ದಸರಾ ರಜೆಯ ಮಜ ಹೀಗಿರಲಿ!
ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್ ೧೯ರ ಭಯದಿಂದಾಗಿ ಶಾಲೆಗೆ ರಜೆ ನೀಡಿ ಮಕ್ಕಳು ಗಳಿಸಬೇಕಾದ ಸಾಮರ್ಥ್ಯಗಳೆಲ್ಲವನ್ನೂ ಪಡೆಯಲು ಸಾಧ್ಯವಾಗಿಲ್ಲದ ಕಾರಣ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಸರ್ಕಾರ ಆಚರಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಹಿಂದೆ ಇದ್ದಂತಹ ಒಂದು ತಿಂಗಳ ದಸರಾ ರಜೆಯನ್ನು ೧೪ ದಿನಗಳಿಗೆ ಕಡಿತಗೊಳಿಸಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತನ್ನು ಸರ್ಕಾರ ನೀಡಿದೆ. ಶಾಲೆಯಲ್ಲಿ ಮಕ್ಕಳು ಇದ್ದಾಗ ಶಾಲಾ ಪಠ್ಯ ವಿಷಯಕ್ಕೆ ಸಂಬಂಧಪಟ್ಟಂತೆ ಮಕ್ಕಳ ನಿರಂತರ ಕಲಿಕೆ ಇದ್ದೇ ಇರುತ್ತದೆ. ಆದರೆ ದಸರಾ ರಜೆಯ ಮಜವನ್ನು ಮಕ್ಕಳು ಅರ್ಥಪೂರ್ಣವಾಗಿ ಆಚರಿಸದೆ ಇದ್ದರೆ ಹೇಗೆ? ರಜಾ ಅವಧಿಯಲ್ಲಿ ಮಕ್ಕಳಿಗೆ ಒಳಾಂಗಣ ಕ್ರೀಡೆಗಳಿಗಿಂತ ಹೊರಾಂಗಣ ಕ್ರೀಡೆಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಗಾಳಿಪಟ ಆಡಿಸುವುದು, ಗೋಲಿ ಗಜ್ಜುಗ ಆಡುವುದು, ಚಿನ್ನಿದಾಂಡು, ಸಂಬಂಧಿಕರ ಊರುಗಳಿಗೆ ಸುತ್ತಾಟ, ಅಜ್ಜ ಅಜ್ಜಿಯರಿಂದ ಕಥೆ ಕಲಿಯುವುದು, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿಕೆ, ಜಾತ್ರೆ ಹಾಗೂ ಉತ್ಸವಗಳಲ್ಲಿ ನಾಟಕವನ್ನು ನೋಡಿ ಸಂಭ್ರಮಿಸುವುದು… ಈ ರೀತಿಯ ಹತ್ತು ಹಲವು ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳು ರಜಾ ಅವಧಿಯಲ್ಲಿ ಭಾಗಿಯಾದರೆ ಎಷ್ಟೊಂದು ಚೆಂದ ಅಲ್ಲವೇ? ಇದರಿಂದ ಮಕ್ಕಳು ಒತ್ತಡ ರಹಿತವಾಗಿ ಮೋಜಿನ ಜೊತೆ ರಜೆಯ ಮಜವನ್ನು ಅನುಭವಿಸಿದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ರಸ್ತೆಗಳ ಒತ್ತುವರಿ!
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.
ನಾಡಹಬ್ಬ ಎಂದು ಘೋಷಿಸಿದ್ದು ಅರಸರು!
-ಜಾಕೀರ್ ಹುಸೇನ್, ಅಧ್ಯಕ್ಷರು, ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ, ಮೈಸೂರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…