ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 11 ಮಂಗಳವಾರ 2022

ಪಾರಂಪರಿಕ ತಾಣದಲ್ಲಿ ಅಪಚಾರ ಸಲ್ಲ

ಹೆಸರಾಂತ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಶ್ರೀವೈಷ್ಣವರ ದಿವ್ಯಕ್ಷೇತ್ರ ಮೇಲುಕೋಟೆಯಲ್ಲಿ ಇತ್ತೀಚೆಗೆ ತೆಲುಗು ಸಿನಿಮಾ ಚಿತ್ರೀಕರಣ ತಂಡವೊಂದು ಅಲ್ಲಿಯ ಪ್ರಾಚ್ಯ ಸ್ಮಾರಕವಾದ ರಾಯಗೋಪುರವನ್ನು ಬಾರ್ ಆಗಿ ಪರಿವರ್ತಿಸಿತ್ತು. ಇದರಿಂದ ಐತಿಹಾಸಿಕ ಪರಂಪರೆ ಮತ್ತು ಸಂಸ್ಕೃತಿಗೆ ಧಕ್ಕೆಯಾಗಿದೆ. ಈ ಬಗ್ಗೆ ಅಲ್ಲಿನ ಸ್ಥಳೀಯರು ಈಗಾಗಲೇ ದೂರನ್ನು ದಾಖಲಿಸಿದ್ದಾರೆ. ಪರಂಪರೆ ಹಾಗೂ ಸಂಸ್ಕೃತಿ ಬಿಂಬಿಸುವ ಭವ್ಯ ಸ್ಮಾರಕ ರಾಯಗೋಪುರದ ಬಳಿ ಬಾರ್ ಸೆಟ್ ನಿರ್ಮಿಸಲು ಅನುಮತಿ ನೀಡಿರುವ ಬಗ್ಗೆ ಹಲವಾರು ಗುಮಾನಿಗಳಿವೆ. ಇನ್ನು ಮುಂದೆ ಯಾವುದೇ ಸಿನಿಮಾ ಚಿತ್ರೀಕರಣ ನಡೆಯುವ ಮುನ್ನ ಅನುಮತಿ ಪಡೆಯುವಾಗ ಸಂಬಂಧಿಸಿದ ಇಲಾಖೆ, ಯಾವ ದೃಶ್ಯಕ್ಕಾಗಿ ಚಿತ್ರೀಕರಣ ನಡೆಯುತ್ತಿದೆ ಮತ್ತು ಸಂಸ್ಕೃತಿಗೆ ಧಕ್ಕೆ ತರುವುದಿಲ್ಲ ಎಂಬ ಪ್ರಮಾಣಪತ್ರವನ್ನು ತಂಡದಿಂದ ಪಡೆಯಬೇಕು. ಜತೆಗೆ ಖುದ್ದು ಇಲಾಖೆಯ ಪ್ರತಿನಿಧಿ ಚಿತ್ರೀಕರಣದ ಸಮಯದಲ್ಲಿ ಹಾಜರಿರುವಂತೆ ನಿಯಮ ಜಾರಿಮಾಡಬೇಕು. ಇಲ್ಲದೇ ಹೋದಲ್ಲಿ ದೇವಾಲಯಗಳು ಬಾರ್ ಆಗಿ ಪರಿವರ್ತಿಸಿ, ಭಕ್ತರ ಮನಸ್ಸಿಗೆ ನೋವುಂಟು ಮಾಡುವ ಇಂಥಹ ಘಟನೆಗಳು ಮುಂದೆ ನಡೆಯಬಹುದು. ಅಷ್ಟಕ್ಕೂ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತೇವೆಂದು ಬೊಗಳೆ ಬಿಡುವ ನಿರ್ಮಾಪಕರಿಗೆ ಅಂಥಹದೇ ಒಂದು ಸೆಟ್ ನಿರ್ಮಿಸಲು ತೊಂದರೆ ಏನು ಎಂಬುದೇ ತಿಳಿಯುತ್ತಿಲ್ಲ. ಈ ಬಗ್ಗೆ ತಕ್ಷಣ ಕ್ರಿಯಾಶೀಲರಾದ ಮೇಲುಕೋಟೆಯ ಸ್ಥಳೀಯರಿಗೆ ಅಭಿನಂದನೆಗಳು.

-ವಿಜಯ್ ಹೆಮ್ಮಿಗೆ, ಮೈಸೂರು.


ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಬೆಂಬಲ ಸಿಕ್ಕಿರುವುದು ಆ ಪಕ್ಷಕ್ಕೆ ಸ್ವಲ್ಪ ಸಮಾಧಾನ ತರುವ ವಿಷಯ. ರಾಹುಲ್ ಗಾಂಧಿ ಹೋದಡೆಯೆಲ್ಲಾ ಜನರೊಡನೆ ಬೆರೆತು ಅವರ ಕಷ್ಟ ಸುಖಗಳಿಗೆ ಧ್ವನಿಯಾಗುತ್ತಿದ್ದಾರೆ. ಒಂದು ಗ್ರಾಮದಲ್ಲಿ ಮಳೆ ಬೀಳುತ್ತಿದ್ದರೂ ಸಹ, ವಿಚಲಿತರಾಗದೇ ಸಭೀಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅವರ ವಹಿಸಿಕೊಳ್ಳಲು ನಿರಾಕರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿಯವರಿಗೆ ನೇರವಾಗಿ ಜನರೊಡನೆ ಬೆರೆಯುವ ಹಾಗೂ ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಅವಕಾಶ ಸಿಕ್ಕಿದೆ. ಒಳ್ಳೆಯ ನಾಯಕನಾಗಿ ಬೆಳೆಯಲು ಇದು ಅವರಿಗೆ ಸಹಕಾರಿ. ಇದನ್ನು ಅವರು ಯಶಸ್ವಿಯಾಗಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲಿ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.


ಪೋಲಿಸರಿಗೆ ಕೃತಜ್ಞತೆಗಳು

ವಿಶ್ವ ವಿಖ್ಯಾತ ಮೈಸೂರು ಹತ್ತು ದಿನಗಳ ದಸರಾ ಉತ್ಸವ ಸಂಭ್ರಮ, ಸಡಗರದೊಂದಿಗೆ ಮುಕ್ತಾಯವಾಗಿದೆ. ದಸರಾ ಉತ್ಸವ ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆದಿದ್ದು ಪೊಲೀಸರ ಅವಿರತ ಶ್ರಮದಿಂದಾಗಿ.
ಮೈಸೂರು ಮತ್ತು ನೆರೆಯ ಜಿಲ್ಲೆಗಳಿಂದ ಪೊಲೀಸರು ಆಗಮಿಸಿ, ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಯ್ದಿದ್ದಾರೆ.
ಹಗಲು, ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸಿದ್ದಾರೆ. ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ವರ್ತಿಸಿದ್ದಾರೆ. ಪ್ರವಾಸಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ದಸರಾ ಯಶಸ್ಸಿಗೆ ಕಾರಣರಾದ ಎಲ್ಲಾ ಪೊಲೀಸರಿಗೂ ಕೃತಜ್ಞತೆಗಳು

-ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಡಾಂಬರಿನ ಮೇಲೆ ಡಾಂಬರು!

ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ಕೆಲವು ಚನ್ನಾಗಿದ್ದ ಡಾಂಬರು ರಸ್ತೆಯ ಮೇಲೆ ಮತ್ತೇ ಡಾಂಬರು ಹಾಕಿದ್ದಾರೆ. ಉದಾಹರಣೆಗೆ ಕುವೆಂಪು ನಗರದ ಅಮ್ಮ ಕಾಂಪ್ಲೆಕ್ಸ್ ನಿಂದ, ಆಂದೋಲನ ಸರ್ಕಲ್, ಹೀಗೆ ಇನ್ನೂ ಹಲವಾರು ಕಡೆ ಚೆನ್ನಾಗಿದ್ದ ರಸ್ತೆ ಗೇ ಮತ್ತೆ ಡಾಂಬರು ಹಾಕಿದ್ದಾರೆ, ಆದರೆ ಕಳೆದ ಮೂರು ತಿಂಗಳ ಹಿಂದೆ ಯುಜಿಡಿ ಹೊಸ ಪೈಪ್ ಲೈನ್ ಹಾಕಲು ಆಪೋಲೊ ಆಸ್ಪತ್ರೆ ಮುಂಭಾಗದಿಂದ ಆದಿಚುಂಚನಗಿರಿ ರಸ್ತೆಯ ಕಡೆಯ ತನಕವೂ ರಸ್ತೆಯನ್ನು ಆಗೆದು ಹಾಗೆಯೇ ಬಿಟ್ಟಿರುವುದರಿಂದ, ರಸ್ತೆಯಲ್ಲಿ ಸಾರ್ವಜನಿಕರು ಓಡಾಡದಂತ ಪರಿಸ್ಥಿತಿ ಇದೆ. ಇಲ್ಲಿ ವಾಹನ ಸಂಚಾರಕ್ಕೂ ತೊಂದರೆ ಆಗಿದೆ, ಸಂಚಾರ ಮಾಡುವವರಿಗೆ ಅರ್ಧ ಇಂಚು ಧೂಳು ಮುಖಕ್ಕೆ ಮೆತ್ತುಕೊಳ್ಳುತ್ತದೆ. ಇಲ್ಲಿ ಓಡಾಡುವ ಸಾರ್ವಜನಿಕರು ನಗರ ಪಾಲಿಕೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. ದಯಮಾಡಿ ಈ ರಸ್ತೆಗೆ ಕೂಡಲೇ ಡಾಂಬರು ಹಾಕಿಸಿ ಸಾರ್ವಜನಿಕರು ಓಡಾಡಲು ಅನುಕೂಲ ಮಾಡಿಕೊಡಬೇಕು.

-ಬೂಕನಕೆರೆ ವಿಜೇಂದ್ರ, ಮೈಸೂರು.

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

10 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

10 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

12 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

12 hours ago