ಯುವ ಸಾಧಕರೇ ಉದ್ಘಾಟಿಸಲಿ
ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. ಯುವ ದಸರಾ ಉದ್ಘಾಟನೆಗೆ ಸಾಧಕ ಯುವ ರೈತರನ್ನು, ಯುವ ವಿಜ್ಞಾನಿಯನ್ನು ಅಥವಾ ಯುವ ಸೈನಿಕರನ್ನು ಕರೆಯುವ ಪರಿಪಾಟ ಬೆಳೆಯಲಿ. ಅದರ ಮೂಲಕ ಯುವಕರಿಗೆ ತಮ್ಮ ಜೀವನದ ಮಾದರಿ ಯಾರಾಗಬೇಕು? ಎಂದು ತಿಳಿಯುತ್ತದೆ. ಹಾಗೆಯೇ ಸಾಧಿಸಿದ ಯುವಕರನ್ನು ಸಮಾಜ ಗುರುತಿಸುವುದರಿಂದ ಅಂತಹವರು ಹೆಚ್ಚಿನ ಕೆಲಸದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡುತ್ತಾರೆ. ಮನರಂಜನಾ ಕಾರ್ಯಕ್ರಮಗಳಿಗೆ ಸಿನಿಮಾ ನಟರನ್ನು ಕರೆಸಿ ಕಾರ್ಯಕ್ರಮದ ಆಕರ್ಷಣೆ ಹೆಚ್ಚಿಸಿಕೊಳ್ಳಿ. ಆದರೆ ಯುವ ದಸರಾ ಉದ್ಘಾಟನೆ ಗೆ ಸಾಧಕರೇ ಬರಲಿ.
-ಎಸ್.ರವಿ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…