ಎಡಿಟೋರಿಯಲ್

ಓದುಗರ ಪತ್ರ : 28 ಬುಧವಾರ 2022

ಯುವ ಸಾಧಕರೇ ಉದ್ಘಾಟಿಸಲಿ

ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. ಯುವ ದಸರಾ ಉದ್ಘಾಟನೆಗೆ ಸಾಧಕ ಯುವ ರೈತರನ್ನು, ಯುವ ವಿಜ್ಞಾನಿಯನ್ನು ಅಥವಾ ಯುವ ಸೈನಿಕರನ್ನು ಕರೆಯುವ ಪರಿಪಾಟ ಬೆಳೆಯಲಿ. ಅದರ ಮೂಲಕ ಯುವಕರಿಗೆ ತಮ್ಮ ಜೀವನದ ಮಾದರಿ ಯಾರಾಗಬೇಕು? ಎಂದು ತಿಳಿಯುತ್ತದೆ. ಹಾಗೆಯೇ ಸಾಧಿಸಿದ ಯುವಕರನ್ನು ಸಮಾಜ ಗುರುತಿಸುವುದರಿಂದ ಅಂತಹವರು ಹೆಚ್ಚಿನ ಕೆಲಸದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡುತ್ತಾರೆ. ಮನರಂಜನಾ ಕಾರ್ಯಕ್ರಮಗಳಿಗೆ ಸಿನಿಮಾ ನಟರನ್ನು ಕರೆಸಿ ಕಾರ್ಯಕ್ರಮದ ಆಕರ್ಷಣೆ ಹೆಚ್ಚಿಸಿಕೊಳ್ಳಿ. ಆದರೆ ಯುವ ದಸರಾ ಉದ್ಘಾಟನೆ ಗೆ ಸಾಧಕರೇ ಬರಲಿ.
-ಎಸ್.ರವಿ,   ಮೈಸೂರು.


ಜನಪ್ರತಿನಿಧಿಗಳಿಗೆ ಅವಮಾನ?
ನಾಡ ಹಬ್ಬ ‘ಮೈಸೂರು ದಸರಾ’ ಉದ್ಘಾಟನಾ ಸಮಾರಂಭವು ‘ಮೈಸೂರಿನ ಜನಪ್ರಧಿನಿಧಿಗಳನ್ನು  ಅವಮಾನ ಮಾಡಿದಂತಿತ್ತು. ಮೈಸೂರಿನ ಪ್ರಥಮ ಪ್ರಜೆ ಮೇಯರ್ ಆಗಲಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಿಗಾಗಲಿ, ವೇದಿಕೆ ಮೇಲೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸದೇ ಮೈಸೂರಿನ ಜನರಿಗೇ ಜಿಲ್ಲಾಡಳಿತ ಅವಮಾನ ಮಾಡಿದೆ. ವೇದಿಕೆಯ ಮೇಲೆ ಮೈಸೂರಿನ ಪ್ರಥಮ ಪ್ರಜೆ ಇರಬೇಕೆಂಬ ಕನಿಷ್ಠ ಜ್ಞಾನವೂ ಜಿಲ್ಲಾಡಳಿತಕ್ಕೆ ಇರಲಿಲ್ಲವೇ, ಅಧ್ಯಕ್ಷತೆ ವಹಿಸಬೇಕಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರನ್ನು ಕೈಬಿಟ್ಟಿದ್ದೇಕೆ? ಇನ್ನು ರಾಷ್ಟ್ರಪತಿಯವರಿಗೆ, ಮೈಸೂರಿನ ಮಲ್ಲಿಗೆ ಹಾರ ಹಾಕಿ, ಮೈಸೂರು ಸಿಲ್ಕ್ ಶಾಲು ಹೊದಿಸಿ ಗೌರವಿಸಬೇಕಾಗಿತ್ತು, ಸಚಿವೆ ಶೋಭಾ ಕರಂದ್ಲಾಜೆ ಪ್ಲ್ಯಾಸ್ಟಿಕ್‌ನಿಂದ ತಯಾರಿಸಿದ ಹಾರ ಹಾಕಿದರೆ, ರಾಜ್ಯಪಾಲರು ಶಾಲನ್ನು ರಾಷ್ಟ್ರಪತಿಯವರ ಕೈಗೆ ನೀಡಿ, ಮೈಸೂರಿನ ಜನತೆಯನ್ನು ಒಂದು ರೀತಿಯಲ್ಲಿ ಅವಮಾನಿಸಿದರು. ಮುಂದಿನ ವರ್ಷಗಳಲ್ಲಿ ಇಂತಹ ಅವ್ಯವಸ್ಥೆ ಆಗದಂತೆ ಜಿಲ್ಲಾಡಳಿತ ಗಮನ ಹರಿಸಲಿ.
-ಬೂಕನಕೆರೆ ವಿಜೇಂದ್ರ, ಮೈಸೂರು.

ನಿಗದಿತ ಸ್ಥಳದಲ್ಲಿ ನಿಲ್ಲದ ಬಸ್

ಮೈಸೂರು ನಗರ ಬಸ್ ನಿಲ್ದಾಣದಿಂದ ಬೋಗಾದಿಗೆ ಸಂಚರಿಸುವ ರೂಟ್ ನಂ.೫೧ಬಿ ಕಡೇ ಸ್ಟಾಪ್‌ನಿಂದ  ಮುಂದಿನ ಸ್ಟಾಪ್ ಇರುವ ಜಾಗದಲ್ಲಿ ನಿಲುಗಡೆಗೊಳಿಸುತ್ತಿಲ್ಲ. ಯಾರಾದರೂ ಒಬ್ಬ ಪ್ರಯಾಣಿಕ ಅಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರೆ ಬಸ್ ನಿಲ್ಲಸದೇ ವೇಗವಾಗಿ ಹೋಗುತ್ತಾರೆ. ಒಂದು ವೇಳೆ ನಿಲ್ಲಿಸಿದರೆ ಆ ಪ್ರಯಾಣಿಕರನ್ನು ಚಾಲಕ ದುರುಗುಟ್ಟಿ ನೋಡುವುದು ಸರ್ವೇಸಾಮಾನ್ಯವಾಗಿದೆ. ಅಲ್ಲಿ ಬಸ್ ನಿಲ್ದಾಣ ಇರುವುದರಿಂದ ಒಬ್ಬರೋ ಅಥವಾ ಇಬ್ಬರೋ ಬಸ್ಸಿಗಾಗಿ ಕಾಯುತ್ತಿರುತ್ತಾರೆ. ದಯವಿಟ್ಟು ಇನ್ನು ಮುಂದಾದರೂ ಬಸ್ಸಿನ ಚಾಲಕರು ನಿಲುಗಡೆಯ ಸ್ಥಳದಲ್ಲಿ ಬಸ್ಸನ್ನು ನಿಲ್ಲಿಸಲಿ.
-ರಾಘವೇಂದ್ರ, ಬೋಗಾದಿ ೨ನೇ ಹಂತ, ಮೈಸೂರು.

ಧೂಳು?

ರಷ್ಯಾ-ಉಕ್ರೇನ್ ಯುದ್ಧದಲ್ಲಿ
ಉಕ್ರೇನ್ ಮೇಲುಗೈಯಂತೆ!
ಆಗಬಾರದೇಕೆ?
ಬಡವಂ ಬಲ್ಲಿದನಾಗನೇ
ಹರಹರಾ…?’
ಸಂಸ್ಕೃತದ ಒಂದು ಸುಭಾಷಿತ:
ಕೇವಲ ಧೂಳು ಎಂದು ಕಾಲಿನಿಂದೊದೆದರೆ,
ಅದು ಹಾರಿ, ತಲೆಯ ಮೇಲೆ
ಕುಳಿತುಕೊಳ್ಳುತ್ತದೆ!
– ಸಿಪಿಕೆ, ಮೈಸೂರು.
andolana

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

30 mins ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

3 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

5 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

5 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

6 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

9 hours ago