ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 25 ಶುಕ್ರವಾರ 2022

ಸಾತಗಳ್ಳಿ ಕೆರೆಯನ್ನೂ ಉಳಿಸಿ!

ಅವಸಾನದ ಅಂಚಿಗೆ ತಲುಪಿದ್ದ ದೇವನೂರು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರತಿನಿಧಿಗಳು ಕಾರ್ಯಪ್ರವೃತ್ತ ರಾಗಿರುವುದು ತುಂಬಾ ಸಂತೋಷದಾಯಕ ಸಂಗತಿ. ಅದೇ ರೀತಿ ಸಾತಗಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸದೆ ಅದನ್ನು ಮುಚ್ಚಿ ಕ್ರಿಕೆಟ್ ಸ್ಟೇಡಿಯಂ ಮಾಡುತ್ತಿರುವುದು ಎಷ್ಟು ನ್ಯಾಯ? ಸಾತಗಳ್ಳಿ ಕೆರೆಗೆ ಬರುವ ನೀರಿನ ಸೆಲೆ ಬತ್ತಿದೆ ಎಂದು ಹೇಳಿ ಕೆರೆಯನ್ನು ಮುಚ್ಚುವ ಬದಲು ಮಳೆ ನೀರನ್ನು ಸಂಗ್ರಹ ಮಾಡುವ ಮೂಲಕ ಗಮನ ಹರಿಸಿ ಕೆರೆಯನ್ನು ಅಭಿವೃದ್ಧಿ ಪಡಿಸುವುದು ಉತ್ತಮ. ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ ಮಾಡದೆ ಬೇರೆ ಕಡೆ ಸರ್ಕಾರದವರು ಭೂಮಿಯನ್ನು ಗುರುತಿಸಿ ಕೊಡುವುದು ಸೂಕ್ತ. ಸಂಬಂಧ ಪಟ್ಟವರು ಇತ್ತಾ ಕಡೆ ಗಮನ ಹರಿಸಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್ , ಮೈಸೂರು.


ಜನಮಾನಸದಲ್ಲಿ ಮಾಸದ ‘ಕೆಂಪಗಿ ದೊರೆ’

ದಮನಿತರ ದನಿಯಾಗಿ, ಕಾರ್ಮಿಕರ ನೇತಾರರಾಗಿ ಜನಮಾನಸದಲ್ಲಿ ಸದಾ ಹಚ್ಚ ಹಸಿರಾಗಿ ಉಳಿದು, ತಳ ಸಮುದಾಯಕ್ಕೆ ಆಶಾಕಿರಣದ ಬೆಳಕಾದವರು ‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕರ ರಾಜಶೇಖರ ಕೋಟಿಯವರು. ಅವರು ಕೇವಲ ನೆನಪಲ್ಲ. ನಮ್ಮೊಂದಿಗೆ ಇದ್ದಾರೆ. ಅವರ ಆಶೋತ್ತರಗಳು ಸದಾ ನಮ್ಮನ್ನೂ ಬಡಿದೆಬ್ಬಿಸಿ ನಾವು ಸಾಮಾಜಿಕ ನ್ಯಾಯದ ಕೆಲಸಗಳು ಮಾಡಲು ಪ್ರೇರೇಪಿಸುತ್ತಿವೆ. ಅವರ ಅಕಾಲಿಕ ನಿಧನದ ಬಳಿಕವೂ ‘ಆಂದೋಲನ’ ಸಂಪಾದಕರು ಅದೇ ಹಾದಿಯಲ್ಲಿ ಸಾಗುವ ಮೂಲಕ ಕೋಟಿಯವರ ದಾರ್ಶನಿಕ ಹೆಜ್ಜೆ ಗುರುತು ಉಳಿಸುತ್ತಿರುವುದು ಮಾತ್ರವಲ್ಲದೆ, ದಮನಿತರಾದ ನಮ್ಮಂತಹ ಅನೇಕರಿಗೆ ವೇದಿಕೆ ನೀಡುತ್ತಿದ್ದಾರೆ. ಕೋಟಿಯವರ ಹೆಸರನ್ನು ಮೈಸೂರು ನಗರದ ವೃತ್ತವೊಂದಕ್ಕೆ ಇಡಬೇಕೆಂಬುದು ನನ್ನ ಮನವಿಯಾಗಿದೆ. ಆ ಮೂಲಕ ಜನಮಾನಸದಲ್ಲಿ ‘ಕೆಂಪಂಗಿ ದೊರೆ’ ಕೋಟಿಯವರು ಸದಾ ಜೀವಂತವಾಗಿ ಇರುತ್ತಾರೆ.

– ಕೆ.ಮಹೇಶ್, ವಕ್ತಾರರು, ಜಿಲ್ಲಾ ಕಾಂಗ್ರೆಸ್ ಸಮಿತಿ.


ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ

ಹೆಗ್ಗೋಠಾರದಲ್ಲಿ ದಲಿತ ಮಹಿಳೆಯೊಬ್ಬರು ಸಾರ್ವಜನಿಕ ಟ್ಯಾಂಕ್‌ನ ನಲ್ಲಿಯಲ್ಲಿ ನೀರು ಕುಡಿದರೆಂಬ ಕ್ಷುಲ್ಲಕ ಕಾರಣಕ್ಕೆ ಸವರ್ಣಿಯರು ಆ ಟ್ಯಾಂಕ್‌ನಲ್ಲಿ ಸಂಗ್ರಹವಾಗಿದ್ದ ನೀರನ್ನ ಖಾಲಿ ಮಾಡಿ ಅದನ್ನು ಗೋಮೂತ್ರದಿಂದ ಶುದ್ಧೀಕರಣ ಮಾಡುವ ಮೂಲಕ ಬಹಿರಂಗವಾಗಿಯೇ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಇದು ನಾಗರಿಕ ಸಮಾಜ ಅನಾಗರಿಕರಂತೆ ನಡೆದುಕೊಂಡಿರುವಂತಹ ಒಂದು ಅಮಾನವೀಯವಾದ ಕೃತ್ಯ. ಈ ಘಟನೆಯಿಂದ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಜನಜಾಗೃತಿ ಮೂಡಿಸಬೇಕು.

-ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾಲ್ಲೂಕು.


ವಸ್ತ್ರ ಸಂಹಿತೆ ಮತ್ತು ವಿಶ್ವಕಪ್ ಫುಟಬಾಲ್

ಕತಾರ್ ದೇಶದಲ್ಲಿ ನಡೆಯುತ್ತಿರುವ ವಿಶ್ವಕಪ್ ಫುಟ್‌ಬಾಲ್ ಪಂದ್ಯವನ್ನು ವೀಕ್ಷಿಸುವರ ಮೇಲೆ ಅಲ್ಲಿ ಸರ್ಕಾರ ಹಲವಾರು ಸಂಹಿತೆಗಳನ್ನು ವಿಧಿಸಿದೆ. ಬಿಯರ್, ಮದ್ಯ ಸೇವಿಸುವಂತಿಲ್ಲ. ಮಹಿಳೆಯರು ಮೈ ಕಾಣುವ ಉಡುಪು ಧರಿಸುವಂತಿಲ್ಲ. ಯುವಪ್ರೇಮಿಗಳಿಗೆ ಅವಕಾಶವಿಲ್ಲ. ಹಂದಿ ಮಾಂಸ ಸೇವನೆ ನಿಷಿದ್ಧ. ಹೀಗೆ ತನ್ನ ದೇಶದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಪರಂಪರೆಗೆ ಅನುಗುಣವಾಗಿ ಕಟ್ಟು ಪಾಡುಗಳನ್ನು ವಿಧಿಸಿದೆ. ಇದನ್ನು ತಪ್ಪು ಎನ್ನಲಾಗದು. ಈ ಸಂಹಿತೆಗಳನ್ನು ಯಾರೂ ಪ್ರಶ್ನಿಸಿಲ್ಲ ಮತ್ತು ಅದನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ. ಅಕಸ್ಮಾತ್ ನಮ್ಮ ದೇಶದಲ್ಲೂ , ದೇಶದ ಸಂಸ್ಕ್ರತಿ, ಧಾರ್ಮಿಕತೆ, ಸಂಸ್ಕಾರ ಮತ್ತು ಪರಂಪರೆಗಳಿಗೆ ಅನುಗುಣವಾಗಿ ಇಂತಹ ಸಂಹಿತೆಗಳನ್ನು ವಿದಿಸಿದ್ದರೆ , ಇವುಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿತ್ತು.

-ರಮಾನಂದ ಶರ್ಮ, ಬೆಂಗಳೂರು.

andolana

Recent Posts

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

4 mins ago

ಕಣ್ಣೂರು| ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…

17 mins ago

ಜನವರಿ.29ರಿಂದ ಫೆಬ್ರವರಿ.06ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…

40 mins ago

ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಲಬುರ್ಗಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…

1 hour ago

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…

2 hours ago

ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್:‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

2 hours ago