ದಸರಾ ರಜೆಯ ಮಜ ಹೀಗಿರಲಿ!
ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್ ೧೯ರ ಭಯದಿಂದಾಗಿ ಶಾಲೆಗೆ ರಜೆ ನೀಡಿ ಮಕ್ಕಳು ಗಳಿಸಬೇಕಾದ ಸಾಮರ್ಥ್ಯಗಳೆಲ್ಲವನ್ನೂ ಪಡೆಯಲು ಸಾಧ್ಯವಾಗಿಲ್ಲದ ಕಾರಣ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಸರ್ಕಾರ ಆಚರಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಹಿಂದೆ ಇದ್ದಂತಹ ಒಂದು ತಿಂಗಳ ದಸರಾ ರಜೆಯನ್ನು ೧೪ ದಿನಗಳಿಗೆ ಕಡಿತಗೊಳಿಸಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತನ್ನು ಸರ್ಕಾರ ನೀಡಿದೆ. ಶಾಲೆಯಲ್ಲಿ ಮಕ್ಕಳು ಇದ್ದಾಗ ಶಾಲಾ ಪಠ್ಯ ವಿಷಯಕ್ಕೆ ಸಂಬಂಧಪಟ್ಟಂತೆ ಮಕ್ಕಳ ನಿರಂತರ ಕಲಿಕೆ ಇದ್ದೇ ಇರುತ್ತದೆ. ಆದರೆ ದಸರಾ ರಜೆಯ ಮಜವನ್ನು ಮಕ್ಕಳು ಅರ್ಥಪೂರ್ಣವಾಗಿ ಆಚರಿಸದೆ ಇದ್ದರೆ ಹೇಗೆ? ರಜಾ ಅವಧಿಯಲ್ಲಿ ಮಕ್ಕಳಿಗೆ ಒಳಾಂಗಣ ಕ್ರೀಡೆಗಳಿಗಿಂತ ಹೊರಾಂಗಣ ಕ್ರೀಡೆಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಗಾಳಿಪಟ ಆಡಿಸುವುದು, ಗೋಲಿ ಗಜ್ಜುಗ ಆಡುವುದು, ಚಿನ್ನಿದಾಂಡು, ಸಂಬಂಧಿಕರ ಊರುಗಳಿಗೆ ಸುತ್ತಾಟ, ಅಜ್ಜ ಅಜ್ಜಿಯರಿಂದ ಕಥೆ ಕಲಿಯುವುದು, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿಕೆ, ಜಾತ್ರೆ ಹಾಗೂ ಉತ್ಸವಗಳಲ್ಲಿ ನಾಟಕವನ್ನು ನೋಡಿ ಸಂಭ್ರಮಿಸುವುದು… ಈ ರೀತಿಯ ಹತ್ತು ಹಲವು ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳು ರಜಾ ಅವಧಿಯಲ್ಲಿ ಭಾಗಿಯಾದರೆ ಎಷ್ಟೊಂದು ಚೆಂದ ಅಲ್ಲವೇ? ಇದರಿಂದ ಮಕ್ಕಳು ಒತ್ತಡ ರಹಿತವಾಗಿ ಮೋಜಿನ ಜೊತೆ ರಜೆಯ ಮಜವನ್ನು ಅನುಭವಿಸಿದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ರಸ್ತೆಗಳ ಒತ್ತುವರಿ!
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.
ನಾಡಹಬ್ಬ ಎಂದು ಘೋಷಿಸಿದ್ದು ಅರಸರು!
-ಜಾಕೀರ್ ಹುಸೇನ್, ಅಧ್ಯಕ್ಷರು, ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ, ಮೈಸೂರು.
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…