ದಸರಾ ರಜೆಯ ಮಜ ಹೀಗಿರಲಿ!
ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್ ೧೯ರ ಭಯದಿಂದಾಗಿ ಶಾಲೆಗೆ ರಜೆ ನೀಡಿ ಮಕ್ಕಳು ಗಳಿಸಬೇಕಾದ ಸಾಮರ್ಥ್ಯಗಳೆಲ್ಲವನ್ನೂ ಪಡೆಯಲು ಸಾಧ್ಯವಾಗಿಲ್ಲದ ಕಾರಣ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಸರ್ಕಾರ ಆಚರಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಹಿಂದೆ ಇದ್ದಂತಹ ಒಂದು ತಿಂಗಳ ದಸರಾ ರಜೆಯನ್ನು ೧೪ ದಿನಗಳಿಗೆ ಕಡಿತಗೊಳಿಸಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತನ್ನು ಸರ್ಕಾರ ನೀಡಿದೆ. ಶಾಲೆಯಲ್ಲಿ ಮಕ್ಕಳು ಇದ್ದಾಗ ಶಾಲಾ ಪಠ್ಯ ವಿಷಯಕ್ಕೆ ಸಂಬಂಧಪಟ್ಟಂತೆ ಮಕ್ಕಳ ನಿರಂತರ ಕಲಿಕೆ ಇದ್ದೇ ಇರುತ್ತದೆ. ಆದರೆ ದಸರಾ ರಜೆಯ ಮಜವನ್ನು ಮಕ್ಕಳು ಅರ್ಥಪೂರ್ಣವಾಗಿ ಆಚರಿಸದೆ ಇದ್ದರೆ ಹೇಗೆ? ರಜಾ ಅವಧಿಯಲ್ಲಿ ಮಕ್ಕಳಿಗೆ ಒಳಾಂಗಣ ಕ್ರೀಡೆಗಳಿಗಿಂತ ಹೊರಾಂಗಣ ಕ್ರೀಡೆಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಗಾಳಿಪಟ ಆಡಿಸುವುದು, ಗೋಲಿ ಗಜ್ಜುಗ ಆಡುವುದು, ಚಿನ್ನಿದಾಂಡು, ಸಂಬಂಧಿಕರ ಊರುಗಳಿಗೆ ಸುತ್ತಾಟ, ಅಜ್ಜ ಅಜ್ಜಿಯರಿಂದ ಕಥೆ ಕಲಿಯುವುದು, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿಕೆ, ಜಾತ್ರೆ ಹಾಗೂ ಉತ್ಸವಗಳಲ್ಲಿ ನಾಟಕವನ್ನು ನೋಡಿ ಸಂಭ್ರಮಿಸುವುದು… ಈ ರೀತಿಯ ಹತ್ತು ಹಲವು ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳು ರಜಾ ಅವಧಿಯಲ್ಲಿ ಭಾಗಿಯಾದರೆ ಎಷ್ಟೊಂದು ಚೆಂದ ಅಲ್ಲವೇ? ಇದರಿಂದ ಮಕ್ಕಳು ಒತ್ತಡ ರಹಿತವಾಗಿ ಮೋಜಿನ ಜೊತೆ ರಜೆಯ ಮಜವನ್ನು ಅನುಭವಿಸಿದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ರಸ್ತೆಗಳ ಒತ್ತುವರಿ!
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.
ನಾಡಹಬ್ಬ ಎಂದು ಘೋಷಿಸಿದ್ದು ಅರಸರು!
-ಜಾಕೀರ್ ಹುಸೇನ್, ಅಧ್ಯಕ್ಷರು, ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ, ಮೈಸೂರು.
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…