ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 14 ಶುಕ್ರವಾರ 2022

ಕಾಮುಕ ಶಿಕ್ಷಕನಿಗೆ ತಕ್ಕ ಶಿಕ್ಷೆಯಾಗಲಿ!

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮನೆ ಪಾಠಕ್ಕೆಂದು ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಪೈಶಾಚಿಕ ಕೃತ್ಯ ಖಂಡನೀಯ . ಸದ್ವಿದ್ಯೆಯನ್ನು ಕಲಿಸಿ, ಸನ್ನಡತೆಯ ತೋರುವಾತನೆ ಗುರು. ಇಂತಹ ಗುರುವೇ ಈ ರೀತಿಯ ನೀಚಕೃತ್ಯದಲ್ಲಿ ಭಾಗಿಯಾದರೆ ಶಿಕ್ಷಕ ವೃತ್ತಿಗೆ ಅರ್ಥವೇನಿದೆ? ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ ತಿಳಿವಳಿಕೆ ಹೇಳಬೇಕಾದ ಶಿಕ್ಷಕನೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಯಂಥ ಕ್ರೂರ ಕೃತ್ಯದಲ್ಲಿ ಭಾಗಿಯಾಗಿರುವುದು ನಾಚಿಕೆಗೇಡಿತನ ಸಂಗತಿ. ಶಿಕ್ಷಕರನ್ನು ನಂಬಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಯಾರೋ ಒಬ್ಬ ಮತಿಗೇಡಿ ಶಿಕ್ಷಕ ಮಾಡಿದ ತಪ್ಪಿನಿಂದಾಗಿ ಇಡೀ ಸಮಾಜ, ಶಿಕ್ಷಕವಲಯವನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಿದೆ. ಇಂತಹ ಶಿಕ್ಷಕರಿಗೆ ಕಠಿಣ ಶಿಕ್ಷೆ ನೀಡಬೇಕು. ಸೇವೆಯಿಂದಲೇ ವಜಾ ಮಾಡಬೇಕು. ಈ ರೀತಿ ಮಾಡುವುದರಿಂದ ಕೆಟ್ಟ ಶಿಕ್ಷಕರಿಗೆ ತಕ್ಕ ಪಾಠ ಕಲಿಸಿದಂತಾಗುತ್ತದೆ ಹಾಗೂ ಇನ್ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕಿದೆ.

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.


ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ

ಸರ್ಕಾರಿ ಶಾಲೆ ಎಂದಾಕ್ಷಣ ಬಹಳಷ್ಟು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಅದರಲ್ಲೂ ರಾಜಕಾರಣಿಗಳು ತಮ್ಮ ಮಕ್ಕಳು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಿರಲಿ ಆ ಕಡೆ ಮುಖವನ್ನೂ ಮಾಡುವುದಿಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಹೈಕೋರ್ಟ್ ಜನಪ್ರತಿನಿಧಿಗಳಿಗೆ ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೇ ಸೇರಿಸುವಂತೆ ಆದೇಶಿಸಿದೆ. ರಾಜಕಾರಣಿಗಳ ಮಕ್ಕಳು, ಮೊಮ್ಮಕ್ಕಳನ್ನು ಸರ್ಕಾರಿ ಶಾಲೆ ಸೇರಿಸುವುದನ್ನು ಪರಿಶೀಲಿಸುವಂತೆ ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ತಾಕೀತು ಮಾಡಿದೆ. ನಮ್ಮಲ್ಲಿ ಸರ್ಕಾರಿ ಶಾಲೆಗಳು, ಖಾಸಗಿ ಶಾಲೆಗಳನ್ನು ಮೀರಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕೆಂದರೆ ಜನಪ್ರತಿನಿಧಿಗಳು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದನ್ನು ಕಡ್ಡಾಯಗೊಳಿಸಬೇಕು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ ಶಾಲೆಗಳಲ್ಲಿ ಓದಿದ ವಿಧ್ಯಾರ್ಥಿಗಳಿಗೆ ಮಾತ್ರ ನಮ್ಮ ರಾಜ್ಯದ ಸರ್ಕಾರಿ ನೌಕರಿ ಎಂದು ಆದೇಶ ಹೊರಡಿಸಿಬೇಕು. ಆಗ ಮಾತ್ರ ರಾಜಕಾರಣಿಗಳು ಅಷ್ಟೇ ಅಲ್ಲದೆ ಬಹಳಷ್ಟು ಪಾಲಕರು ಖಾಸಗಿ ಶಾಲೆಯ ಬದಲಾಗಿ ಸರ್ಕಾರಿ ಶಾಲೆಗೆ ತಮ್ಮ ತಮ್ಮ ಮಕ್ಕಳನ್ನು ಕಳುಹಿಸುತ್ತಾರೆ. ಒಟ್ಟಿನಲ್ಲಿ ಆಗ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರಿ ಶಾಲೆಗಳು ಶ್ರಮಿಸುತ್ತವೆ.

-ವಿಜಯಕುಮಾರ್ ಎಚ್.ಕೆ. ಸಾಮಾಜಿಕ ಕಾರ್ಯಕರ್ತ, ಮೈಸೂರು.


ಗೌರವಧನ ಗೌರವಯುತವಾಗಿ ನೀಡಲಿ!

ಈ ಬಾರಿಯ ನಾಡಹಬ್ಬ ದಸರಾ ಉತ್ಸವದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವ ಮೂಲಕ ಯಶಸ್ವಿ ಗೊಳಿಸಿರುವುದು ಸ್ವಾಗತಾರ್ಹ ಸಂಗತಿ. ಆದರೆ ಕೆಲವು ನ್ಯೂನ್ಯತೆಗಳು ಇದ್ದದ್ದು ಕಂಡುಬಂದಿದೆ. ಈ ಬಾರಿಯ ನಾಡಹಬ್ಬದಲ್ಲಿ ಕನ್ನಡ ಪುಸ್ತಕಗಳ ಮಾರಾಟ ಮಳಿಗೆಗೆ ಅವಕಾಶ ಕಲ್ಪಿಸಲಾಗದೆ ಇರುವುದು ಪುಸ್ತಕ ಪ್ರೇಮಿಗಳಿಗೆ ತುಂಬಾ ನಿರಾಸೆಯಾಗಿದೆ. ಅದೇ ರೀತಿ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ನಮ್ಮ ಕುಸ್ತಿ ಪಟುಗಳಿಗೆ ಗೌರವಧನ ನೀಡುವ ವಿಚಾರದಲ್ಲಿ ತೀರ್ಮಾನ ಕೈಗೊಂಡಿಲ್ಲ. ಇದರಿಂದ ಕುಸ್ತಿ ಪಟುಗಳ ಮನಸ್ಥಿತಿ ಹೇಗಿರುತ್ತದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಬಾರಿಯ ದಸರಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ. ನಿಗದಿಗಿಂತ ಕಡಿಮೆ ಗೌರವಧನ ನೀಡಿರುವುದು, ಹಲವಾರು ಕ್ರೀಡಾ ಪಂದ್ಯಗಳಿಗೆ ನಗದು ಬಹುಮಾನ ನೀಡದಿರುವುದು ವಿಷಾದದ ಸಂಗತಿ. ಮುಂದಿನ ಬಾರಿಯಾದರೂ ಈ ನ್ಯೂನ್ಯತೆಗಳಿಂದ ಹೊರಬರಬೇಕು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

andolana

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

8 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

9 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

10 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

14 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

15 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

21 hours ago