ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 01 ಶನಿವಾರ 2022

ಜಯಲಕ್ಷ್ಮಿವಿಲಾಸ ಅರಮನೆಗಿಲ್ಲ ದಸರೆ ವೈಭವ
ಈ ಬಾರಿ ಮೈಸೂರು ನಗರದಲ್ಲಿ ದಸರೆ ವೈಭವವು ಇಮ್ಮಡಿಯಾಗಿದೆ. ಇಡೀ ನಗರವೇ ದೀಪದ ಬೆಳಕಿನಲ್ಲಿ ಜಗಮಗಿಸುತ್ತಿದೆ. ವೃಕ್ಷಗಳು, ರಸ್ತೆಗಳು, ವಿವಿಧ ಕಟ್ಟಡಗಳು, ಸ್ಮಾರಕಗಳು, ಪ್ರತಿಮೆಗಳು, ಪಾರಂಪರಿಕ ಕಟ್ಟಡಗಳು ಹೀಗೆ ಎಲ್ಲಾ ಕಡೆ ದೀಪಾಲಂಕೃತಗೊಂಡು ಪಾರಂಪರಿಕ ಕಟ್ಟಡಗಳು ಅದ್ಭುತವಾಗಿ ಕಾಣುತ್ತಿವೆ. ಆದರೆ, ಏನು ಶಾಪವೋ ಕಾಣೆ ಮೈಸೂರಿನ ಅರಮನೆಗೂ ಮುಂಚೆಯೇ ನಾಲ್ವಡಿ ಕೃಷ್ಣರಾಜ ಒಡೆಯರಿಂದ ನಿರ್ಮಾಣಗೊಂಡ ಜಯಲಕ್ಷ್ಮಿವಿಲಾಸ ಅರಮನೆ ಯಾವುದೇ ವೈಭವವಿಲ್ಲದೆ ಹಳೆಯ ಬಂಗಲೆಯಂತೆ ಕಾಣುತ್ತಿದೆ. ಜಯಲಕ್ಷ್ಮಿ ವಿಲಾಸ ಅರಮನೆಯು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿದ್ದು ಇದು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದೆ. ಇದನ್ನು ವಸ್ತು ಸಂಗ್ರಹಾಲಯವಾಗಿಯೂ ಮಾರ್ಪಾಡು ಮಾಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಅರಮನೆಯು ಶಿಥಿಲಾವಸ್ಥೆ ತಲುಪಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಅರಮನೆಯ ಮಾಳಿಗೆಗಳು ಸೋರುತ್ತಿವೆ. ದಸರಾ ಸಂದರ್ಭದಲ್ಲಿ ಇದನ್ನು ಸರಿಪಡಿಸುವ ಕೆಲಸ ಮಾಡಬೇಕು. ಸರ್ಕಾರ ಹಾಗೂ ಸಂಬಂಧಪಟ್ಟವರು ಈ ಪಾರಂಪರಿಕ ಕಟ್ಟಡವನ್ನು ಉಳಿಸುವ ಕಡೆ ಗಮನ ನೀಡಬೇಕು ಹಾಗೂ ದಸರೆ ಸಂದರ್ಭದಲ್ಲಿ ಅರಮನೆಗೆ ದೀಪಾಲಂಕಾರ ಮಾಡಬೇಕು ಎಂಬುದು ಸಾರ್ವಜನಿಕರ ಆಗ್ರಹ.
-ಲಕ್ಷ್ಮಿ ಕಿಶೋರ್ ಅರಸ್, ಮಾನಸಗಂಗೋತ್ರಿ, ಮೈಸೂರು.


ತ್ಯಾಗ
ದೇಶಕ್ಕಾಗಿ,
ಸ್ವಾತಂತ್ರ್ಯಕ್ಕಾಗಿ
ಹುತಾತ್ಮರಾದರು ಅಂದು
ಮಹಾತ್ಮ ಗಾಂಧಿ
ಹೋಗಿ ಹೋಗಿ..,
ಬಂತಲ್ಲ ಅವರ ಜಯಂತಿ
ರ(ಜೆ)ವಿ ವಾರವೆಂದು
ಕೊರಗುತ್ತಿಹರು ಇಂದು
ಹಲವಾರು ಮಂದಿ !
ಮ.ಗು.ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಭಣಗುಟ್ಟುತ್ತಿರುವ ಗಾನಭಾರತಿ ಸಭಾಂಗಣ
ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ, ಕುವೆಂಪು ನಗರದ ಗಾನಭಾರತೀ ಸಭಾಂಗಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೇಕ್ಷಕರಿಲ್ಲದೇ ಇಡೀ ಸಭಾಂಗಣವೇ ಭಣಗುಟ್ಟುತ್ತಿದೆ. ವೇದಿಕೆಯ ಕೆಳಗೆ ಕೇವಲ ಹದಿನೈದರಿಂದ ಇಪ್ಪತ್ತು ಜನರೂ ಇರಲಿಲ್ಲ (ಗುರುವಾರದಂದು) ಇಷ್ಟೊಂದು ಹಣ ಖರ್ಚು ಮಾಡುತ್ತಿರುವುದು ಯಾರ ಹಿತಕ್ಕಾಗಿ? ಇದು ಆಯೋಜಕರ ಪ್ರಚಾರದ ಕೊರತೆಯಿಂದ ಹೀಗಾಗುತ್ತಿರಬಹುದು. ಇದು ಕಲಾವಿದರಿಗೆ ಮಾಡುತ್ತಿರುವ ಅವಮಾನವೂ ಹೌದು. ಕಾರ್ಯಕ್ರಮ ಆಯೋಜಿಸಿರುವ ಸಮಿತಿಯವರನ್ನು ಕೇಳಿದರೆ, ಅವರಿಂದ ಸಮರ್ಪಕವಾದ ಉತ್ತರವೇ ಇಲ್ಲ.
ಬೂಕನಕೆರೆ ವಿಜೇಂದ್ರ. ಮೈಸೂರು.


ಪುಸ್ತಕ ಪ್ರೇಮಿಗಳಿಗೆ ನಿರಾಸೆ
ಈ ಬಾರಿಯ ನಾಡಹಬ್ಬ ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸದಿರುವುದು ತುಂಬಾ ಬೇಸರದ ಸಂಗತಿ. ‘ದೇಶ ಸುತ್ತು ಕೋಶ ಓದು’ ಎಂಬ ಒಂದು ಮಾತಿದೆ. ಪುಸ್ತಕಗಳು ನಮ್ಮ ಬದುಕಿನ ಒಂದು ಅವಿಭಾಜ್ಯ ಅಂಗ. ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಗೆ ಪುಸ್ತಕಗಳು ತುಂಬಾ ಕೊಡುಗೆ ನೀಡಿವೆ. ಈ ವಿಷಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಕಡೆ ಸಭೆ ಸಮಾರಂಭಗಳಲ್ಲಿ ಪುಸ್ತಕ ನೀಡುವ ಸಂಪ್ರದಾಯವನ್ನು ಅನುಸರಿಸುತ್ತಿದ್ದಾರೆ. ಇಷ್ಟಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಬಗ್ಗೆ ಗಮನ ಹರಿಸದೇ ಇರುವುದು ತುಂಬಾ ವಿಷಾದದ ಸಂಗತಿ. ಇನ್ನು ಮುಂದಾದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ.
ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

10 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

10 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

11 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

11 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

11 hours ago