ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 25 ಶುಕ್ರವಾರ 2022

ಸಾತಗಳ್ಳಿ ಕೆರೆಯನ್ನೂ ಉಳಿಸಿ!

ಅವಸಾನದ ಅಂಚಿಗೆ ತಲುಪಿದ್ದ ದೇವನೂರು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರತಿನಿಧಿಗಳು ಕಾರ್ಯಪ್ರವೃತ್ತ ರಾಗಿರುವುದು ತುಂಬಾ ಸಂತೋಷದಾಯಕ ಸಂಗತಿ. ಅದೇ ರೀತಿ ಸಾತಗಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸದೆ ಅದನ್ನು ಮುಚ್ಚಿ ಕ್ರಿಕೆಟ್ ಸ್ಟೇಡಿಯಂ ಮಾಡುತ್ತಿರುವುದು ಎಷ್ಟು ನ್ಯಾಯ? ಸಾತಗಳ್ಳಿ ಕೆರೆಗೆ ಬರುವ ನೀರಿನ ಸೆಲೆ ಬತ್ತಿದೆ ಎಂದು ಹೇಳಿ ಕೆರೆಯನ್ನು ಮುಚ್ಚುವ ಬದಲು ಮಳೆ ನೀರನ್ನು ಸಂಗ್ರಹ ಮಾಡುವ ಮೂಲಕ ಗಮನ ಹರಿಸಿ ಕೆರೆಯನ್ನು ಅಭಿವೃದ್ಧಿ ಪಡಿಸುವುದು ಉತ್ತಮ. ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ ಮಾಡದೆ ಬೇರೆ ಕಡೆ ಸರ್ಕಾರದವರು ಭೂಮಿಯನ್ನು ಗುರುತಿಸಿ ಕೊಡುವುದು ಸೂಕ್ತ. ಸಂಬಂಧ ಪಟ್ಟವರು ಇತ್ತಾ ಕಡೆ ಗಮನ ಹರಿಸಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್ , ಮೈಸೂರು.


ಜನಮಾನಸದಲ್ಲಿ ಮಾಸದ ‘ಕೆಂಪಗಿ ದೊರೆ’

ದಮನಿತರ ದನಿಯಾಗಿ, ಕಾರ್ಮಿಕರ ನೇತಾರರಾಗಿ ಜನಮಾನಸದಲ್ಲಿ ಸದಾ ಹಚ್ಚ ಹಸಿರಾಗಿ ಉಳಿದು, ತಳ ಸಮುದಾಯಕ್ಕೆ ಆಶಾಕಿರಣದ ಬೆಳಕಾದವರು ‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕರ ರಾಜಶೇಖರ ಕೋಟಿಯವರು. ಅವರು ಕೇವಲ ನೆನಪಲ್ಲ. ನಮ್ಮೊಂದಿಗೆ ಇದ್ದಾರೆ. ಅವರ ಆಶೋತ್ತರಗಳು ಸದಾ ನಮ್ಮನ್ನೂ ಬಡಿದೆಬ್ಬಿಸಿ ನಾವು ಸಾಮಾಜಿಕ ನ್ಯಾಯದ ಕೆಲಸಗಳು ಮಾಡಲು ಪ್ರೇರೇಪಿಸುತ್ತಿವೆ. ಅವರ ಅಕಾಲಿಕ ನಿಧನದ ಬಳಿಕವೂ ‘ಆಂದೋಲನ’ ಸಂಪಾದಕರು ಅದೇ ಹಾದಿಯಲ್ಲಿ ಸಾಗುವ ಮೂಲಕ ಕೋಟಿಯವರ ದಾರ್ಶನಿಕ ಹೆಜ್ಜೆ ಗುರುತು ಉಳಿಸುತ್ತಿರುವುದು ಮಾತ್ರವಲ್ಲದೆ, ದಮನಿತರಾದ ನಮ್ಮಂತಹ ಅನೇಕರಿಗೆ ವೇದಿಕೆ ನೀಡುತ್ತಿದ್ದಾರೆ. ಕೋಟಿಯವರ ಹೆಸರನ್ನು ಮೈಸೂರು ನಗರದ ವೃತ್ತವೊಂದಕ್ಕೆ ಇಡಬೇಕೆಂಬುದು ನನ್ನ ಮನವಿಯಾಗಿದೆ. ಆ ಮೂಲಕ ಜನಮಾನಸದಲ್ಲಿ ‘ಕೆಂಪಂಗಿ ದೊರೆ’ ಕೋಟಿಯವರು ಸದಾ ಜೀವಂತವಾಗಿ ಇರುತ್ತಾರೆ.

– ಕೆ.ಮಹೇಶ್, ವಕ್ತಾರರು, ಜಿಲ್ಲಾ ಕಾಂಗ್ರೆಸ್ ಸಮಿತಿ.


ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ

ಹೆಗ್ಗೋಠಾರದಲ್ಲಿ ದಲಿತ ಮಹಿಳೆಯೊಬ್ಬರು ಸಾರ್ವಜನಿಕ ಟ್ಯಾಂಕ್‌ನ ನಲ್ಲಿಯಲ್ಲಿ ನೀರು ಕುಡಿದರೆಂಬ ಕ್ಷುಲ್ಲಕ ಕಾರಣಕ್ಕೆ ಸವರ್ಣಿಯರು ಆ ಟ್ಯಾಂಕ್‌ನಲ್ಲಿ ಸಂಗ್ರಹವಾಗಿದ್ದ ನೀರನ್ನ ಖಾಲಿ ಮಾಡಿ ಅದನ್ನು ಗೋಮೂತ್ರದಿಂದ ಶುದ್ಧೀಕರಣ ಮಾಡುವ ಮೂಲಕ ಬಹಿರಂಗವಾಗಿಯೇ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಇದು ನಾಗರಿಕ ಸಮಾಜ ಅನಾಗರಿಕರಂತೆ ನಡೆದುಕೊಂಡಿರುವಂತಹ ಒಂದು ಅಮಾನವೀಯವಾದ ಕೃತ್ಯ. ಈ ಘಟನೆಯಿಂದ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಜನಜಾಗೃತಿ ಮೂಡಿಸಬೇಕು.

-ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾಲ್ಲೂಕು.


ವಸ್ತ್ರ ಸಂಹಿತೆ ಮತ್ತು ವಿಶ್ವಕಪ್ ಫುಟಬಾಲ್

ಕತಾರ್ ದೇಶದಲ್ಲಿ ನಡೆಯುತ್ತಿರುವ ವಿಶ್ವಕಪ್ ಫುಟ್‌ಬಾಲ್ ಪಂದ್ಯವನ್ನು ವೀಕ್ಷಿಸುವರ ಮೇಲೆ ಅಲ್ಲಿ ಸರ್ಕಾರ ಹಲವಾರು ಸಂಹಿತೆಗಳನ್ನು ವಿಧಿಸಿದೆ. ಬಿಯರ್, ಮದ್ಯ ಸೇವಿಸುವಂತಿಲ್ಲ. ಮಹಿಳೆಯರು ಮೈ ಕಾಣುವ ಉಡುಪು ಧರಿಸುವಂತಿಲ್ಲ. ಯುವಪ್ರೇಮಿಗಳಿಗೆ ಅವಕಾಶವಿಲ್ಲ. ಹಂದಿ ಮಾಂಸ ಸೇವನೆ ನಿಷಿದ್ಧ. ಹೀಗೆ ತನ್ನ ದೇಶದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಪರಂಪರೆಗೆ ಅನುಗುಣವಾಗಿ ಕಟ್ಟು ಪಾಡುಗಳನ್ನು ವಿಧಿಸಿದೆ. ಇದನ್ನು ತಪ್ಪು ಎನ್ನಲಾಗದು. ಈ ಸಂಹಿತೆಗಳನ್ನು ಯಾರೂ ಪ್ರಶ್ನಿಸಿಲ್ಲ ಮತ್ತು ಅದನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ. ಅಕಸ್ಮಾತ್ ನಮ್ಮ ದೇಶದಲ್ಲೂ , ದೇಶದ ಸಂಸ್ಕ್ರತಿ, ಧಾರ್ಮಿಕತೆ, ಸಂಸ್ಕಾರ ಮತ್ತು ಪರಂಪರೆಗಳಿಗೆ ಅನುಗುಣವಾಗಿ ಇಂತಹ ಸಂಹಿತೆಗಳನ್ನು ವಿದಿಸಿದ್ದರೆ , ಇವುಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿತ್ತು.

-ರಮಾನಂದ ಶರ್ಮ, ಬೆಂಗಳೂರು.

andolana

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

2 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

3 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

4 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

4 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

4 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

4 hours ago