ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 11 ಶುಕ್ರವಾರ 2022

ನಿಷ್ಪಕ್ಷಪಾತ ತನಿಖೆಯಾಗಲಿ

ನಿವೃತ್ತ ಐ. ಬಿ. ಅಧಿಕಾರಿ ದಿ. ಆರ್. ಎನ್. ಕುಲಕರ್ಣಿ ಅವರ ಕೊಲೆಯ ಕಾರಣಗಳು ಪರೋಕ್ಷವಾಗಿ ಹೀಗೂ ಇರಬಹುದೇ?
ಇಲ್ಲಿ ಈ ಕೊಲೆಗೆ ಸಾಕಷ್ಟು ಕಾರಣಗಳ ಹೊರತಾಗಿಯೂ ನಗರ ಪಾಲಿಕೆ ಅಧಿಕಾರಿಗಳದ್ದು ಪರೋಕ್ಷ ಸಹಕಾರ ಇದೆ ಎಂದರೆ ತಪ್ಪಾಗಲಾರದು. ಈ ಬಗ್ಗೆ ತನಿಖೆಯ ಅವಶ್ಯಕತೆ ಇದೆ. ದಿ.ಕುಲಕರ್ಣಿಯವರು ಎರಡೆರಡು ಬಾರಿ ದೂರು ನೀಡಿದರೂ ಸ್ಥಳ ಪರಿಶೀಲನೆ ಮಾಡದೇ ನಾಮಕವಸ್ಥೆ ನೋಟೀಸ್ ಜಾರಿ ಮಾಡಿದ್ದಾರಷ್ಟೇ. ಅಲ್ಲದೇ ನಂಬರ್ ಪ್ಲೇಟ್ ಇಲ್ಲದ ವಾಹನ ಅದೂ ಸಂಜೆಯ ವೇಳೆಗೆ ರಾಜಾರೋಷವಾಗಿ ಬೀದಿಗೆ ಬಂದದ್ದು ಹೇಗೆ? ದಿ. ಕುಲಕರ್ಣಿಯವರಂತಹ ಪ್ರಭಾವಿ ವ್ಯಕ್ತಿಗಳದ್ದೆ ಈ ಕಥೆಯಾದರೆ ಶ್ರೀಸಾಮಾನ್ಯನ ಪಾಡೇನು? ಪ್ರಕರಣ ಶೀಘ್ರವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಕ್ಕೆ ಪೊಲೀಸ್ ಇಲಾಖೆಗೆ ಅಭಿನಂದನೆಗಳು. ಆದರೂ ನಿಷ್ಪಕ್ಷಪಾತ ತನಿಖೆ ಆಗಲೇಬೇಕು.

-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.


ರಸ್ತೆ ದುರಸ್ತಿ ಯಾವಾಗ?

ಮೈಸೂರು ನಗರದ ಅಪೋಲೋ ಆಸ್ಪತ್ರೆಯ ಮುಂಭಾಗದಿಂದ ಆದಿಚುಂಚನಗಿರಿ ರಸ್ತೆಯ ಕಡೆಯ ತನಕ ಕಳೆದ ನಾಲ್ಕು ತಿಂಗಳ ಹಿಂದೆ ಹೊಸದಾಗಿ ಯುಜಿಡಿ ಪೈಪ್‌ಲೈನ್ ಅಳವಡಿಸಲು ರಸ್ತೆಯನ್ನು ಆಗೆದಿರುವುದರಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರ ವಿರಲಿ, ಸಾರ್ವಜನಿಕರು ಸಹ ಓಡಾಡದಂದ ಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಓಡಾಡುವ ಜನರು ನಗರಪಾಲಿಕೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. ದಸರಾ ನಂತರ ಈ ರಸ್ತೆಗೆ ಡಾಂಬರು ಹಾಕಿಸುವುದಾಗಿ ಮೇಯರ್‌ರವರು ಭರವಸೆ ನೀಡಿದ್ದರು. ಮೇಯರ್‌ರವರು ಸುಳ್ಳು ಆಶ್ವಾಸನೆ ನೀಡಿದರೇ? ಈಗಲಾದರೂ ಈ ರಸ್ತೆಯನ್ನು ಡಾಂಬರಿಕರಣ ಮಾಡಿ, ಸಾರ್ವಜನಿಕರು ಓಡಾಡಲು ಅನುಕೂಲ ಮಾಡಿಕೊಡ ಬೇಕಾಗಿ ವಿನಂತಿ.

-ಬೂಕನಕೆರೆ ವಿಜೇಂದ್ರ, ಮೈಸೂರು.


ಮೊದಲು ಮಾನವರಾಗಬೇಕು!

ಸತೀಶ್ ಜಾರಕಿಹೊಳಿ ಅವರ ಒಂದೇ ಒಂದು ಹೇಳಿಕೆಯಿಂದ ಕರ್ನಾಟಕದಲ್ಲಿ ದೊಡ್ಡ ದೊಡ್ಡ ಹೋರಾಟಗಾರರು ಬಿದಿಗಿಳಿದು ಬೆಂಕಿ ಹಚ್ಚಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ನೆನಪಿರಲಿ, ಕಳೆದ ತಿಂಗಳು ಮಂಡ್ಯದಲ್ಲಿ ಒಬ್ಬ ಶಿಕ್ಷಕ ಹಿಂದೂ ಧರ್ಮದ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ. ನಂತರ ಕಲ್ಬುರ್ಗಿಯಲ್ಲಿ ಸಹ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರವಾಗಿದೆ. ದಿನೇ ದಿನೇ ಮಹಿಳೆಯರು, ಮಕ್ಕಳ ಮೇಲೆ ದೌರ್ಜನಗಳು ಹೆಚ್ಚುತ್ತಲೇ ಇವೆ. ಭ್ರಷ್ಟಾಚಾರ ಅಧಿಕಾರಿಗಳ ದರ್ಪ ಹೆಚ್ಚಿದೆ. ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಸಹ ತೆರೆಮರೆಯಲ್ಲಿದ್ದ, ನೆನ್ನೆಯಿಂದ ಹೋರಾಟ ಮಾಡುತ್ತಿರುವ ಧರ್ಮರಕ್ಷಕರು, ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವಾದಾಗ ಎಲ್ಲಿ ನಾಪತ್ತೆಯಾಗುತ್ತಾರೋ? ಈ ಹೋರಾಟಗಾರರಿಗೆ ಹೆಣ್ಣು ಮಕ್ಕಳ ರಕ್ಷಣೆಗಿಂತ, ಅವರಿಗೆ ನ್ಯಾಯ ಕೊಡಿಸುವುದಕ್ಕಿಂತ ಒಬ್ಬ ಶಾಸಕರ ಒಂದು ಹೇಳಿಕೆ ಮುಖ್ಯವಾಗಿರುವುದು ವಿಪರ್ಯಾಸ. ಮೊದಲು ಮಾನವರಾಗಬೇಕು ಮಾನವರಿಗೆ ತೊಂದರೆ ಆಗುವಂತಹ ಘಟನೆಗಳು ನಡೆದಾಗ ಬೀದಿಗಿಳಿದು ಹೋರಾಟ ಮಾಡಬೇಕೆ ವಿನಹ ಅನವಶ್ಯಕ ಹೇಳಿಕೆಗಳಿಗಲ್ಲ.

– ಜಿ.ಎನ್.ಕಾರ್ತಿಕ್, ಕಾನೂನು ವಿದ್ಯಾರ್ಥಿ, ಗುಂಡ್ಲುಪೇಟೆ.


ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಕಾನೂನಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಈ ಮೂಲಕ ಇತರೇ ಮುಂದುವರೆದ ಜಾತಿಗಳಲ್ಲಿ ಇರುವ ಆರ್ಥಿಕ ದುರ್ಬಲರಿಗೆ ನ್ಯಾಯ ಒದಗಿಸಿದಂತಾಗಿದೆ. ಕಳೆದ ಹಲವಾರು ವರ್ಷಗಳಿಂದ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಈಗ ಅದು ಈಡೇರಿದಂತಾಗಿದೆ. ಸಂವಿಧಾನದ ೧೫ (೬) ಮತ್ತು ೧೬ (೬) ವಿಧಿಗಳಿಗೆ ಮಾಡಲಾದ ೧೦೩ ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ, ಆರ್ಥಿಕವಾಗಿ ಹಿಂದುಳಿದವರಿಗೆ ಶೇ ೧೦ ರಷ್ಟು ಮೀಸಲಾತಿ ನೀಡಲು ಅನುವು ಮಾಡಿಕೊಡಲಾಗಿದೆ. ಈ ಹೊಸ ಮೀಸಲಾತಿ ನಿಯಮದ ಪ್ರಕಾರ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಪಂಗಡಗಳಿಗೆ ಸೇರದ ವರ್ಗಗಳ ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ. ೮ ಲಕ್ಷದ ಒಳಗೆ ಇದ್ದರೆ, ಈ ಮೀಸಲಾತಿ ಅವರಿಗೆ ಅನ್ವಯವಾಗುತ್ತದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.

 

andolana

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

2 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

5 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

6 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

6 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

6 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

7 hours ago