ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 14 ಶುಕ್ರವಾರ 2022

ಕಾಮುಕ ಶಿಕ್ಷಕನಿಗೆ ತಕ್ಕ ಶಿಕ್ಷೆಯಾಗಲಿ!

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮನೆ ಪಾಠಕ್ಕೆಂದು ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಪೈಶಾಚಿಕ ಕೃತ್ಯ ಖಂಡನೀಯ . ಸದ್ವಿದ್ಯೆಯನ್ನು ಕಲಿಸಿ, ಸನ್ನಡತೆಯ ತೋರುವಾತನೆ ಗುರು. ಇಂತಹ ಗುರುವೇ ಈ ರೀತಿಯ ನೀಚಕೃತ್ಯದಲ್ಲಿ ಭಾಗಿಯಾದರೆ ಶಿಕ್ಷಕ ವೃತ್ತಿಗೆ ಅರ್ಥವೇನಿದೆ? ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ ತಿಳಿವಳಿಕೆ ಹೇಳಬೇಕಾದ ಶಿಕ್ಷಕನೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಯಂಥ ಕ್ರೂರ ಕೃತ್ಯದಲ್ಲಿ ಭಾಗಿಯಾಗಿರುವುದು ನಾಚಿಕೆಗೇಡಿತನ ಸಂಗತಿ. ಶಿಕ್ಷಕರನ್ನು ನಂಬಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಯಾರೋ ಒಬ್ಬ ಮತಿಗೇಡಿ ಶಿಕ್ಷಕ ಮಾಡಿದ ತಪ್ಪಿನಿಂದಾಗಿ ಇಡೀ ಸಮಾಜ, ಶಿಕ್ಷಕವಲಯವನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಿದೆ. ಇಂತಹ ಶಿಕ್ಷಕರಿಗೆ ಕಠಿಣ ಶಿಕ್ಷೆ ನೀಡಬೇಕು. ಸೇವೆಯಿಂದಲೇ ವಜಾ ಮಾಡಬೇಕು. ಈ ರೀತಿ ಮಾಡುವುದರಿಂದ ಕೆಟ್ಟ ಶಿಕ್ಷಕರಿಗೆ ತಕ್ಕ ಪಾಠ ಕಲಿಸಿದಂತಾಗುತ್ತದೆ ಹಾಗೂ ಇನ್ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕಿದೆ.

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.


ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ

ಸರ್ಕಾರಿ ಶಾಲೆ ಎಂದಾಕ್ಷಣ ಬಹಳಷ್ಟು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಅದರಲ್ಲೂ ರಾಜಕಾರಣಿಗಳು ತಮ್ಮ ಮಕ್ಕಳು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಿರಲಿ ಆ ಕಡೆ ಮುಖವನ್ನೂ ಮಾಡುವುದಿಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಹೈಕೋರ್ಟ್ ಜನಪ್ರತಿನಿಧಿಗಳಿಗೆ ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೇ ಸೇರಿಸುವಂತೆ ಆದೇಶಿಸಿದೆ. ರಾಜಕಾರಣಿಗಳ ಮಕ್ಕಳು, ಮೊಮ್ಮಕ್ಕಳನ್ನು ಸರ್ಕಾರಿ ಶಾಲೆ ಸೇರಿಸುವುದನ್ನು ಪರಿಶೀಲಿಸುವಂತೆ ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ತಾಕೀತು ಮಾಡಿದೆ. ನಮ್ಮಲ್ಲಿ ಸರ್ಕಾರಿ ಶಾಲೆಗಳು, ಖಾಸಗಿ ಶಾಲೆಗಳನ್ನು ಮೀರಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕೆಂದರೆ ಜನಪ್ರತಿನಿಧಿಗಳು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದನ್ನು ಕಡ್ಡಾಯಗೊಳಿಸಬೇಕು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ ಶಾಲೆಗಳಲ್ಲಿ ಓದಿದ ವಿಧ್ಯಾರ್ಥಿಗಳಿಗೆ ಮಾತ್ರ ನಮ್ಮ ರಾಜ್ಯದ ಸರ್ಕಾರಿ ನೌಕರಿ ಎಂದು ಆದೇಶ ಹೊರಡಿಸಿಬೇಕು. ಆಗ ಮಾತ್ರ ರಾಜಕಾರಣಿಗಳು ಅಷ್ಟೇ ಅಲ್ಲದೆ ಬಹಳಷ್ಟು ಪಾಲಕರು ಖಾಸಗಿ ಶಾಲೆಯ ಬದಲಾಗಿ ಸರ್ಕಾರಿ ಶಾಲೆಗೆ ತಮ್ಮ ತಮ್ಮ ಮಕ್ಕಳನ್ನು ಕಳುಹಿಸುತ್ತಾರೆ. ಒಟ್ಟಿನಲ್ಲಿ ಆಗ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರಿ ಶಾಲೆಗಳು ಶ್ರಮಿಸುತ್ತವೆ.

-ವಿಜಯಕುಮಾರ್ ಎಚ್.ಕೆ. ಸಾಮಾಜಿಕ ಕಾರ್ಯಕರ್ತ, ಮೈಸೂರು.


ಗೌರವಧನ ಗೌರವಯುತವಾಗಿ ನೀಡಲಿ!

ಈ ಬಾರಿಯ ನಾಡಹಬ್ಬ ದಸರಾ ಉತ್ಸವದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವ ಮೂಲಕ ಯಶಸ್ವಿ ಗೊಳಿಸಿರುವುದು ಸ್ವಾಗತಾರ್ಹ ಸಂಗತಿ. ಆದರೆ ಕೆಲವು ನ್ಯೂನ್ಯತೆಗಳು ಇದ್ದದ್ದು ಕಂಡುಬಂದಿದೆ. ಈ ಬಾರಿಯ ನಾಡಹಬ್ಬದಲ್ಲಿ ಕನ್ನಡ ಪುಸ್ತಕಗಳ ಮಾರಾಟ ಮಳಿಗೆಗೆ ಅವಕಾಶ ಕಲ್ಪಿಸಲಾಗದೆ ಇರುವುದು ಪುಸ್ತಕ ಪ್ರೇಮಿಗಳಿಗೆ ತುಂಬಾ ನಿರಾಸೆಯಾಗಿದೆ. ಅದೇ ರೀತಿ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ನಮ್ಮ ಕುಸ್ತಿ ಪಟುಗಳಿಗೆ ಗೌರವಧನ ನೀಡುವ ವಿಚಾರದಲ್ಲಿ ತೀರ್ಮಾನ ಕೈಗೊಂಡಿಲ್ಲ. ಇದರಿಂದ ಕುಸ್ತಿ ಪಟುಗಳ ಮನಸ್ಥಿತಿ ಹೇಗಿರುತ್ತದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಬಾರಿಯ ದಸರಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ. ನಿಗದಿಗಿಂತ ಕಡಿಮೆ ಗೌರವಧನ ನೀಡಿರುವುದು, ಹಲವಾರು ಕ್ರೀಡಾ ಪಂದ್ಯಗಳಿಗೆ ನಗದು ಬಹುಮಾನ ನೀಡದಿರುವುದು ವಿಷಾದದ ಸಂಗತಿ. ಮುಂದಿನ ಬಾರಿಯಾದರೂ ಈ ನ್ಯೂನ್ಯತೆಗಳಿಂದ ಹೊರಬರಬೇಕು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

andolana

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

7 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

8 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

9 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

10 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

10 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

10 hours ago