ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 04 ಸೋಮವಾರ 2022

ಇಡಬ್ಲ್ಯೂಎಸ್‌ಗೆ ಮೀಸಲಾತಿ ಕುರಿತು ಪೂರ್ವಗ್ರಹ ಸರಿಯಲ್ಲ

ಚಾಮರಾಜನಗರ ತಾಲ್ಲೂಕಿನ ಮುತ್ತಿಗೆ ಗ್ರಾಮದಲ್ಲಿನ ಸವಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವು ಯಾವುದೇ ಹೋರಾಟ ಮಾಡದೆ ಇರುವ ಬ್ರಾಹ್ಮಣರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಅತ್ಯಂತ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ.

ಆದರೆ, ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ.೧೦ ಮೀಸಲಾತಿಯನ್ನು ನೀಡಿದೆಯೇ ವಿನಃ ಅಲ್ಲಿ ಯಾವ ಜಾತಿಯ ಬಗ್ಗೆ ಉಲ್ಲೇಖವಿರುವುದಿಲ್ಲ. ಜೊತೆಗೆ ಯಾವುದೇ ಮೀಸಲಾತಿಯ ವರ್ಗಕ್ಕೆ ಸೇರದೆ, ಕೇವಲ ಆರ್ಥಿಕವಾಗಿ ಹಿಂದುಳಿದ ಸಮುದಾಯದವರು ಸದರಿ ಸೌಲಭ್ಯಕ್ಕೆ ಅರ್ಹರು ಎಂಬುದಾಗಿದೆಯೇ ಹೊರತು, ಅದು ಕೇವಲ ಬ್ರಾಹ್ಮಣ ವರ್ಗಕ್ಕೆ ಮಾತ್ರ ಎಂಬುದು ಕೇವಲ ಪೂರ್ವಗ್ರಹ ಪೀಡಿತ ಹೇಳಿಕೆಯಾಗಿದೆ. ಜನಪ್ರತಿನಿಧಿಗಳಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕೇವಲ ಒಂದು ಸಮುದಾಯವನ್ನು ದೂಷಿಸುವುದನ್ನೇ ಕಾಯಕ ಮಾಡಿಕೊಳ್ಳಬಾರದು. -ಬ್ಯಾಂಕ್ ಶಿವಕುವಾರ್, ಜೆ.ಪಿ.ನಗರ, ಮೈಸೂರು


ಕಾಡು-ಕಾಡಿನ ನಡುವೆ ಸಂಪರ್ಕ ಬಲಪಡಿಸಿ

ಪ್ರಸ್ತುತ ದಿನಗಳಲ್ಲಿ ಕಾಡುಪ್ರಾಣಿಗಳ ಹಾವಳಿ, ದಾಳಿ ನಿರಂತರವಾಗಿಬಿಟ್ಟಿದೆ. ಚಿರತೆಯಂತಹ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ಈಗಾಗಲೇ ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ಇಬ್ಬರನ್ನು ಚಿರತೆ ಕೊಂದಿದೆ. ಈ ಬಗ್ಗೆ ಪತ್ರಿಕೆಗಳು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಿದ್ದೇವೆ.

ಕೆಲ ದಶಕಗಳ ಹಿಂದಷ್ಟೇ ಕಾಡಿನ ಪ್ರಮಾಣ ಹಿರಿದಾಗಿತ್ತು. ಪ್ರತಿ ಕಾಡಿಗೂ ಇದ್ದ ಸಂಪರ್ಕದ ಕೊಂಡಿ ತೀರ ಬಲವಾಗಿತ್ತು. ಕಾಡಿನಿಂದ ಕಾಡಿಗೆ ಪ್ರಾಣಿಗಳು ನಿರಾಯಸವಾಗಿ ಸಂಚಾರ ಮಾಡುತ್ತಿದ್ದವು. ಆದರೆ ಈಗ ಅತಿಯಾದ ನಗರೀಕರಣದ ಜೊತೆಗೆ ಅಕ್ರಮ-ಸಕ್ರಮದ ಹೆಸರಿನಲ್ಲಿ ಕಾಡಿನ ಭೂಮಿಗಳೆಲ್ಲ ಮನುಷ್ಯನ ಸ್ವತ್ತಾಗುತ್ತಿವೆ. ಅದರಿಂದ ಕಾಡಿನ ಪರಿಸರ ನಾಶವಾಗುತ್ತಿದೆ. ಹಾಗಾಗಿ ವನ್ಯಜೀವಿಗಳು ಆಹಾರ ಸಂಪಾದಿಸುವ ದೃಷ್ಟಿಯಿಂದ ನಾಡಿನತ್ತ ಮುಖ ಮಾಡುವಂತಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಮೊದಲು ಕಾಡು- ಕಾಡುಗಳ ನಡುವಿನ ಸಂಪರ್ಕ ಕೊಂಡಿಗಳು ಬಲವಾಗಬೇಕಿದೆ. ಇದರಿಂದ ವನ್ಯಜೀವಿಗಳ ಮುಕ್ತ ಸಂಚಾರಕ್ಕೆ ಅವಕಾಶ ಸಿಗುತ್ತದೆ. ಮಾನವ- ವನ್ಯಜೀವಿ ಸಂಘರ್ಷವು ನಿಯಂತ್ರಿಸಬಹುದು. ಇದರೊಂದಿಗೆ ಕಾಡಿನ ಪ್ರಾಣಿಗಳು ನಾಡಿನತ್ತ ಬಂದಾಗ ಅಲ್ಲಿನ ಜನರು ಜಾಗ್ರತೆವಹಿಸಬೇಕು. ಆ ಮೂಲಕ ಅನಾಹುತವನ್ನು ತಪ್ಪಿಸಲು ಮುಂದಾಗಬೇಕು.
-ಭೂಮಿಕಾ ಪೂಜಾರಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯ.


ಪ್ರೊ.ಕೆ.ಎಸ್.ರಂಗಪ್ಪಗೆ ಫೆಲೋಶಿಪ್ ಶ್ಲಾಘನೀಯ

ರಾಷ್ಟ್ರೀಯ ಫೆಲೋಶಿಪ್ ಯುನೆಸ್ಕೋ ಅಂಗ ಸಂಸ್ಥೆಯಾದ ವರ್ಲ್ಡ್ ಅಕಾಡೆಮಿ ಆಫ್ ಸೈನ್ಸ್‌ನ ೨೦೨೨ನೇ ಸಾಲಿನ ಫೆಲೋಷಿಪ್‌ಗೆ ಪ್ರೊ.ಕೆ.ಎಸ್.ರಂಗಪ್ಪ ಅವರು ಭಾಜನರಾಗಿರುವುದು ಶ್ಲಾಘನೀಯ ವಿಚಾರ. ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಮಹಮ್ಮದ್ ಎಚ್.ಎ.ಹಸನ್ ಅವರು ಪ್ರೊ.ಕೆ.ಎಸ್.ರಂಗಪ್ಪ ರವರಿಗೆ ಬರೆದಿರುವ ಪತ್ರದಲ್ಲಿ ವಿಜ್ಞಾನಕ್ಕೆ ನಿಮ್ಮ ಅತ್ಯುತ್ತಮ ಕೊಡುಗೆ ಮತ್ತು ಅಭಿವೃದ್ಧಿಶೀಲ ಜಗತ್ತಿನಲ್ಲಿ ಅದರ ಪ್ರಚಾರಕ್ಕೆ ಸ್ಪಷ್ಟವಾದ ಮನ್ನಣೆ ದೊರೆತಿದೆ.

ವಿಜ್ಞಾನಿಗಳಾದ ಪ್ರೊ.ಸಿ.ಎನ್.ಆರ್.ರಾವ್ ಮತ್ತು ಪ್ರೊ.ಗೋವರ್ಧನ್ ಮೆಹ್ತಾ ಅವರ ನಂತರ ಬಹಳ ವರ್ಷಗಳ ಬಳಿಕ ಮೈಸೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಯಾಗಿ, ಪ್ರಾಧ್ಯಾಪಕರಾಗಿ ಹಾಗೂ ಉಪಕುಲಪತಿಗಳಾಗಿ ಕಾರ್ಯ ನಿರ್ವಹಿಸಿದ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ಈ ಫೆಲೋಶಿಪ್ ದೊರಕಿರುವುದು ಮೈಸೂರು ವಿವಿಗೆ ಮತ್ತೊಂದು ಗರಿಮೆ. ಇದರಿಂದಾಗಿ ಮೈಸೂರಿನ ಯುವ ವಿಜ್ಞಾನಿಗಳ ಉನ್ನತ ಅಧ್ಯಯನಕ್ಕೆ ವಿವಿದೆಡೆ ಕಳುಹಿಸಲು ಶಿಫಾರಸು ಮಾಡಲು ಅವಕಾಶ ಲಭಿಸಿದೆ ಎಂಬುದು ಸಂತಸದ ಸಂಗತಿ.
-ಬೆಸಗರಹಳ್ಳಿ ರವಿ ಪ್ರಸಾದ್, ಕೆ.ಸಿ.ನಗರ, ಮೈಸೂರು


ಗೋಹತ್ಯೆ ನಿಷೇಧದಿಂದ ರೈತರಿಗೆ ಸಮಸ್ಯೆ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿರುವುದು ಯಾರಿಗೆ ಲಾಭವಾಗಿದೆಯೇ? ಗೊತ್ತಿಲ್ಲ. ಆದರೆ, ಕೃಷಿಯನ್ನೇ ನಂಬಿ ಜಾನುವಾರುಗಳಿಂದ, ವ್ಯವಸಾಯ ಮಾಡುವ ರೈತಾಪಿ ವರ್ಗಕ್ಕಂತೂ ತೀವ್ರ ತೊಂದರೆಯಾಗಿದೆ. ವಯಸ್ಸಾದ ಜಾನುವಾರುಗಳನ್ನು ನಿರ್ವಹಣೆ ಮಾಡುವುದಾದರೂ ಹೇಗೆ? ತಾವೇ ಸಾಕಿದಂತಹ ಜಾನುವಾರುಗಳು ತಮ್ಮ ಕಣ್ಣ ಮುಂದೆಯೇ ಪ್ರಾಣ ಬಿಡುವುದನ್ನು ರೈತರು ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ವುಂಸ್ಸಾಗಿ ಉಳುಮೆ ವಾಡಲು ಶಕ್ತವಿಲ್ಲದ ಜಾನುವಾರುಗಳಿಗೆ ತಲಾ ೧೦,೦೦೦ ರೂ.ಗಳನ್ನು ಜಾನುವಾರುಗಳ ನಿರ್ವಹಣಾ ವೆಚ್ಚವನ್ನು ಸರ್ಕಾರವೇ ರೈತರಿಗೆ ವಿತರಿಸಬೇಕು. ಆಗ ರೈತರು ವುಂಸ್ಸಾದ ಗೋವುಗಳ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ. ಇಲ್ಲವೇ ಈಗಾಗಲೇ ಇರುವ ಸರ್ಕಾರದ ಪುಣ್ಯ ಕೋಟಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರುವಂತಾಗಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು .

andolana

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

4 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

7 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

10 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

10 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

10 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

10 hours ago