ನಾಡಗೀತೆಗೆ ಕಾಲಮಿತಿ ನಿಗದಿ
ನಾಡಗೀತೆ ಗಾಯನಕ್ಕೆ ಧಾಟಿ ಮತ್ತು ೨.೩೦ ನಿಮಿಷ ಕಾಲಮಿತಿಯನ್ನು ನಿಗದಿಪಡಿಸಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯನ್ನು ಅಧಿಕೃತಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
ಮೈಸೂರು ರಾಜ್ಯವಿದ್ದಾಗ ಬಸಪ್ಪಶಾಸ್ತ್ರಿಗಳು ರಚಿಸಿದ ಕಾಯೌ ಶ್ರೀ ಗೌರಿ ನಾಡಗೀತೆಯಾಗಿ ಎಲ್ಲೆಡೆ ಹಾಡಲಾಗುತ್ತಿತ್ತು, ನಂತರ ಕರ್ನಾಟಕ ರಾಜ್ಯ ರಚನೆಯಾದ ಬಳಿಕ ಕುವೆಂಪುರವರು ರಚಿಸಿದ ಭಾರತ ಜನನೀಯ ತನುಜಾತೆ ಹಾಡುತ್ತಿದ್ದದರೂ ಅದನ್ನು ಅಧಿಕೃತವಾಗಿ ನಾಡಗೀತೆಯೆಂದು ಘೋಷಿಸಿರಲಿಲ್ಲ. ೨೦೦೪ ಫೆಬ್ರವರಿ ೨೩ರಂದು ಕುವೆಂಪುರವರ ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಭಾರತ ಜನನಿಯ ತನುಜಾತೆ ಗೀತೆಯನ್ನು ರಾಜ್ಯದ ಅಧಿಕೃತ ನಾಡಗೀತೆಯನ್ನಾಗಿ ಘೋಷಿಸಿತು. ಇದೀಗ ಸಂಗೀತ ವಿದುಷಿ ಎಚ್.ಆರ್.ಲೀಲಾವತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಶಿಫಾರಸು ಮಾಡಿದ ಪ್ರಕಾರ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಸಾಂಸ್ಕೃತಿಕ ವೇದಿಕೆಗಳಲ್ಲಿ’ ಶಾಲಾ ಕಾಲೇಜುಗಳಲ್ಲಿ ಹಾಡುವಾಗ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ೨.೩೦ ನಿಮಿಷಗಳ ಕಾಲಾವಧಿಯಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಅಧಿಕೃತಗೊಳಿಸಿದೆ. ಇದು ನಮ್ಮ ಮೈಸೂರಿನ ಸಾಂಸ್ಕೃತಿಕತೆಗೆ ಕಲಾವಿದರ ತವರೂರಿಗೆ ಸಂದ ಗೌರವವಾಗಿದೆ, ಮೈಸೂರು ಕಲಾವಿದರ ಬಹಳ ವರ್ಷದ ಮಹದಾಸೆ ಈಡೇರಿದೆ. ನಿರ್ಧಾರ ಕೈಗೊಂಡು ಅನುಮೋದನೆ ಮಾಡಿದ ರಾಜ್ಯ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು.
–ಅಜಯ್ ಶಾಸ್ತ್ರಿ, ನಿರೂಪಕ ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕ, ಮೈಸೂರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…