಪ್ಪ!
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಗುಂಡಿಬಿದ್ದ ರಸ್ತೆ!

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಮತ್ತು ಹುರ ಮುಖ್ಯ ರಸ್ತೆಯು ಗುಂಡಿಮಯವಾಗಿದ್ದು, ಕಾರ್ಯ, ಮಾದಾಪುರ ಗ್ರಾಮಗಳಲ್ಲಿ ವಾಹನಗಳು ಸಂಚರಿಸಲು  ಕಷ್ಟವಾಗಿದೆ. ವಾಹನ ಸವಾರರು ಸರ್ಕಸ್ ಮಾಡಿಕೊಂಡು ಜೀವ ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಸವಾರರು ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ. ಈ ರಸ್ತೆಯು ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ  ನೂರಾರು ರೈತರು ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಈ ಮಾರ್ಗದಲ್ಲೇ ಸಂಚರಿಸುತ್ತಾರೆ.  ದುಗ್ಗಹಳ್ಳಿ ಗೇಟ್, ಪೆಟ್ರೋಲ್ ಬಂಕ್‌ನ ಹತ್ತಿರ ರಸ್ತೆ  ತುಂಬಾ ಹದಗೆಟ್ಟಿದ್ದು ಅನೇಕ ಗುಂಡಿಗಳಿವೆ. ಮಳೆ ಬಂದರೆ  ಕೆಸರುಮಯವಾಗಿ ಸಂಚರಿಸಲು ಸಾಧ್ಯವಾಗುವುದೇ ಇಲ್ಲ. ಮುಖ್ಯ ರಸ್ತೆಯ ಸ್ಥಿತಿ ಈ ರೀತಿ ಆದರೆ, ಇನ್ನು ಗ್ರಾಮಗಳ ರಸ್ತೆಯ ಸ್ಥಿತಿಯನ್ನು ಊಹಿಸಲು ಸಾಧ್ಯವಿಲ್ಲ.  ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಕೂಡಲೇ ಸ್ಪಂದಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು.
-ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.
andolana

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 mins ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

23 mins ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

31 mins ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

57 mins ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

1 hour ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

3 hours ago