ತುರ್ತಾಗಿ ಮಾಡುವ ಅಗತ್ಯವಿತ್ತೇ?
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ ಸಹ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಮಂಗಳವಾರದವರೆಗೆ ದಾಳಿ ಮತ್ತು ಬಂಧನಗಳು ನಡೆದಿವೆ. ಬುಧವಾರ ಮುಂಜಾನೆಯೇ ಪಿಎಫ್ಐ ನಿಷೇಧಿಸಿದ ಆಜ್ಞೆ ಹೊರಬಿದ್ದಿದೆ. ಕೇಂದ್ರ ಸರ್ಕಾರ ಇಷ್ಟೊಂದು ತರಾತುರಿಯಲ್ಲಿ ನಿಷೇಧ ಮಾಡುವ ಅಗತ್ಯವಿತ್ತೇ? ಬಂಧಿತರನ್ನು ವಿಚಾರಣೆಗೆ ಒಳಪಡಿಸಿ, ಬಂಧಿತರಿಂದ ಪಡೆದ ಸಾಕ್ಷ್ಯಗಳ ಸತ್ಯಶೋಧನೆ ಮಾಡಿ ನಂತರ ನಿಷೇಧ ಮಾಡಬಹುದಿತ್ತು. ಶಾಂತಿ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವುದಕ್ಕೆ ಯಾರದೂ ತಕರಾರು ಇರುವುದಿಲ್ಲ. ಆದರೆ, ತರಾತುರಿಯಲ್ಲಿ ನಿಷೇಧ ಮಾಡುವುದರ ಬದಲು ತನಿಖೆ ಪೂರ್ಣಗೊಳಿಸಿ ಮಾಹಿತಿಯನ್ನು ಸಾರ್ವಜನಿಕರ ಮುಂದಿಟ್ಟು ನಿಷೇಧ ಮಾಡಿದರೆ ಸರ್ಕಾರದ ಬಗ್ಗೆ ಯಾವ ಅನುಮಾನವೂ ಬಾರದು. ಸರ್ಕಾರ ತಾನು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಸಾಬೀತು ಮಾಡಲು ಇಂತಹ ಸಂದರ್ಭಗಳು ಒದಗಿಬರುತ್ತವೆ. ಅದನ್ನು ಸರ್ಕಾರ ಬಳಸಿಕೊಳ್ಳಬೇಕು.
-ನಂದಕುಮಾರ್, ಸರಸ್ವತಿಪುರಂ, ಮೈಸೂರು.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…