ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 14 ಶುಕ್ರವಾರ 2022

ಕಾಮುಕ ಶಿಕ್ಷಕನಿಗೆ ತಕ್ಕ ಶಿಕ್ಷೆಯಾಗಲಿ!

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮನೆ ಪಾಠಕ್ಕೆಂದು ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಪೈಶಾಚಿಕ ಕೃತ್ಯ ಖಂಡನೀಯ . ಸದ್ವಿದ್ಯೆಯನ್ನು ಕಲಿಸಿ, ಸನ್ನಡತೆಯ ತೋರುವಾತನೆ ಗುರು. ಇಂತಹ ಗುರುವೇ ಈ ರೀತಿಯ ನೀಚಕೃತ್ಯದಲ್ಲಿ ಭಾಗಿಯಾದರೆ ಶಿಕ್ಷಕ ವೃತ್ತಿಗೆ ಅರ್ಥವೇನಿದೆ? ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ ತಿಳಿವಳಿಕೆ ಹೇಳಬೇಕಾದ ಶಿಕ್ಷಕನೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಯಂಥ ಕ್ರೂರ ಕೃತ್ಯದಲ್ಲಿ ಭಾಗಿಯಾಗಿರುವುದು ನಾಚಿಕೆಗೇಡಿತನ ಸಂಗತಿ. ಶಿಕ್ಷಕರನ್ನು ನಂಬಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಯಾರೋ ಒಬ್ಬ ಮತಿಗೇಡಿ ಶಿಕ್ಷಕ ಮಾಡಿದ ತಪ್ಪಿನಿಂದಾಗಿ ಇಡೀ ಸಮಾಜ, ಶಿಕ್ಷಕವಲಯವನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಿದೆ. ಇಂತಹ ಶಿಕ್ಷಕರಿಗೆ ಕಠಿಣ ಶಿಕ್ಷೆ ನೀಡಬೇಕು. ಸೇವೆಯಿಂದಲೇ ವಜಾ ಮಾಡಬೇಕು. ಈ ರೀತಿ ಮಾಡುವುದರಿಂದ ಕೆಟ್ಟ ಶಿಕ್ಷಕರಿಗೆ ತಕ್ಕ ಪಾಠ ಕಲಿಸಿದಂತಾಗುತ್ತದೆ ಹಾಗೂ ಇನ್ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕಿದೆ.

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.


ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ

ಸರ್ಕಾರಿ ಶಾಲೆ ಎಂದಾಕ್ಷಣ ಬಹಳಷ್ಟು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಅದರಲ್ಲೂ ರಾಜಕಾರಣಿಗಳು ತಮ್ಮ ಮಕ್ಕಳು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಿರಲಿ ಆ ಕಡೆ ಮುಖವನ್ನೂ ಮಾಡುವುದಿಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಹೈಕೋರ್ಟ್ ಜನಪ್ರತಿನಿಧಿಗಳಿಗೆ ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೇ ಸೇರಿಸುವಂತೆ ಆದೇಶಿಸಿದೆ. ರಾಜಕಾರಣಿಗಳ ಮಕ್ಕಳು, ಮೊಮ್ಮಕ್ಕಳನ್ನು ಸರ್ಕಾರಿ ಶಾಲೆ ಸೇರಿಸುವುದನ್ನು ಪರಿಶೀಲಿಸುವಂತೆ ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ತಾಕೀತು ಮಾಡಿದೆ. ನಮ್ಮಲ್ಲಿ ಸರ್ಕಾರಿ ಶಾಲೆಗಳು, ಖಾಸಗಿ ಶಾಲೆಗಳನ್ನು ಮೀರಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕೆಂದರೆ ಜನಪ್ರತಿನಿಧಿಗಳು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದನ್ನು ಕಡ್ಡಾಯಗೊಳಿಸಬೇಕು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ ಶಾಲೆಗಳಲ್ಲಿ ಓದಿದ ವಿಧ್ಯಾರ್ಥಿಗಳಿಗೆ ಮಾತ್ರ ನಮ್ಮ ರಾಜ್ಯದ ಸರ್ಕಾರಿ ನೌಕರಿ ಎಂದು ಆದೇಶ ಹೊರಡಿಸಿಬೇಕು. ಆಗ ಮಾತ್ರ ರಾಜಕಾರಣಿಗಳು ಅಷ್ಟೇ ಅಲ್ಲದೆ ಬಹಳಷ್ಟು ಪಾಲಕರು ಖಾಸಗಿ ಶಾಲೆಯ ಬದಲಾಗಿ ಸರ್ಕಾರಿ ಶಾಲೆಗೆ ತಮ್ಮ ತಮ್ಮ ಮಕ್ಕಳನ್ನು ಕಳುಹಿಸುತ್ತಾರೆ. ಒಟ್ಟಿನಲ್ಲಿ ಆಗ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರಿ ಶಾಲೆಗಳು ಶ್ರಮಿಸುತ್ತವೆ.

-ವಿಜಯಕುಮಾರ್ ಎಚ್.ಕೆ. ಸಾಮಾಜಿಕ ಕಾರ್ಯಕರ್ತ, ಮೈಸೂರು.


ಗೌರವಧನ ಗೌರವಯುತವಾಗಿ ನೀಡಲಿ!

ಈ ಬಾರಿಯ ನಾಡಹಬ್ಬ ದಸರಾ ಉತ್ಸವದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವ ಮೂಲಕ ಯಶಸ್ವಿ ಗೊಳಿಸಿರುವುದು ಸ್ವಾಗತಾರ್ಹ ಸಂಗತಿ. ಆದರೆ ಕೆಲವು ನ್ಯೂನ್ಯತೆಗಳು ಇದ್ದದ್ದು ಕಂಡುಬಂದಿದೆ. ಈ ಬಾರಿಯ ನಾಡಹಬ್ಬದಲ್ಲಿ ಕನ್ನಡ ಪುಸ್ತಕಗಳ ಮಾರಾಟ ಮಳಿಗೆಗೆ ಅವಕಾಶ ಕಲ್ಪಿಸಲಾಗದೆ ಇರುವುದು ಪುಸ್ತಕ ಪ್ರೇಮಿಗಳಿಗೆ ತುಂಬಾ ನಿರಾಸೆಯಾಗಿದೆ. ಅದೇ ರೀತಿ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ನಮ್ಮ ಕುಸ್ತಿ ಪಟುಗಳಿಗೆ ಗೌರವಧನ ನೀಡುವ ವಿಚಾರದಲ್ಲಿ ತೀರ್ಮಾನ ಕೈಗೊಂಡಿಲ್ಲ. ಇದರಿಂದ ಕುಸ್ತಿ ಪಟುಗಳ ಮನಸ್ಥಿತಿ ಹೇಗಿರುತ್ತದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಬಾರಿಯ ದಸರಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ. ನಿಗದಿಗಿಂತ ಕಡಿಮೆ ಗೌರವಧನ ನೀಡಿರುವುದು, ಹಲವಾರು ಕ್ರೀಡಾ ಪಂದ್ಯಗಳಿಗೆ ನಗದು ಬಹುಮಾನ ನೀಡದಿರುವುದು ವಿಷಾದದ ಸಂಗತಿ. ಮುಂದಿನ ಬಾರಿಯಾದರೂ ಈ ನ್ಯೂನ್ಯತೆಗಳಿಂದ ಹೊರಬರಬೇಕು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

andolana

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

5 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

7 hours ago