ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 27 ಮಂಗಳವಾರ 2022

ನಾಡಗೀತೆಗೆ ಕಾಲಮಿತಿ ನಿಗದಿ
ನಾಡಗೀತೆ ಗಾಯನಕ್ಕೆ ಧಾಟಿ ಮತ್ತು ೨.೩೦ ನಿಮಿಷ ಕಾಲಮಿತಿಯನ್ನು ನಿಗದಿಪಡಿಸಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯನ್ನು ಅಧಿಕೃತಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
ಮೈಸೂರು ರಾಜ್ಯವಿದ್ದಾಗ ಬಸಪ್ಪಶಾಸ್ತ್ರಿಗಳು ರಚಿಸಿದ ಕಾಯೌ ಶ್ರೀ ಗೌರಿ ನಾಡಗೀತೆಯಾಗಿ ಎಲ್ಲೆಡೆ ಹಾಡಲಾಗುತ್ತಿತ್ತು, ನಂತರ ಕರ್ನಾಟಕ ರಾಜ್ಯ ರಚನೆಯಾದ ಬಳಿಕ ಕುವೆಂಪುರವರು ರಚಿಸಿದ ಭಾರತ ಜನನೀಯ ತನುಜಾತೆ ಹಾಡುತ್ತಿದ್ದದರೂ ಅದನ್ನು ಅಧಿಕೃತವಾಗಿ ನಾಡಗೀತೆಯೆಂದು ಘೋಷಿಸಿರಲಿಲ್ಲ. ೨೦೦೪ ಫೆಬ್ರವರಿ ೨೩ರಂದು ಕುವೆಂಪುರವರ ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಭಾರತ ಜನನಿಯ ತನುಜಾತೆ ಗೀತೆಯನ್ನು ರಾಜ್ಯದ ಅಧಿಕೃತ ನಾಡಗೀತೆಯನ್ನಾಗಿ ಘೋಷಿಸಿತು. ಇದೀಗ ಸಂಗೀತ ವಿದುಷಿ ಎಚ್.ಆರ್.ಲೀಲಾವತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಶಿಫಾರಸು ಮಾಡಿದ ಪ್ರಕಾರ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಸಾಂಸ್ಕೃತಿಕ ವೇದಿಕೆಗಳಲ್ಲಿ’ ಶಾಲಾ ಕಾಲೇಜುಗಳಲ್ಲಿ ಹಾಡುವಾಗ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ೨.೩೦ ನಿಮಿಷಗಳ ಕಾಲಾವಧಿಯಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಅಧಿಕೃತಗೊಳಿಸಿದೆ. ಇದು ನಮ್ಮ ಮೈಸೂರಿನ ಸಾಂಸ್ಕೃತಿಕತೆಗೆ ಕಲಾವಿದರ ತವರೂರಿಗೆ ಸಂದ ಗೌರವವಾಗಿದೆ, ಮೈಸೂರು ಕಲಾವಿದರ ಬಹಳ ವರ್ಷದ ಮಹದಾಸೆ ಈಡೇರಿದೆ. ನಿರ್ಧಾರ ಕೈಗೊಂಡು ಅನುಮೋದನೆ ಮಾಡಿದ ರಾಜ್ಯ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
ಅಜಯ್ ಶಾಸ್ತ್ರಿ, ನಿರೂಪಕ ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕ, ಮೈಸೂರು.

andolanait

Recent Posts

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

44 mins ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

1 hour ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

1 hour ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

2 hours ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

2 hours ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

3 hours ago