ದಸರಾ ರಜೆಯ ಮಜ ಹೀಗಿರಲಿ!
ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್ ೧೯ರ ಭಯದಿಂದಾಗಿ ಶಾಲೆಗೆ ರಜೆ ನೀಡಿ ಮಕ್ಕಳು ಗಳಿಸಬೇಕಾದ ಸಾಮರ್ಥ್ಯಗಳೆಲ್ಲವನ್ನೂ ಪಡೆಯಲು ಸಾಧ್ಯವಾಗಿಲ್ಲದ ಕಾರಣ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಸರ್ಕಾರ ಆಚರಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಹಿಂದೆ ಇದ್ದಂತಹ ಒಂದು ತಿಂಗಳ ದಸರಾ ರಜೆಯನ್ನು ೧೪ ದಿನಗಳಿಗೆ ಕಡಿತಗೊಳಿಸಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತನ್ನು ಸರ್ಕಾರ ನೀಡಿದೆ. ಶಾಲೆಯಲ್ಲಿ ಮಕ್ಕಳು ಇದ್ದಾಗ ಶಾಲಾ ಪಠ್ಯ ವಿಷಯಕ್ಕೆ ಸಂಬಂಧಪಟ್ಟಂತೆ ಮಕ್ಕಳ ನಿರಂತರ ಕಲಿಕೆ ಇದ್ದೇ ಇರುತ್ತದೆ. ಆದರೆ ದಸರಾ ರಜೆಯ ಮಜವನ್ನು ಮಕ್ಕಳು ಅರ್ಥಪೂರ್ಣವಾಗಿ ಆಚರಿಸದೆ ಇದ್ದರೆ ಹೇಗೆ? ರಜಾ ಅವಧಿಯಲ್ಲಿ ಮಕ್ಕಳಿಗೆ ಒಳಾಂಗಣ ಕ್ರೀಡೆಗಳಿಗಿಂತ ಹೊರಾಂಗಣ ಕ್ರೀಡೆಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಗಾಳಿಪಟ ಆಡಿಸುವುದು, ಗೋಲಿ ಗಜ್ಜುಗ ಆಡುವುದು, ಚಿನ್ನಿದಾಂಡು, ಸಂಬಂಧಿಕರ ಊರುಗಳಿಗೆ ಸುತ್ತಾಟ, ಅಜ್ಜ ಅಜ್ಜಿಯರಿಂದ ಕಥೆ ಕಲಿಯುವುದು, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿಕೆ, ಜಾತ್ರೆ ಹಾಗೂ ಉತ್ಸವಗಳಲ್ಲಿ ನಾಟಕವನ್ನು ನೋಡಿ ಸಂಭ್ರಮಿಸುವುದು… ಈ ರೀತಿಯ ಹತ್ತು ಹಲವು ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳು ರಜಾ ಅವಧಿಯಲ್ಲಿ ಭಾಗಿಯಾದರೆ ಎಷ್ಟೊಂದು ಚೆಂದ ಅಲ್ಲವೇ? ಇದರಿಂದ ಮಕ್ಕಳು ಒತ್ತಡ ರಹಿತವಾಗಿ ಮೋಜಿನ ಜೊತೆ ರಜೆಯ ಮಜವನ್ನು ಅನುಭವಿಸಿದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ರಸ್ತೆಗಳ ಒತ್ತುವರಿ!
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.
ನಾಡಹಬ್ಬ ಎಂದು ಘೋಷಿಸಿದ್ದು ಅರಸರು!
-ಜಾಕೀರ್ ಹುಸೇನ್, ಅಧ್ಯಕ್ಷರು, ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ, ಮೈಸೂರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…