ನಾಡಗೀತೆಗೆ ಕಾಲಮಿತಿ ನಿಗದಿ
ನಾಡಗೀತೆ ಗಾಯನಕ್ಕೆ ಧಾಟಿ ಮತ್ತು ೨.೩೦ ನಿಮಿಷ ಕಾಲಮಿತಿಯನ್ನು ನಿಗದಿಪಡಿಸಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯನ್ನು ಅಧಿಕೃತಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
ಮೈಸೂರು ರಾಜ್ಯವಿದ್ದಾಗ ಬಸಪ್ಪಶಾಸ್ತ್ರಿಗಳು ರಚಿಸಿದ ಕಾಯೌ ಶ್ರೀ ಗೌರಿ ನಾಡಗೀತೆಯಾಗಿ ಎಲ್ಲೆಡೆ ಹಾಡಲಾಗುತ್ತಿತ್ತು, ನಂತರ ಕರ್ನಾಟಕ ರಾಜ್ಯ ರಚನೆಯಾದ ಬಳಿಕ ಕುವೆಂಪುರವರು ರಚಿಸಿದ ಭಾರತ ಜನನೀಯ ತನುಜಾತೆ ಹಾಡುತ್ತಿದ್ದದರೂ ಅದನ್ನು ಅಧಿಕೃತವಾಗಿ ನಾಡಗೀತೆಯೆಂದು ಘೋಷಿಸಿರಲಿಲ್ಲ. ೨೦೦೪ ಫೆಬ್ರವರಿ ೨೩ರಂದು ಕುವೆಂಪುರವರ ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಭಾರತ ಜನನಿಯ ತನುಜಾತೆ ಗೀತೆಯನ್ನು ರಾಜ್ಯದ ಅಧಿಕೃತ ನಾಡಗೀತೆಯನ್ನಾಗಿ ಘೋಷಿಸಿತು. ಇದೀಗ ಸಂಗೀತ ವಿದುಷಿ ಎಚ್.ಆರ್.ಲೀಲಾವತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಶಿಫಾರಸು ಮಾಡಿದ ಪ್ರಕಾರ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಸಾಂಸ್ಕೃತಿಕ ವೇದಿಕೆಗಳಲ್ಲಿ’ ಶಾಲಾ ಕಾಲೇಜುಗಳಲ್ಲಿ ಹಾಡುವಾಗ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ೨.೩೦ ನಿಮಿಷಗಳ ಕಾಲಾವಧಿಯಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಅಧಿಕೃತಗೊಳಿಸಿದೆ. ಇದು ನಮ್ಮ ಮೈಸೂರಿನ ಸಾಂಸ್ಕೃತಿಕತೆಗೆ ಕಲಾವಿದರ ತವರೂರಿಗೆ ಸಂದ ಗೌರವವಾಗಿದೆ, ಮೈಸೂರು ಕಲಾವಿದರ ಬಹಳ ವರ್ಷದ ಮಹದಾಸೆ ಈಡೇರಿದೆ. ನಿರ್ಧಾರ ಕೈಗೊಂಡು ಅನುಮೋದನೆ ಮಾಡಿದ ರಾಜ್ಯ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
–ಅಜಯ್ ಶಾಸ್ತ್ರಿ, ನಿರೂಪಕ ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕ, ಮೈಸೂರು.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…