ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 01 ಶನಿವಾರ 2022

ಜಯಲಕ್ಷ್ಮಿವಿಲಾಸ ಅರಮನೆಗಿಲ್ಲ ದಸರೆ ವೈಭವ
ಈ ಬಾರಿ ಮೈಸೂರು ನಗರದಲ್ಲಿ ದಸರೆ ವೈಭವವು ಇಮ್ಮಡಿಯಾಗಿದೆ. ಇಡೀ ನಗರವೇ ದೀಪದ ಬೆಳಕಿನಲ್ಲಿ ಜಗಮಗಿಸುತ್ತಿದೆ. ವೃಕ್ಷಗಳು, ರಸ್ತೆಗಳು, ವಿವಿಧ ಕಟ್ಟಡಗಳು, ಸ್ಮಾರಕಗಳು, ಪ್ರತಿಮೆಗಳು, ಪಾರಂಪರಿಕ ಕಟ್ಟಡಗಳು ಹೀಗೆ ಎಲ್ಲಾ ಕಡೆ ದೀಪಾಲಂಕೃತಗೊಂಡು ಪಾರಂಪರಿಕ ಕಟ್ಟಡಗಳು ಅದ್ಭುತವಾಗಿ ಕಾಣುತ್ತಿವೆ. ಆದರೆ, ಏನು ಶಾಪವೋ ಕಾಣೆ ಮೈಸೂರಿನ ಅರಮನೆಗೂ ಮುಂಚೆಯೇ ನಾಲ್ವಡಿ ಕೃಷ್ಣರಾಜ ಒಡೆಯರಿಂದ ನಿರ್ಮಾಣಗೊಂಡ ಜಯಲಕ್ಷ್ಮಿವಿಲಾಸ ಅರಮನೆ ಯಾವುದೇ ವೈಭವವಿಲ್ಲದೆ ಹಳೆಯ ಬಂಗಲೆಯಂತೆ ಕಾಣುತ್ತಿದೆ. ಜಯಲಕ್ಷ್ಮಿ ವಿಲಾಸ ಅರಮನೆಯು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿದ್ದು ಇದು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದೆ. ಇದನ್ನು ವಸ್ತು ಸಂಗ್ರಹಾಲಯವಾಗಿಯೂ ಮಾರ್ಪಾಡು ಮಾಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಅರಮನೆಯು ಶಿಥಿಲಾವಸ್ಥೆ ತಲುಪಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಅರಮನೆಯ ಮಾಳಿಗೆಗಳು ಸೋರುತ್ತಿವೆ. ದಸರಾ ಸಂದರ್ಭದಲ್ಲಿ ಇದನ್ನು ಸರಿಪಡಿಸುವ ಕೆಲಸ ಮಾಡಬೇಕು. ಸರ್ಕಾರ ಹಾಗೂ ಸಂಬಂಧಪಟ್ಟವರು ಈ ಪಾರಂಪರಿಕ ಕಟ್ಟಡವನ್ನು ಉಳಿಸುವ ಕಡೆ ಗಮನ ನೀಡಬೇಕು ಹಾಗೂ ದಸರೆ ಸಂದರ್ಭದಲ್ಲಿ ಅರಮನೆಗೆ ದೀಪಾಲಂಕಾರ ಮಾಡಬೇಕು ಎಂಬುದು ಸಾರ್ವಜನಿಕರ ಆಗ್ರಹ.
-ಲಕ್ಷ್ಮಿ ಕಿಶೋರ್ ಅರಸ್, ಮಾನಸಗಂಗೋತ್ರಿ, ಮೈಸೂರು.


ತ್ಯಾಗ
ದೇಶಕ್ಕಾಗಿ,
ಸ್ವಾತಂತ್ರ್ಯಕ್ಕಾಗಿ
ಹುತಾತ್ಮರಾದರು ಅಂದು
ಮಹಾತ್ಮ ಗಾಂಧಿ
ಹೋಗಿ ಹೋಗಿ..,
ಬಂತಲ್ಲ ಅವರ ಜಯಂತಿ
ರ(ಜೆ)ವಿ ವಾರವೆಂದು
ಕೊರಗುತ್ತಿಹರು ಇಂದು
ಹಲವಾರು ಮಂದಿ !
ಮ.ಗು.ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಭಣಗುಟ್ಟುತ್ತಿರುವ ಗಾನಭಾರತಿ ಸಭಾಂಗಣ
ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ, ಕುವೆಂಪು ನಗರದ ಗಾನಭಾರತೀ ಸಭಾಂಗಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೇಕ್ಷಕರಿಲ್ಲದೇ ಇಡೀ ಸಭಾಂಗಣವೇ ಭಣಗುಟ್ಟುತ್ತಿದೆ. ವೇದಿಕೆಯ ಕೆಳಗೆ ಕೇವಲ ಹದಿನೈದರಿಂದ ಇಪ್ಪತ್ತು ಜನರೂ ಇರಲಿಲ್ಲ (ಗುರುವಾರದಂದು) ಇಷ್ಟೊಂದು ಹಣ ಖರ್ಚು ಮಾಡುತ್ತಿರುವುದು ಯಾರ ಹಿತಕ್ಕಾಗಿ? ಇದು ಆಯೋಜಕರ ಪ್ರಚಾರದ ಕೊರತೆಯಿಂದ ಹೀಗಾಗುತ್ತಿರಬಹುದು. ಇದು ಕಲಾವಿದರಿಗೆ ಮಾಡುತ್ತಿರುವ ಅವಮಾನವೂ ಹೌದು. ಕಾರ್ಯಕ್ರಮ ಆಯೋಜಿಸಿರುವ ಸಮಿತಿಯವರನ್ನು ಕೇಳಿದರೆ, ಅವರಿಂದ ಸಮರ್ಪಕವಾದ ಉತ್ತರವೇ ಇಲ್ಲ.
ಬೂಕನಕೆರೆ ವಿಜೇಂದ್ರ. ಮೈಸೂರು.


ಪುಸ್ತಕ ಪ್ರೇಮಿಗಳಿಗೆ ನಿರಾಸೆ
ಈ ಬಾರಿಯ ನಾಡಹಬ್ಬ ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸದಿರುವುದು ತುಂಬಾ ಬೇಸರದ ಸಂಗತಿ. ‘ದೇಶ ಸುತ್ತು ಕೋಶ ಓದು’ ಎಂಬ ಒಂದು ಮಾತಿದೆ. ಪುಸ್ತಕಗಳು ನಮ್ಮ ಬದುಕಿನ ಒಂದು ಅವಿಭಾಜ್ಯ ಅಂಗ. ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಗೆ ಪುಸ್ತಕಗಳು ತುಂಬಾ ಕೊಡುಗೆ ನೀಡಿವೆ. ಈ ವಿಷಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಕಡೆ ಸಭೆ ಸಮಾರಂಭಗಳಲ್ಲಿ ಪುಸ್ತಕ ನೀಡುವ ಸಂಪ್ರದಾಯವನ್ನು ಅನುಸರಿಸುತ್ತಿದ್ದಾರೆ. ಇಷ್ಟಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಬಗ್ಗೆ ಗಮನ ಹರಿಸದೇ ಇರುವುದು ತುಂಬಾ ವಿಷಾದದ ಸಂಗತಿ. ಇನ್ನು ಮುಂದಾದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ.
ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

andolanait

Share
Published by
andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

34 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

40 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

49 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago