ಎಡಿಟೋರಿಯಲ್

ಓದುಗರ ಪತ್ರ : 28 ಬುಧವಾರ 2022

ಯುವ ಸಾಧಕರೇ ಉದ್ಘಾಟಿಸಲಿ

ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. ಯುವ ದಸರಾ ಉದ್ಘಾಟನೆಗೆ ಸಾಧಕ ಯುವ ರೈತರನ್ನು, ಯುವ ವಿಜ್ಞಾನಿಯನ್ನು ಅಥವಾ ಯುವ ಸೈನಿಕರನ್ನು ಕರೆಯುವ ಪರಿಪಾಟ ಬೆಳೆಯಲಿ. ಅದರ ಮೂಲಕ ಯುವಕರಿಗೆ ತಮ್ಮ ಜೀವನದ ಮಾದರಿ ಯಾರಾಗಬೇಕು? ಎಂದು ತಿಳಿಯುತ್ತದೆ. ಹಾಗೆಯೇ ಸಾಧಿಸಿದ ಯುವಕರನ್ನು ಸಮಾಜ ಗುರುತಿಸುವುದರಿಂದ ಅಂತಹವರು ಹೆಚ್ಚಿನ ಕೆಲಸದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡುತ್ತಾರೆ. ಮನರಂಜನಾ ಕಾರ್ಯಕ್ರಮಗಳಿಗೆ ಸಿನಿಮಾ ನಟರನ್ನು ಕರೆಸಿ ಕಾರ್ಯಕ್ರಮದ ಆಕರ್ಷಣೆ ಹೆಚ್ಚಿಸಿಕೊಳ್ಳಿ. ಆದರೆ ಯುವ ದಸರಾ ಉದ್ಘಾಟನೆ ಗೆ ಸಾಧಕರೇ ಬರಲಿ.
-ಎಸ್.ರವಿ,   ಮೈಸೂರು.


ಜನಪ್ರತಿನಿಧಿಗಳಿಗೆ ಅವಮಾನ?
ನಾಡ ಹಬ್ಬ ‘ಮೈಸೂರು ದಸರಾ’ ಉದ್ಘಾಟನಾ ಸಮಾರಂಭವು ‘ಮೈಸೂರಿನ ಜನಪ್ರಧಿನಿಧಿಗಳನ್ನು  ಅವಮಾನ ಮಾಡಿದಂತಿತ್ತು. ಮೈಸೂರಿನ ಪ್ರಥಮ ಪ್ರಜೆ ಮೇಯರ್ ಆಗಲಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಿಗಾಗಲಿ, ವೇದಿಕೆ ಮೇಲೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸದೇ ಮೈಸೂರಿನ ಜನರಿಗೇ ಜಿಲ್ಲಾಡಳಿತ ಅವಮಾನ ಮಾಡಿದೆ. ವೇದಿಕೆಯ ಮೇಲೆ ಮೈಸೂರಿನ ಪ್ರಥಮ ಪ್ರಜೆ ಇರಬೇಕೆಂಬ ಕನಿಷ್ಠ ಜ್ಞಾನವೂ ಜಿಲ್ಲಾಡಳಿತಕ್ಕೆ ಇರಲಿಲ್ಲವೇ, ಅಧ್ಯಕ್ಷತೆ ವಹಿಸಬೇಕಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರನ್ನು ಕೈಬಿಟ್ಟಿದ್ದೇಕೆ? ಇನ್ನು ರಾಷ್ಟ್ರಪತಿಯವರಿಗೆ, ಮೈಸೂರಿನ ಮಲ್ಲಿಗೆ ಹಾರ ಹಾಕಿ, ಮೈಸೂರು ಸಿಲ್ಕ್ ಶಾಲು ಹೊದಿಸಿ ಗೌರವಿಸಬೇಕಾಗಿತ್ತು, ಸಚಿವೆ ಶೋಭಾ ಕರಂದ್ಲಾಜೆ ಪ್ಲ್ಯಾಸ್ಟಿಕ್‌ನಿಂದ ತಯಾರಿಸಿದ ಹಾರ ಹಾಕಿದರೆ, ರಾಜ್ಯಪಾಲರು ಶಾಲನ್ನು ರಾಷ್ಟ್ರಪತಿಯವರ ಕೈಗೆ ನೀಡಿ, ಮೈಸೂರಿನ ಜನತೆಯನ್ನು ಒಂದು ರೀತಿಯಲ್ಲಿ ಅವಮಾನಿಸಿದರು. ಮುಂದಿನ ವರ್ಷಗಳಲ್ಲಿ ಇಂತಹ ಅವ್ಯವಸ್ಥೆ ಆಗದಂತೆ ಜಿಲ್ಲಾಡಳಿತ ಗಮನ ಹರಿಸಲಿ.
-ಬೂಕನಕೆರೆ ವಿಜೇಂದ್ರ, ಮೈಸೂರು.

ನಿಗದಿತ ಸ್ಥಳದಲ್ಲಿ ನಿಲ್ಲದ ಬಸ್

ಮೈಸೂರು ನಗರ ಬಸ್ ನಿಲ್ದಾಣದಿಂದ ಬೋಗಾದಿಗೆ ಸಂಚರಿಸುವ ರೂಟ್ ನಂ.೫೧ಬಿ ಕಡೇ ಸ್ಟಾಪ್‌ನಿಂದ  ಮುಂದಿನ ಸ್ಟಾಪ್ ಇರುವ ಜಾಗದಲ್ಲಿ ನಿಲುಗಡೆಗೊಳಿಸುತ್ತಿಲ್ಲ. ಯಾರಾದರೂ ಒಬ್ಬ ಪ್ರಯಾಣಿಕ ಅಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರೆ ಬಸ್ ನಿಲ್ಲಸದೇ ವೇಗವಾಗಿ ಹೋಗುತ್ತಾರೆ. ಒಂದು ವೇಳೆ ನಿಲ್ಲಿಸಿದರೆ ಆ ಪ್ರಯಾಣಿಕರನ್ನು ಚಾಲಕ ದುರುಗುಟ್ಟಿ ನೋಡುವುದು ಸರ್ವೇಸಾಮಾನ್ಯವಾಗಿದೆ. ಅಲ್ಲಿ ಬಸ್ ನಿಲ್ದಾಣ ಇರುವುದರಿಂದ ಒಬ್ಬರೋ ಅಥವಾ ಇಬ್ಬರೋ ಬಸ್ಸಿಗಾಗಿ ಕಾಯುತ್ತಿರುತ್ತಾರೆ. ದಯವಿಟ್ಟು ಇನ್ನು ಮುಂದಾದರೂ ಬಸ್ಸಿನ ಚಾಲಕರು ನಿಲುಗಡೆಯ ಸ್ಥಳದಲ್ಲಿ ಬಸ್ಸನ್ನು ನಿಲ್ಲಿಸಲಿ.
-ರಾಘವೇಂದ್ರ, ಬೋಗಾದಿ ೨ನೇ ಹಂತ, ಮೈಸೂರು.

ಧೂಳು?

ರಷ್ಯಾ-ಉಕ್ರೇನ್ ಯುದ್ಧದಲ್ಲಿ
ಉಕ್ರೇನ್ ಮೇಲುಗೈಯಂತೆ!
ಆಗಬಾರದೇಕೆ?
ಬಡವಂ ಬಲ್ಲಿದನಾಗನೇ
ಹರಹರಾ…?’
ಸಂಸ್ಕೃತದ ಒಂದು ಸುಭಾಷಿತ:
ಕೇವಲ ಧೂಳು ಎಂದು ಕಾಲಿನಿಂದೊದೆದರೆ,
ಅದು ಹಾರಿ, ತಲೆಯ ಮೇಲೆ
ಕುಳಿತುಕೊಳ್ಳುತ್ತದೆ!
– ಸಿಪಿಕೆ, ಮೈಸೂರು.
andolana

Recent Posts

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

1 hour ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

1 hour ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

2 hours ago

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

2 hours ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago