ಎಡಿಟೋರಿಯಲ್

ಓದುಗರ ಪತ್ರ : 28 ಬುಧವಾರ 2022

ಯುವ ಸಾಧಕರೇ ಉದ್ಘಾಟಿಸಲಿ

ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. ಯುವ ದಸರಾ ಉದ್ಘಾಟನೆಗೆ ಸಾಧಕ ಯುವ ರೈತರನ್ನು, ಯುವ ವಿಜ್ಞಾನಿಯನ್ನು ಅಥವಾ ಯುವ ಸೈನಿಕರನ್ನು ಕರೆಯುವ ಪರಿಪಾಟ ಬೆಳೆಯಲಿ. ಅದರ ಮೂಲಕ ಯುವಕರಿಗೆ ತಮ್ಮ ಜೀವನದ ಮಾದರಿ ಯಾರಾಗಬೇಕು? ಎಂದು ತಿಳಿಯುತ್ತದೆ. ಹಾಗೆಯೇ ಸಾಧಿಸಿದ ಯುವಕರನ್ನು ಸಮಾಜ ಗುರುತಿಸುವುದರಿಂದ ಅಂತಹವರು ಹೆಚ್ಚಿನ ಕೆಲಸದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡುತ್ತಾರೆ. ಮನರಂಜನಾ ಕಾರ್ಯಕ್ರಮಗಳಿಗೆ ಸಿನಿಮಾ ನಟರನ್ನು ಕರೆಸಿ ಕಾರ್ಯಕ್ರಮದ ಆಕರ್ಷಣೆ ಹೆಚ್ಚಿಸಿಕೊಳ್ಳಿ. ಆದರೆ ಯುವ ದಸರಾ ಉದ್ಘಾಟನೆ ಗೆ ಸಾಧಕರೇ ಬರಲಿ.
-ಎಸ್.ರವಿ,   ಮೈಸೂರು.


ಜನಪ್ರತಿನಿಧಿಗಳಿಗೆ ಅವಮಾನ?
ನಾಡ ಹಬ್ಬ ‘ಮೈಸೂರು ದಸರಾ’ ಉದ್ಘಾಟನಾ ಸಮಾರಂಭವು ‘ಮೈಸೂರಿನ ಜನಪ್ರಧಿನಿಧಿಗಳನ್ನು  ಅವಮಾನ ಮಾಡಿದಂತಿತ್ತು. ಮೈಸೂರಿನ ಪ್ರಥಮ ಪ್ರಜೆ ಮೇಯರ್ ಆಗಲಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಿಗಾಗಲಿ, ವೇದಿಕೆ ಮೇಲೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸದೇ ಮೈಸೂರಿನ ಜನರಿಗೇ ಜಿಲ್ಲಾಡಳಿತ ಅವಮಾನ ಮಾಡಿದೆ. ವೇದಿಕೆಯ ಮೇಲೆ ಮೈಸೂರಿನ ಪ್ರಥಮ ಪ್ರಜೆ ಇರಬೇಕೆಂಬ ಕನಿಷ್ಠ ಜ್ಞಾನವೂ ಜಿಲ್ಲಾಡಳಿತಕ್ಕೆ ಇರಲಿಲ್ಲವೇ, ಅಧ್ಯಕ್ಷತೆ ವಹಿಸಬೇಕಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರನ್ನು ಕೈಬಿಟ್ಟಿದ್ದೇಕೆ? ಇನ್ನು ರಾಷ್ಟ್ರಪತಿಯವರಿಗೆ, ಮೈಸೂರಿನ ಮಲ್ಲಿಗೆ ಹಾರ ಹಾಕಿ, ಮೈಸೂರು ಸಿಲ್ಕ್ ಶಾಲು ಹೊದಿಸಿ ಗೌರವಿಸಬೇಕಾಗಿತ್ತು, ಸಚಿವೆ ಶೋಭಾ ಕರಂದ್ಲಾಜೆ ಪ್ಲ್ಯಾಸ್ಟಿಕ್‌ನಿಂದ ತಯಾರಿಸಿದ ಹಾರ ಹಾಕಿದರೆ, ರಾಜ್ಯಪಾಲರು ಶಾಲನ್ನು ರಾಷ್ಟ್ರಪತಿಯವರ ಕೈಗೆ ನೀಡಿ, ಮೈಸೂರಿನ ಜನತೆಯನ್ನು ಒಂದು ರೀತಿಯಲ್ಲಿ ಅವಮಾನಿಸಿದರು. ಮುಂದಿನ ವರ್ಷಗಳಲ್ಲಿ ಇಂತಹ ಅವ್ಯವಸ್ಥೆ ಆಗದಂತೆ ಜಿಲ್ಲಾಡಳಿತ ಗಮನ ಹರಿಸಲಿ.
-ಬೂಕನಕೆರೆ ವಿಜೇಂದ್ರ, ಮೈಸೂರು.

ನಿಗದಿತ ಸ್ಥಳದಲ್ಲಿ ನಿಲ್ಲದ ಬಸ್

ಮೈಸೂರು ನಗರ ಬಸ್ ನಿಲ್ದಾಣದಿಂದ ಬೋಗಾದಿಗೆ ಸಂಚರಿಸುವ ರೂಟ್ ನಂ.೫೧ಬಿ ಕಡೇ ಸ್ಟಾಪ್‌ನಿಂದ  ಮುಂದಿನ ಸ್ಟಾಪ್ ಇರುವ ಜಾಗದಲ್ಲಿ ನಿಲುಗಡೆಗೊಳಿಸುತ್ತಿಲ್ಲ. ಯಾರಾದರೂ ಒಬ್ಬ ಪ್ರಯಾಣಿಕ ಅಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರೆ ಬಸ್ ನಿಲ್ಲಸದೇ ವೇಗವಾಗಿ ಹೋಗುತ್ತಾರೆ. ಒಂದು ವೇಳೆ ನಿಲ್ಲಿಸಿದರೆ ಆ ಪ್ರಯಾಣಿಕರನ್ನು ಚಾಲಕ ದುರುಗುಟ್ಟಿ ನೋಡುವುದು ಸರ್ವೇಸಾಮಾನ್ಯವಾಗಿದೆ. ಅಲ್ಲಿ ಬಸ್ ನಿಲ್ದಾಣ ಇರುವುದರಿಂದ ಒಬ್ಬರೋ ಅಥವಾ ಇಬ್ಬರೋ ಬಸ್ಸಿಗಾಗಿ ಕಾಯುತ್ತಿರುತ್ತಾರೆ. ದಯವಿಟ್ಟು ಇನ್ನು ಮುಂದಾದರೂ ಬಸ್ಸಿನ ಚಾಲಕರು ನಿಲುಗಡೆಯ ಸ್ಥಳದಲ್ಲಿ ಬಸ್ಸನ್ನು ನಿಲ್ಲಿಸಲಿ.
-ರಾಘವೇಂದ್ರ, ಬೋಗಾದಿ ೨ನೇ ಹಂತ, ಮೈಸೂರು.

ಧೂಳು?

ರಷ್ಯಾ-ಉಕ್ರೇನ್ ಯುದ್ಧದಲ್ಲಿ
ಉಕ್ರೇನ್ ಮೇಲುಗೈಯಂತೆ!
ಆಗಬಾರದೇಕೆ?
ಬಡವಂ ಬಲ್ಲಿದನಾಗನೇ
ಹರಹರಾ…?’
ಸಂಸ್ಕೃತದ ಒಂದು ಸುಭಾಷಿತ:
ಕೇವಲ ಧೂಳು ಎಂದು ಕಾಲಿನಿಂದೊದೆದರೆ,
ಅದು ಹಾರಿ, ತಲೆಯ ಮೇಲೆ
ಕುಳಿತುಕೊಳ್ಳುತ್ತದೆ!
– ಸಿಪಿಕೆ, ಮೈಸೂರು.
andolana

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

2 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

2 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

3 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

3 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

4 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

4 hours ago