ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 04 ಸೋಮವಾರ 2022

ಇಡಬ್ಲ್ಯೂಎಸ್‌ಗೆ ಮೀಸಲಾತಿ ಕುರಿತು ಪೂರ್ವಗ್ರಹ ಸರಿಯಲ್ಲ

ಚಾಮರಾಜನಗರ ತಾಲ್ಲೂಕಿನ ಮುತ್ತಿಗೆ ಗ್ರಾಮದಲ್ಲಿನ ಸವಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವು ಯಾವುದೇ ಹೋರಾಟ ಮಾಡದೆ ಇರುವ ಬ್ರಾಹ್ಮಣರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಅತ್ಯಂತ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ.

ಆದರೆ, ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ.೧೦ ಮೀಸಲಾತಿಯನ್ನು ನೀಡಿದೆಯೇ ವಿನಃ ಅಲ್ಲಿ ಯಾವ ಜಾತಿಯ ಬಗ್ಗೆ ಉಲ್ಲೇಖವಿರುವುದಿಲ್ಲ. ಜೊತೆಗೆ ಯಾವುದೇ ಮೀಸಲಾತಿಯ ವರ್ಗಕ್ಕೆ ಸೇರದೆ, ಕೇವಲ ಆರ್ಥಿಕವಾಗಿ ಹಿಂದುಳಿದ ಸಮುದಾಯದವರು ಸದರಿ ಸೌಲಭ್ಯಕ್ಕೆ ಅರ್ಹರು ಎಂಬುದಾಗಿದೆಯೇ ಹೊರತು, ಅದು ಕೇವಲ ಬ್ರಾಹ್ಮಣ ವರ್ಗಕ್ಕೆ ಮಾತ್ರ ಎಂಬುದು ಕೇವಲ ಪೂರ್ವಗ್ರಹ ಪೀಡಿತ ಹೇಳಿಕೆಯಾಗಿದೆ. ಜನಪ್ರತಿನಿಧಿಗಳಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕೇವಲ ಒಂದು ಸಮುದಾಯವನ್ನು ದೂಷಿಸುವುದನ್ನೇ ಕಾಯಕ ಮಾಡಿಕೊಳ್ಳಬಾರದು. -ಬ್ಯಾಂಕ್ ಶಿವಕುವಾರ್, ಜೆ.ಪಿ.ನಗರ, ಮೈಸೂರು


ಕಾಡು-ಕಾಡಿನ ನಡುವೆ ಸಂಪರ್ಕ ಬಲಪಡಿಸಿ

ಪ್ರಸ್ತುತ ದಿನಗಳಲ್ಲಿ ಕಾಡುಪ್ರಾಣಿಗಳ ಹಾವಳಿ, ದಾಳಿ ನಿರಂತರವಾಗಿಬಿಟ್ಟಿದೆ. ಚಿರತೆಯಂತಹ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ಈಗಾಗಲೇ ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ಇಬ್ಬರನ್ನು ಚಿರತೆ ಕೊಂದಿದೆ. ಈ ಬಗ್ಗೆ ಪತ್ರಿಕೆಗಳು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಿದ್ದೇವೆ.

ಕೆಲ ದಶಕಗಳ ಹಿಂದಷ್ಟೇ ಕಾಡಿನ ಪ್ರಮಾಣ ಹಿರಿದಾಗಿತ್ತು. ಪ್ರತಿ ಕಾಡಿಗೂ ಇದ್ದ ಸಂಪರ್ಕದ ಕೊಂಡಿ ತೀರ ಬಲವಾಗಿತ್ತು. ಕಾಡಿನಿಂದ ಕಾಡಿಗೆ ಪ್ರಾಣಿಗಳು ನಿರಾಯಸವಾಗಿ ಸಂಚಾರ ಮಾಡುತ್ತಿದ್ದವು. ಆದರೆ ಈಗ ಅತಿಯಾದ ನಗರೀಕರಣದ ಜೊತೆಗೆ ಅಕ್ರಮ-ಸಕ್ರಮದ ಹೆಸರಿನಲ್ಲಿ ಕಾಡಿನ ಭೂಮಿಗಳೆಲ್ಲ ಮನುಷ್ಯನ ಸ್ವತ್ತಾಗುತ್ತಿವೆ. ಅದರಿಂದ ಕಾಡಿನ ಪರಿಸರ ನಾಶವಾಗುತ್ತಿದೆ. ಹಾಗಾಗಿ ವನ್ಯಜೀವಿಗಳು ಆಹಾರ ಸಂಪಾದಿಸುವ ದೃಷ್ಟಿಯಿಂದ ನಾಡಿನತ್ತ ಮುಖ ಮಾಡುವಂತಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಮೊದಲು ಕಾಡು- ಕಾಡುಗಳ ನಡುವಿನ ಸಂಪರ್ಕ ಕೊಂಡಿಗಳು ಬಲವಾಗಬೇಕಿದೆ. ಇದರಿಂದ ವನ್ಯಜೀವಿಗಳ ಮುಕ್ತ ಸಂಚಾರಕ್ಕೆ ಅವಕಾಶ ಸಿಗುತ್ತದೆ. ಮಾನವ- ವನ್ಯಜೀವಿ ಸಂಘರ್ಷವು ನಿಯಂತ್ರಿಸಬಹುದು. ಇದರೊಂದಿಗೆ ಕಾಡಿನ ಪ್ರಾಣಿಗಳು ನಾಡಿನತ್ತ ಬಂದಾಗ ಅಲ್ಲಿನ ಜನರು ಜಾಗ್ರತೆವಹಿಸಬೇಕು. ಆ ಮೂಲಕ ಅನಾಹುತವನ್ನು ತಪ್ಪಿಸಲು ಮುಂದಾಗಬೇಕು.
-ಭೂಮಿಕಾ ಪೂಜಾರಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯ.


ಪ್ರೊ.ಕೆ.ಎಸ್.ರಂಗಪ್ಪಗೆ ಫೆಲೋಶಿಪ್ ಶ್ಲಾಘನೀಯ

ರಾಷ್ಟ್ರೀಯ ಫೆಲೋಶಿಪ್ ಯುನೆಸ್ಕೋ ಅಂಗ ಸಂಸ್ಥೆಯಾದ ವರ್ಲ್ಡ್ ಅಕಾಡೆಮಿ ಆಫ್ ಸೈನ್ಸ್‌ನ ೨೦೨೨ನೇ ಸಾಲಿನ ಫೆಲೋಷಿಪ್‌ಗೆ ಪ್ರೊ.ಕೆ.ಎಸ್.ರಂಗಪ್ಪ ಅವರು ಭಾಜನರಾಗಿರುವುದು ಶ್ಲಾಘನೀಯ ವಿಚಾರ. ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಮಹಮ್ಮದ್ ಎಚ್.ಎ.ಹಸನ್ ಅವರು ಪ್ರೊ.ಕೆ.ಎಸ್.ರಂಗಪ್ಪ ರವರಿಗೆ ಬರೆದಿರುವ ಪತ್ರದಲ್ಲಿ ವಿಜ್ಞಾನಕ್ಕೆ ನಿಮ್ಮ ಅತ್ಯುತ್ತಮ ಕೊಡುಗೆ ಮತ್ತು ಅಭಿವೃದ್ಧಿಶೀಲ ಜಗತ್ತಿನಲ್ಲಿ ಅದರ ಪ್ರಚಾರಕ್ಕೆ ಸ್ಪಷ್ಟವಾದ ಮನ್ನಣೆ ದೊರೆತಿದೆ.

ವಿಜ್ಞಾನಿಗಳಾದ ಪ್ರೊ.ಸಿ.ಎನ್.ಆರ್.ರಾವ್ ಮತ್ತು ಪ್ರೊ.ಗೋವರ್ಧನ್ ಮೆಹ್ತಾ ಅವರ ನಂತರ ಬಹಳ ವರ್ಷಗಳ ಬಳಿಕ ಮೈಸೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಯಾಗಿ, ಪ್ರಾಧ್ಯಾಪಕರಾಗಿ ಹಾಗೂ ಉಪಕುಲಪತಿಗಳಾಗಿ ಕಾರ್ಯ ನಿರ್ವಹಿಸಿದ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ಈ ಫೆಲೋಶಿಪ್ ದೊರಕಿರುವುದು ಮೈಸೂರು ವಿವಿಗೆ ಮತ್ತೊಂದು ಗರಿಮೆ. ಇದರಿಂದಾಗಿ ಮೈಸೂರಿನ ಯುವ ವಿಜ್ಞಾನಿಗಳ ಉನ್ನತ ಅಧ್ಯಯನಕ್ಕೆ ವಿವಿದೆಡೆ ಕಳುಹಿಸಲು ಶಿಫಾರಸು ಮಾಡಲು ಅವಕಾಶ ಲಭಿಸಿದೆ ಎಂಬುದು ಸಂತಸದ ಸಂಗತಿ.
-ಬೆಸಗರಹಳ್ಳಿ ರವಿ ಪ್ರಸಾದ್, ಕೆ.ಸಿ.ನಗರ, ಮೈಸೂರು


ಗೋಹತ್ಯೆ ನಿಷೇಧದಿಂದ ರೈತರಿಗೆ ಸಮಸ್ಯೆ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿರುವುದು ಯಾರಿಗೆ ಲಾಭವಾಗಿದೆಯೇ? ಗೊತ್ತಿಲ್ಲ. ಆದರೆ, ಕೃಷಿಯನ್ನೇ ನಂಬಿ ಜಾನುವಾರುಗಳಿಂದ, ವ್ಯವಸಾಯ ಮಾಡುವ ರೈತಾಪಿ ವರ್ಗಕ್ಕಂತೂ ತೀವ್ರ ತೊಂದರೆಯಾಗಿದೆ. ವಯಸ್ಸಾದ ಜಾನುವಾರುಗಳನ್ನು ನಿರ್ವಹಣೆ ಮಾಡುವುದಾದರೂ ಹೇಗೆ? ತಾವೇ ಸಾಕಿದಂತಹ ಜಾನುವಾರುಗಳು ತಮ್ಮ ಕಣ್ಣ ಮುಂದೆಯೇ ಪ್ರಾಣ ಬಿಡುವುದನ್ನು ರೈತರು ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ವುಂಸ್ಸಾಗಿ ಉಳುಮೆ ವಾಡಲು ಶಕ್ತವಿಲ್ಲದ ಜಾನುವಾರುಗಳಿಗೆ ತಲಾ ೧೦,೦೦೦ ರೂ.ಗಳನ್ನು ಜಾನುವಾರುಗಳ ನಿರ್ವಹಣಾ ವೆಚ್ಚವನ್ನು ಸರ್ಕಾರವೇ ರೈತರಿಗೆ ವಿತರಿಸಬೇಕು. ಆಗ ರೈತರು ವುಂಸ್ಸಾದ ಗೋವುಗಳ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ. ಇಲ್ಲವೇ ಈಗಾಗಲೇ ಇರುವ ಸರ್ಕಾರದ ಪುಣ್ಯ ಕೋಟಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರುವಂತಾಗಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು .

andolana

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

1 hour ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

8 hours ago