ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 11 ಮಂಗಳವಾರ 2022

ಪಾರಂಪರಿಕ ತಾಣದಲ್ಲಿ ಅಪಚಾರ ಸಲ್ಲ

ಹೆಸರಾಂತ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಶ್ರೀವೈಷ್ಣವರ ದಿವ್ಯಕ್ಷೇತ್ರ ಮೇಲುಕೋಟೆಯಲ್ಲಿ ಇತ್ತೀಚೆಗೆ ತೆಲುಗು ಸಿನಿಮಾ ಚಿತ್ರೀಕರಣ ತಂಡವೊಂದು ಅಲ್ಲಿಯ ಪ್ರಾಚ್ಯ ಸ್ಮಾರಕವಾದ ರಾಯಗೋಪುರವನ್ನು ಬಾರ್ ಆಗಿ ಪರಿವರ್ತಿಸಿತ್ತು. ಇದರಿಂದ ಐತಿಹಾಸಿಕ ಪರಂಪರೆ ಮತ್ತು ಸಂಸ್ಕೃತಿಗೆ ಧಕ್ಕೆಯಾಗಿದೆ. ಈ ಬಗ್ಗೆ ಅಲ್ಲಿನ ಸ್ಥಳೀಯರು ಈಗಾಗಲೇ ದೂರನ್ನು ದಾಖಲಿಸಿದ್ದಾರೆ. ಪರಂಪರೆ ಹಾಗೂ ಸಂಸ್ಕೃತಿ ಬಿಂಬಿಸುವ ಭವ್ಯ ಸ್ಮಾರಕ ರಾಯಗೋಪುರದ ಬಳಿ ಬಾರ್ ಸೆಟ್ ನಿರ್ಮಿಸಲು ಅನುಮತಿ ನೀಡಿರುವ ಬಗ್ಗೆ ಹಲವಾರು ಗುಮಾನಿಗಳಿವೆ. ಇನ್ನು ಮುಂದೆ ಯಾವುದೇ ಸಿನಿಮಾ ಚಿತ್ರೀಕರಣ ನಡೆಯುವ ಮುನ್ನ ಅನುಮತಿ ಪಡೆಯುವಾಗ ಸಂಬಂಧಿಸಿದ ಇಲಾಖೆ, ಯಾವ ದೃಶ್ಯಕ್ಕಾಗಿ ಚಿತ್ರೀಕರಣ ನಡೆಯುತ್ತಿದೆ ಮತ್ತು ಸಂಸ್ಕೃತಿಗೆ ಧಕ್ಕೆ ತರುವುದಿಲ್ಲ ಎಂಬ ಪ್ರಮಾಣಪತ್ರವನ್ನು ತಂಡದಿಂದ ಪಡೆಯಬೇಕು. ಜತೆಗೆ ಖುದ್ದು ಇಲಾಖೆಯ ಪ್ರತಿನಿಧಿ ಚಿತ್ರೀಕರಣದ ಸಮಯದಲ್ಲಿ ಹಾಜರಿರುವಂತೆ ನಿಯಮ ಜಾರಿಮಾಡಬೇಕು. ಇಲ್ಲದೇ ಹೋದಲ್ಲಿ ದೇವಾಲಯಗಳು ಬಾರ್ ಆಗಿ ಪರಿವರ್ತಿಸಿ, ಭಕ್ತರ ಮನಸ್ಸಿಗೆ ನೋವುಂಟು ಮಾಡುವ ಇಂಥಹ ಘಟನೆಗಳು ಮುಂದೆ ನಡೆಯಬಹುದು. ಅಷ್ಟಕ್ಕೂ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತೇವೆಂದು ಬೊಗಳೆ ಬಿಡುವ ನಿರ್ಮಾಪಕರಿಗೆ ಅಂಥಹದೇ ಒಂದು ಸೆಟ್ ನಿರ್ಮಿಸಲು ತೊಂದರೆ ಏನು ಎಂಬುದೇ ತಿಳಿಯುತ್ತಿಲ್ಲ. ಈ ಬಗ್ಗೆ ತಕ್ಷಣ ಕ್ರಿಯಾಶೀಲರಾದ ಮೇಲುಕೋಟೆಯ ಸ್ಥಳೀಯರಿಗೆ ಅಭಿನಂದನೆಗಳು.

-ವಿಜಯ್ ಹೆಮ್ಮಿಗೆ, ಮೈಸೂರು.


ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯಾದ್ಯಂತ ಅಭೂತಪೂರ್ವ ಬೆಂಬಲ ಸಿಕ್ಕಿರುವುದು ಆ ಪಕ್ಷಕ್ಕೆ ಸ್ವಲ್ಪ ಸಮಾಧಾನ ತರುವ ವಿಷಯ. ರಾಹುಲ್ ಗಾಂಧಿ ಹೋದಡೆಯೆಲ್ಲಾ ಜನರೊಡನೆ ಬೆರೆತು ಅವರ ಕಷ್ಟ ಸುಖಗಳಿಗೆ ಧ್ವನಿಯಾಗುತ್ತಿದ್ದಾರೆ. ಒಂದು ಗ್ರಾಮದಲ್ಲಿ ಮಳೆ ಬೀಳುತ್ತಿದ್ದರೂ ಸಹ, ವಿಚಲಿತರಾಗದೇ ಸಭೀಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅವರ ವಹಿಸಿಕೊಳ್ಳಲು ನಿರಾಕರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿಯವರಿಗೆ ನೇರವಾಗಿ ಜನರೊಡನೆ ಬೆರೆಯುವ ಹಾಗೂ ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಅವಕಾಶ ಸಿಕ್ಕಿದೆ. ಒಳ್ಳೆಯ ನಾಯಕನಾಗಿ ಬೆಳೆಯಲು ಇದು ಅವರಿಗೆ ಸಹಕಾರಿ. ಇದನ್ನು ಅವರು ಯಶಸ್ವಿಯಾಗಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲಿ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.


ಪೋಲಿಸರಿಗೆ ಕೃತಜ್ಞತೆಗಳು

ವಿಶ್ವ ವಿಖ್ಯಾತ ಮೈಸೂರು ಹತ್ತು ದಿನಗಳ ದಸರಾ ಉತ್ಸವ ಸಂಭ್ರಮ, ಸಡಗರದೊಂದಿಗೆ ಮುಕ್ತಾಯವಾಗಿದೆ. ದಸರಾ ಉತ್ಸವ ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆದಿದ್ದು ಪೊಲೀಸರ ಅವಿರತ ಶ್ರಮದಿಂದಾಗಿ.
ಮೈಸೂರು ಮತ್ತು ನೆರೆಯ ಜಿಲ್ಲೆಗಳಿಂದ ಪೊಲೀಸರು ಆಗಮಿಸಿ, ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಯ್ದಿದ್ದಾರೆ.
ಹಗಲು, ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸಿದ್ದಾರೆ. ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ವರ್ತಿಸಿದ್ದಾರೆ. ಪ್ರವಾಸಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ದಸರಾ ಯಶಸ್ಸಿಗೆ ಕಾರಣರಾದ ಎಲ್ಲಾ ಪೊಲೀಸರಿಗೂ ಕೃತಜ್ಞತೆಗಳು

-ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಡಾಂಬರಿನ ಮೇಲೆ ಡಾಂಬರು!

ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ಕೆಲವು ಚನ್ನಾಗಿದ್ದ ಡಾಂಬರು ರಸ್ತೆಯ ಮೇಲೆ ಮತ್ತೇ ಡಾಂಬರು ಹಾಕಿದ್ದಾರೆ. ಉದಾಹರಣೆಗೆ ಕುವೆಂಪು ನಗರದ ಅಮ್ಮ ಕಾಂಪ್ಲೆಕ್ಸ್ ನಿಂದ, ಆಂದೋಲನ ಸರ್ಕಲ್, ಹೀಗೆ ಇನ್ನೂ ಹಲವಾರು ಕಡೆ ಚೆನ್ನಾಗಿದ್ದ ರಸ್ತೆ ಗೇ ಮತ್ತೆ ಡಾಂಬರು ಹಾಕಿದ್ದಾರೆ, ಆದರೆ ಕಳೆದ ಮೂರು ತಿಂಗಳ ಹಿಂದೆ ಯುಜಿಡಿ ಹೊಸ ಪೈಪ್ ಲೈನ್ ಹಾಕಲು ಆಪೋಲೊ ಆಸ್ಪತ್ರೆ ಮುಂಭಾಗದಿಂದ ಆದಿಚುಂಚನಗಿರಿ ರಸ್ತೆಯ ಕಡೆಯ ತನಕವೂ ರಸ್ತೆಯನ್ನು ಆಗೆದು ಹಾಗೆಯೇ ಬಿಟ್ಟಿರುವುದರಿಂದ, ರಸ್ತೆಯಲ್ಲಿ ಸಾರ್ವಜನಿಕರು ಓಡಾಡದಂತ ಪರಿಸ್ಥಿತಿ ಇದೆ. ಇಲ್ಲಿ ವಾಹನ ಸಂಚಾರಕ್ಕೂ ತೊಂದರೆ ಆಗಿದೆ, ಸಂಚಾರ ಮಾಡುವವರಿಗೆ ಅರ್ಧ ಇಂಚು ಧೂಳು ಮುಖಕ್ಕೆ ಮೆತ್ತುಕೊಳ್ಳುತ್ತದೆ. ಇಲ್ಲಿ ಓಡಾಡುವ ಸಾರ್ವಜನಿಕರು ನಗರ ಪಾಲಿಕೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. ದಯಮಾಡಿ ಈ ರಸ್ತೆಗೆ ಕೂಡಲೇ ಡಾಂಬರು ಹಾಕಿಸಿ ಸಾರ್ವಜನಿಕರು ಓಡಾಡಲು ಅನುಕೂಲ ಮಾಡಿಕೊಡಬೇಕು.

-ಬೂಕನಕೆರೆ ವಿಜೇಂದ್ರ, ಮೈಸೂರು.

andolana

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

4 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

7 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

10 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

10 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

10 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

10 hours ago