ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 11 ಮಂಗಳವಾರ 2022

ಪಾರಂಪರಿಕ ತಾಣದಲ್ಲಿ ಅಪಚಾರ ಸಲ್ಲ

ಹೆಸರಾಂತ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಶ್ರೀವೈಷ್ಣವರ ದಿವ್ಯಕ್ಷೇತ್ರ ಮೇಲುಕೋಟೆಯಲ್ಲಿ ಇತ್ತೀಚೆಗೆ ತೆಲುಗು ಸಿನಿಮಾ ಚಿತ್ರೀಕರಣ ತಂಡವೊಂದು ಅಲ್ಲಿಯ ಪ್ರಾಚ್ಯ ಸ್ಮಾರಕವಾದ ರಾಯಗೋಪುರವನ್ನು ಬಾರ್ ಆಗಿ ಪರಿವರ್ತಿಸಿತ್ತು. ಇದರಿಂದ ಐತಿಹಾಸಿಕ ಪರಂಪರೆ ಮತ್ತು ಸಂಸ್ಕೃತಿಗೆ ಧಕ್ಕೆಯಾಗಿದೆ. ಈ ಬಗ್ಗೆ ಅಲ್ಲಿನ ಸ್ಥಳೀಯರು ಈಗಾಗಲೇ ದೂರನ್ನು ದಾಖಲಿಸಿದ್ದಾರೆ. ಪರಂಪರೆ ಹಾಗೂ ಸಂಸ್ಕೃತಿ ಬಿಂಬಿಸುವ ಭವ್ಯ ಸ್ಮಾರಕ ರಾಯಗೋಪುರದ ಬಳಿ ಬಾರ್ ಸೆಟ್ ನಿರ್ಮಿಸಲು ಅನುಮತಿ ನೀಡಿರುವ ಬಗ್ಗೆ ಹಲವಾರು ಗುಮಾನಿಗಳಿವೆ. ಇನ್ನು ಮುಂದೆ ಯಾವುದೇ ಸಿನಿಮಾ ಚಿತ್ರೀಕರಣ ನಡೆಯುವ ಮುನ್ನ ಅನುಮತಿ ಪಡೆಯುವಾಗ ಸಂಬಂಧಿಸಿದ ಇಲಾಖೆ, ಯಾವ ದೃಶ್ಯಕ್ಕಾಗಿ ಚಿತ್ರೀಕರಣ ನಡೆಯುತ್ತಿದೆ ಮತ್ತು ಸಂಸ್ಕೃತಿಗೆ ಧಕ್ಕೆ ತರುವುದಿಲ್ಲ ಎಂಬ ಪ್ರಮಾಣಪತ್ರವನ್ನು ತಂಡದಿಂದ ಪಡೆಯಬೇಕು. ಜತೆಗೆ ಖುದ್ದು ಇಲಾಖೆಯ ಪ್ರತಿನಿಧಿ ಚಿತ್ರೀಕರಣದ ಸಮಯದಲ್ಲಿ ಹಾಜರಿರುವಂತೆ ನಿಯಮ ಜಾರಿಮಾಡಬೇಕು. ಇಲ್ಲದೇ ಹೋದಲ್ಲಿ ದೇವಾಲಯಗಳು ಬಾರ್ ಆಗಿ ಪರಿವರ್ತಿಸಿ, ಭಕ್ತರ ಮನಸ್ಸಿಗೆ ನೋವುಂಟು ಮಾಡುವ ಇಂಥಹ ಘಟನೆಗಳು ಮುಂದೆ ನಡೆಯಬಹುದು. ಅಷ್ಟಕ್ಕೂ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತೇವೆಂದು ಬೊಗಳೆ ಬಿಡುವ ನಿರ್ಮಾಪಕರಿಗೆ ಅಂಥಹದೇ ಒಂದು ಸೆಟ್ ನಿರ್ಮಿಸಲು ತೊಂದರೆ ಏನು ಎಂಬುದೇ ತಿಳಿಯುತ್ತಿಲ್ಲ. ಈ ಬಗ್ಗೆ ತಕ್ಷಣ ಕ್ರಿಯಾಶೀಲರಾದ ಮೇಲುಕೋಟೆಯ ಸ್ಥಳೀಯರಿಗೆ ಅಭಿನಂದನೆಗಳು.

-ವಿಜಯ್ ಹೆಮ್ಮಿಗೆ, ಮೈಸೂರು.


ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಬೆಂಬಲ ಸಿಕ್ಕಿರುವುದು ಆ ಪಕ್ಷಕ್ಕೆ ಸ್ವಲ್ಪ ಸಮಾಧಾನ ತರುವ ವಿಷಯ. ರಾಹುಲ್ ಗಾಂಧಿ ಹೋದಡೆಯೆಲ್ಲಾ ಜನರೊಡನೆ ಬೆರೆತು ಅವರ ಕಷ್ಟ ಸುಖಗಳಿಗೆ ಧ್ವನಿಯಾಗುತ್ತಿದ್ದಾರೆ. ಒಂದು ಗ್ರಾಮದಲ್ಲಿ ಮಳೆ ಬೀಳುತ್ತಿದ್ದರೂ ಸಹ, ವಿಚಲಿತರಾಗದೇ ಸಭೀಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅವರ ವಹಿಸಿಕೊಳ್ಳಲು ನಿರಾಕರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿಯವರಿಗೆ ನೇರವಾಗಿ ಜನರೊಡನೆ ಬೆರೆಯುವ ಹಾಗೂ ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಅವಕಾಶ ಸಿಕ್ಕಿದೆ. ಒಳ್ಳೆಯ ನಾಯಕನಾಗಿ ಬೆಳೆಯಲು ಇದು ಅವರಿಗೆ ಸಹಕಾರಿ. ಇದನ್ನು ಅವರು ಯಶಸ್ವಿಯಾಗಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲಿ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.


ಪೋಲಿಸರಿಗೆ ಕೃತಜ್ಞತೆಗಳು

ವಿಶ್ವ ವಿಖ್ಯಾತ ಮೈಸೂರು ಹತ್ತು ದಿನಗಳ ದಸರಾ ಉತ್ಸವ ಸಂಭ್ರಮ, ಸಡಗರದೊಂದಿಗೆ ಮುಕ್ತಾಯವಾಗಿದೆ. ದಸರಾ ಉತ್ಸವ ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆದಿದ್ದು ಪೊಲೀಸರ ಅವಿರತ ಶ್ರಮದಿಂದಾಗಿ.
ಮೈಸೂರು ಮತ್ತು ನೆರೆಯ ಜಿಲ್ಲೆಗಳಿಂದ ಪೊಲೀಸರು ಆಗಮಿಸಿ, ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಯ್ದಿದ್ದಾರೆ.
ಹಗಲು, ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸಿದ್ದಾರೆ. ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ವರ್ತಿಸಿದ್ದಾರೆ. ಪ್ರವಾಸಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ದಸರಾ ಯಶಸ್ಸಿಗೆ ಕಾರಣರಾದ ಎಲ್ಲಾ ಪೊಲೀಸರಿಗೂ ಕೃತಜ್ಞತೆಗಳು

-ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಡಾಂಬರಿನ ಮೇಲೆ ಡಾಂಬರು!

ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ಕೆಲವು ಚನ್ನಾಗಿದ್ದ ಡಾಂಬರು ರಸ್ತೆಯ ಮೇಲೆ ಮತ್ತೇ ಡಾಂಬರು ಹಾಕಿದ್ದಾರೆ. ಉದಾಹರಣೆಗೆ ಕುವೆಂಪು ನಗರದ ಅಮ್ಮ ಕಾಂಪ್ಲೆಕ್ಸ್ ನಿಂದ, ಆಂದೋಲನ ಸರ್ಕಲ್, ಹೀಗೆ ಇನ್ನೂ ಹಲವಾರು ಕಡೆ ಚೆನ್ನಾಗಿದ್ದ ರಸ್ತೆ ಗೇ ಮತ್ತೆ ಡಾಂಬರು ಹಾಕಿದ್ದಾರೆ, ಆದರೆ ಕಳೆದ ಮೂರು ತಿಂಗಳ ಹಿಂದೆ ಯುಜಿಡಿ ಹೊಸ ಪೈಪ್ ಲೈನ್ ಹಾಕಲು ಆಪೋಲೊ ಆಸ್ಪತ್ರೆ ಮುಂಭಾಗದಿಂದ ಆದಿಚುಂಚನಗಿರಿ ರಸ್ತೆಯ ಕಡೆಯ ತನಕವೂ ರಸ್ತೆಯನ್ನು ಆಗೆದು ಹಾಗೆಯೇ ಬಿಟ್ಟಿರುವುದರಿಂದ, ರಸ್ತೆಯಲ್ಲಿ ಸಾರ್ವಜನಿಕರು ಓಡಾಡದಂತ ಪರಿಸ್ಥಿತಿ ಇದೆ. ಇಲ್ಲಿ ವಾಹನ ಸಂಚಾರಕ್ಕೂ ತೊಂದರೆ ಆಗಿದೆ, ಸಂಚಾರ ಮಾಡುವವರಿಗೆ ಅರ್ಧ ಇಂಚು ಧೂಳು ಮುಖಕ್ಕೆ ಮೆತ್ತುಕೊಳ್ಳುತ್ತದೆ. ಇಲ್ಲಿ ಓಡಾಡುವ ಸಾರ್ವಜನಿಕರು ನಗರ ಪಾಲಿಕೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. ದಯಮಾಡಿ ಈ ರಸ್ತೆಗೆ ಕೂಡಲೇ ಡಾಂಬರು ಹಾಕಿಸಿ ಸಾರ್ವಜನಿಕರು ಓಡಾಡಲು ಅನುಕೂಲ ಮಾಡಿಕೊಡಬೇಕು.

-ಬೂಕನಕೆರೆ ವಿಜೇಂದ್ರ, ಮೈಸೂರು.

andolana

Share
Published by
andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago