ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 25 ಶುಕ್ರವಾರ 2022

ಸಾತಗಳ್ಳಿ ಕೆರೆಯನ್ನೂ ಉಳಿಸಿ!

ಅವಸಾನದ ಅಂಚಿಗೆ ತಲುಪಿದ್ದ ದೇವನೂರು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರತಿನಿಧಿಗಳು ಕಾರ್ಯಪ್ರವೃತ್ತ ರಾಗಿರುವುದು ತುಂಬಾ ಸಂತೋಷದಾಯಕ ಸಂಗತಿ. ಅದೇ ರೀತಿ ಸಾತಗಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸದೆ ಅದನ್ನು ಮುಚ್ಚಿ ಕ್ರಿಕೆಟ್ ಸ್ಟೇಡಿಯಂ ಮಾಡುತ್ತಿರುವುದು ಎಷ್ಟು ನ್ಯಾಯ? ಸಾತಗಳ್ಳಿ ಕೆರೆಗೆ ಬರುವ ನೀರಿನ ಸೆಲೆ ಬತ್ತಿದೆ ಎಂದು ಹೇಳಿ ಕೆರೆಯನ್ನು ಮುಚ್ಚುವ ಬದಲು ಮಳೆ ನೀರನ್ನು ಸಂಗ್ರಹ ಮಾಡುವ ಮೂಲಕ ಗಮನ ಹರಿಸಿ ಕೆರೆಯನ್ನು ಅಭಿವೃದ್ಧಿ ಪಡಿಸುವುದು ಉತ್ತಮ. ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ ಮಾಡದೆ ಬೇರೆ ಕಡೆ ಸರ್ಕಾರದವರು ಭೂಮಿಯನ್ನು ಗುರುತಿಸಿ ಕೊಡುವುದು ಸೂಕ್ತ. ಸಂಬಂಧ ಪಟ್ಟವರು ಇತ್ತಾ ಕಡೆ ಗಮನ ಹರಿಸಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್ , ಮೈಸೂರು.


ಜನಮಾನಸದಲ್ಲಿ ಮಾಸದ ‘ಕೆಂಪಗಿ ದೊರೆ’

ದಮನಿತರ ದನಿಯಾಗಿ, ಕಾರ್ಮಿಕರ ನೇತಾರರಾಗಿ ಜನಮಾನಸದಲ್ಲಿ ಸದಾ ಹಚ್ಚ ಹಸಿರಾಗಿ ಉಳಿದು, ತಳ ಸಮುದಾಯಕ್ಕೆ ಆಶಾಕಿರಣದ ಬೆಳಕಾದವರು ‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕರ ರಾಜಶೇಖರ ಕೋಟಿಯವರು. ಅವರು ಕೇವಲ ನೆನಪಲ್ಲ. ನಮ್ಮೊಂದಿಗೆ ಇದ್ದಾರೆ. ಅವರ ಆಶೋತ್ತರಗಳು ಸದಾ ನಮ್ಮನ್ನೂ ಬಡಿದೆಬ್ಬಿಸಿ ನಾವು ಸಾಮಾಜಿಕ ನ್ಯಾಯದ ಕೆಲಸಗಳು ಮಾಡಲು ಪ್ರೇರೇಪಿಸುತ್ತಿವೆ. ಅವರ ಅಕಾಲಿಕ ನಿಧನದ ಬಳಿಕವೂ ‘ಆಂದೋಲನ’ ಸಂಪಾದಕರು ಅದೇ ಹಾದಿಯಲ್ಲಿ ಸಾಗುವ ಮೂಲಕ ಕೋಟಿಯವರ ದಾರ್ಶನಿಕ ಹೆಜ್ಜೆ ಗುರುತು ಉಳಿಸುತ್ತಿರುವುದು ಮಾತ್ರವಲ್ಲದೆ, ದಮನಿತರಾದ ನಮ್ಮಂತಹ ಅನೇಕರಿಗೆ ವೇದಿಕೆ ನೀಡುತ್ತಿದ್ದಾರೆ. ಕೋಟಿಯವರ ಹೆಸರನ್ನು ಮೈಸೂರು ನಗರದ ವೃತ್ತವೊಂದಕ್ಕೆ ಇಡಬೇಕೆಂಬುದು ನನ್ನ ಮನವಿಯಾಗಿದೆ. ಆ ಮೂಲಕ ಜನಮಾನಸದಲ್ಲಿ ‘ಕೆಂಪಂಗಿ ದೊರೆ’ ಕೋಟಿಯವರು ಸದಾ ಜೀವಂತವಾಗಿ ಇರುತ್ತಾರೆ.

– ಕೆ.ಮಹೇಶ್, ವಕ್ತಾರರು, ಜಿಲ್ಲಾ ಕಾಂಗ್ರೆಸ್ ಸಮಿತಿ.


ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ

ಹೆಗ್ಗೋಠಾರದಲ್ಲಿ ದಲಿತ ಮಹಿಳೆಯೊಬ್ಬರು ಸಾರ್ವಜನಿಕ ಟ್ಯಾಂಕ್‌ನ ನಲ್ಲಿಯಲ್ಲಿ ನೀರು ಕುಡಿದರೆಂಬ ಕ್ಷುಲ್ಲಕ ಕಾರಣಕ್ಕೆ ಸವರ್ಣಿಯರು ಆ ಟ್ಯಾಂಕ್‌ನಲ್ಲಿ ಸಂಗ್ರಹವಾಗಿದ್ದ ನೀರನ್ನ ಖಾಲಿ ಮಾಡಿ ಅದನ್ನು ಗೋಮೂತ್ರದಿಂದ ಶುದ್ಧೀಕರಣ ಮಾಡುವ ಮೂಲಕ ಬಹಿರಂಗವಾಗಿಯೇ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಇದು ನಾಗರಿಕ ಸಮಾಜ ಅನಾಗರಿಕರಂತೆ ನಡೆದುಕೊಂಡಿರುವಂತಹ ಒಂದು ಅಮಾನವೀಯವಾದ ಕೃತ್ಯ. ಈ ಘಟನೆಯಿಂದ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಜನಜಾಗೃತಿ ಮೂಡಿಸಬೇಕು.

-ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾಲ್ಲೂಕು.


ವಸ್ತ್ರ ಸಂಹಿತೆ ಮತ್ತು ವಿಶ್ವಕಪ್ ಫುಟಬಾಲ್

ಕತಾರ್ ದೇಶದಲ್ಲಿ ನಡೆಯುತ್ತಿರುವ ವಿಶ್ವಕಪ್ ಫುಟ್‌ಬಾಲ್ ಪಂದ್ಯವನ್ನು ವೀಕ್ಷಿಸುವರ ಮೇಲೆ ಅಲ್ಲಿ ಸರ್ಕಾರ ಹಲವಾರು ಸಂಹಿತೆಗಳನ್ನು ವಿಧಿಸಿದೆ. ಬಿಯರ್, ಮದ್ಯ ಸೇವಿಸುವಂತಿಲ್ಲ. ಮಹಿಳೆಯರು ಮೈ ಕಾಣುವ ಉಡುಪು ಧರಿಸುವಂತಿಲ್ಲ. ಯುವಪ್ರೇಮಿಗಳಿಗೆ ಅವಕಾಶವಿಲ್ಲ. ಹಂದಿ ಮಾಂಸ ಸೇವನೆ ನಿಷಿದ್ಧ. ಹೀಗೆ ತನ್ನ ದೇಶದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಪರಂಪರೆಗೆ ಅನುಗುಣವಾಗಿ ಕಟ್ಟು ಪಾಡುಗಳನ್ನು ವಿಧಿಸಿದೆ. ಇದನ್ನು ತಪ್ಪು ಎನ್ನಲಾಗದು. ಈ ಸಂಹಿತೆಗಳನ್ನು ಯಾರೂ ಪ್ರಶ್ನಿಸಿಲ್ಲ ಮತ್ತು ಅದನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ. ಅಕಸ್ಮಾತ್ ನಮ್ಮ ದೇಶದಲ್ಲೂ , ದೇಶದ ಸಂಸ್ಕ್ರತಿ, ಧಾರ್ಮಿಕತೆ, ಸಂಸ್ಕಾರ ಮತ್ತು ಪರಂಪರೆಗಳಿಗೆ ಅನುಗುಣವಾಗಿ ಇಂತಹ ಸಂಹಿತೆಗಳನ್ನು ವಿದಿಸಿದ್ದರೆ , ಇವುಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿತ್ತು.

-ರಮಾನಂದ ಶರ್ಮ, ಬೆಂಗಳೂರು.

andolana

Recent Posts

ಟ್ರಂಪ್‌ ಮೇಲಿನ ದಾಳಿ ಇದೇ ಮೊದಲೇನಲ್ಲ ; ಈ ಹಿಂದೆಯೂ ನಡೆದಿತ್ತು ಹತ್ಯೆಗೆ ಯತ್ನ !

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ  ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ…

13 mins ago

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…

27 mins ago

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

41 mins ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

2 hours ago

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

2 hours ago