ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ವೈದ್ಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಈ ನಿರ್ಧಾರ ಶ್ಲಾಘನೀಯ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ಅನುದಾನ ಒದಗಿಸಿದರೆ, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಸಂಶೋಧನಾ ಕೇಂದ್ರವು ಕಾರ್ಯಾರಂಭ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವೈದ್ಯ ಶಿಕ್ಷಣ ಇಲಾಖೆ, ಹಣಕಾಸು ಇಲಾಖೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಂಡರೆ ಮೈಸೂರು ಮೆಡಿಕಲ್ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮತ್ತೊಂದು ಮೆಟ್ಟಿಲು ಏರಲು ಸಾಧ್ಯವಿದೆ.
-ನಂದಕುಮಾರ್, ಸರಸ್ವತಿ ಪುರಂ, ಮೈಸೂರು.
ಗುಂಡ್ಲುಪೇಟೆ ತಾಲೂಕಿನ ಅಸ್ಮಿತೆಯಂತಿದ್ದ ನಮ್ಮ ಹೆಮ್ಮೆಯ ಗುಂಡ್ಲುಹೊಳೆಯು ಹಲವು ದಶಕಗಳ ನಂತರ ಈಗ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ನಮ್ಮ ತಾಲೂಕಿನ ದೊಡ್ಡಕೆರೆಯೂ ತುಂಬಿ (ಅಮಾನಿಕೆರೆ) ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಚಿಕ್ಕಕೆರೆಗೆ ಆ ನೀರು ಹರಿದು ಬರುತ್ತಿದೆ. ಆದರೆ ಹೂಳು ತುಂಬಿದ್ದರಿಂದ ನೀರು ಸರಗವಾಗಿ ಹರಿದು ಚಿಕ್ಕಕೆರೆಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಅರಿತ ಗುಂಡ್ಲು ಪರಿಸರ ಬಳಗದ ಗೆಳೆಯರು ಭಾನುವಾರದ ದಿನ ಶ್ರಮದಾನದ ಮೂಲಕ ಸುಮಾರು ೩೦ ಅಡಿಗಳಷ್ಟು ಉದ್ದದ ಕಾಲುವೆಯನ್ನು ಸ್ವಚ್ಛಗೊಳಿಸಿದ್ದಾರೆ. ದಶಕಗಳಿಂದ ನೀರು ತುಂಬದೆ ಚಿಕ್ಕಕೆರೆ ಬರಿದಾಗಿದ್ದರಿಂದ ಕೆರೆಯ ಅಂಗಳ ಮತ್ತು ಕೆರೆಯ ಏರಿ ಸ್ವಚ್ಛಗೊಳಿಸಿದ್ದಾರೆ. ಬಳಗದ ಕಾರ್ಯ ಅನುಕರಣೀಯ.
-ಅಪುರಾ, ಗುಂಡ್ಲುಪೇಟೆ.
ಶತಾಬ್ದಿ ಎಕ್ಸ್ಪ್ರೆಸ್ ರೈಲು ಮತ್ತು ವಂದೇ ಭಾರತ್ ರೈಲುಗಳು ಮಂಡ್ಯದಲ್ಲಿ ಎರಡು ನಿಮಿಷ ನಿಂತು ಹೊರಡುವ ವ್ಯವಸ್ಥೆ ಆಗಬೇಕಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಈಗ ಶತಾಬ್ಧಿ ರೈಲಿನಲ್ಲಿ ಪ್ರಯಾಣ ಮಾಡುವವರು ಬೆಂಗಳೂರಿಗೆ ತೆರಳಬೇಕು ಇಲ್ಲವೇ ಮೈಸೂರಿಗೆ ತೆರಳಬೇಕು. ರೈಲು ಮಂಡ್ಯದ ಮೂಲಕ ಚಲಿಸಿದರೂ ನಿಲುಗಡೆ ಇಲ್ಲದೇ ಸೌಲಭ್ಯ ದೊರೆಯುತ್ತಿಲ್ಲ. ತ್ವರಿತವಾಗಿ ಮಂಡ್ಯದಲ್ಲಿ ಈ ಎರಡೂ ರೈಲುಗಳು ಎರಡು ನಿಮಿಷ ನಿಂತು ಹೊರಡುವ ವ್ಯವಸ್ಥೆ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಕೆಲವು ದಿನ ಪತ್ರಿಕೆಗಳು ಸೇರಿದಂತೆ, ಟಿವಿ ಚಾನಲ್ ರವರು ‘೬೭ನೇ ಕನ್ನಡ ರಾಜ್ಯೋತ್ಸವ’ವನ್ನು ಆಚರಿಸಲಾಯಿತು ಎಂದು ತಪ್ಪಾಗಿ ಅರ್ಥೈಸುತ್ತಾರೆ. ಆದರೆ ಇದು ‘ಕರ್ನಾಟಕ ರಾಜ್ಯೋತ್ಸವ’ ಎಂದಾಗ ಬೇಕು. ೧೯೫೬ ರಲ್ಲಿ, ಕರ್ನಾಟಕ ಅಸ್ತಿತ್ವಕ್ಕೆ ಬಂತು, ಹಾಗಾಗಿ ಇದು ೬೭ನೇ ಕರ್ನಾಟಕ ರಾಜ್ಯೋತ್ಸವ ಎಂದಾಗಬೇಕು.
-ಬೂಕನಕೆರೆ ವಿಜೇಂದ್ರ, ಮೈಸೂರು.
ಮೃತಪಟ್ಟ ಹುಲಿಯ ಎರಡು ಮರಿಗಳು ಜೀವಂತವಾಗಿರುವುದನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿರುವುದು ಸಂತಸದ ಸಂಗತಿ. ಈ ಮರಿಗಳನ್ನು ಹುಡುಕಿ ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಬಿಡುವ ಅಥವಾ ಅವುಗಳಿಗೆ ಅಪಾಯವಾಗದಂತೆ ರಕ್ಷಣೆ ಒದಗಿಸುವ ಕೆಲಸ ಆಗಬೇಕಿದೆ. ಹುಲಿಗಳ ಸಂಖ್ಯೆ ನಶಿಸುತ್ತಿರುವ ಹೊತ್ತಿನಲ್ಲಿ ಈ ಮರಿಗಳನ್ನು ರಕ್ಷಿಸುವ ಅಗತ್ಯವಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿರುವ ಹುಲಿ ಮರಿಗಳ ಶೋಧ ಕಾರ್ಯ ಯಶಸ್ವಿಯಾಗಲಿ. ಮರಿಗಳು ಜೀವಂತವಾಗಿ, ಸುರಕ್ಷಿತವಾಗಿರಲಿ.
-ಮೈನುದ್ದೀನ್, ಎನ್.ಆರ್. ಮೊಹಲ್ಲಾ, ಮೈಸೂರು.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…