ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 27 ಮಂಗಳವಾರ 2022

ನಾಡಗೀತೆಗೆ ಕಾಲಮಿತಿ ನಿಗದಿ
ನಾಡಗೀತೆ ಗಾಯನಕ್ಕೆ ಧಾಟಿ ಮತ್ತು ೨.೩೦ ನಿಮಿಷ ಕಾಲಮಿತಿಯನ್ನು ನಿಗದಿಪಡಿಸಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯನ್ನು ಅಧಿಕೃತಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
ಮೈಸೂರು ರಾಜ್ಯವಿದ್ದಾಗ ಬಸಪ್ಪಶಾಸ್ತ್ರಿಗಳು ರಚಿಸಿದ ಕಾಯೌ ಶ್ರೀ ಗೌರಿ ನಾಡಗೀತೆಯಾಗಿ ಎಲ್ಲೆಡೆ ಹಾಡಲಾಗುತ್ತಿತ್ತು, ನಂತರ ಕರ್ನಾಟಕ ರಾಜ್ಯ ರಚನೆಯಾದ ಬಳಿಕ ಕುವೆಂಪುರವರು ರಚಿಸಿದ ಭಾರತ ಜನನೀಯ ತನುಜಾತೆ ಹಾಡುತ್ತಿದ್ದದರೂ ಅದನ್ನು ಅಧಿಕೃತವಾಗಿ ನಾಡಗೀತೆಯೆಂದು ಘೋಷಿಸಿರಲಿಲ್ಲ. ೨೦೦೪ ಫೆಬ್ರವರಿ ೨೩ರಂದು ಕುವೆಂಪುರವರ ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಭಾರತ ಜನನಿಯ ತನುಜಾತೆ ಗೀತೆಯನ್ನು ರಾಜ್ಯದ ಅಧಿಕೃತ ನಾಡಗೀತೆಯನ್ನಾಗಿ ಘೋಷಿಸಿತು. ಇದೀಗ ಸಂಗೀತ ವಿದುಷಿ ಎಚ್.ಆರ್.ಲೀಲಾವತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಶಿಫಾರಸು ಮಾಡಿದ ಪ್ರಕಾರ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಸಾಂಸ್ಕೃತಿಕ ವೇದಿಕೆಗಳಲ್ಲಿ’ ಶಾಲಾ ಕಾಲೇಜುಗಳಲ್ಲಿ ಹಾಡುವಾಗ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ೨.೩೦ ನಿಮಿಷಗಳ ಕಾಲಾವಧಿಯಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಅಧಿಕೃತಗೊಳಿಸಿದೆ. ಇದು ನಮ್ಮ ಮೈಸೂರಿನ ಸಾಂಸ್ಕೃತಿಕತೆಗೆ ಕಲಾವಿದರ ತವರೂರಿಗೆ ಸಂದ ಗೌರವವಾಗಿದೆ, ಮೈಸೂರು ಕಲಾವಿದರ ಬಹಳ ವರ್ಷದ ಮಹದಾಸೆ ಈಡೇರಿದೆ. ನಿರ್ಧಾರ ಕೈಗೊಂಡು ಅನುಮೋದನೆ ಮಾಡಿದ ರಾಜ್ಯ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
ಅಜಯ್ ಶಾಸ್ತ್ರಿ, ನಿರೂಪಕ ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕ, ಮೈಸೂರು.

andolanait

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

2 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

2 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

2 hours ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

4 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

5 hours ago