ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ!
ಗರ್ಭಪಾತದ ಹಕ್ಕುಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹಿಳೆಗೆ ತನ್ನ ದೇಹದ ವಿಚಾರದಲ್ಲಿ ಇರುವ ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಂತಿದೆ. ವಿವಾಹಿತರೇ ಇರಲಿ, ಅವಿವಾಹಿತರೇ ಆಗಲಿ ಎಲ್ಲಾ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಲು ಅರ್ಹರು, ಇವರ ನಡುವೆ ತಾರತಮ್ಯ ಮಾಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹವಾಗಿದೆ. ಸಾಮಾನ್ಯವಾಗಿ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ತಮ್ಮ ದೇಹದ ಮೇಲೆ ಹಕ್ಕನ್ನು ಚಲಾಯಿಸಲು ಹೆಚ್ಚಿನ ಅಡೆತಡೆಗಳನ್ನು ಎದುರಿಸುತ್ತಾರೆ. ಇದರಿಂದಾಗಿ ಅಪಾಯಗಳು ಮತ್ತು ತೊಡಕುಗಳಿಗೆ ಕಾರಣವಾಗುತ್ತದೆ. ಸುಪ್ರೀಂ ಕೋರ್ಟ್ ಗಮನಿಸಿರುವಂತೆ ಆಸುರಕ್ಷಿತ ಗರ್ಭಪಾತಗಳು ತಾಯಂದಿರ ಮರಣಕ್ಕೆ ಪ್ರಮುಖ ಕಾರಣವಾಗುತ್ತವೆ. ಅಸುರಕ್ಷಿತ ಗರ್ಭಪಾತಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಭಾರತದಲ್ಲಿ ನಡೆಸಲಾಗುವ ಶೇ. ೬೦ರಷ್ಟು ಗರ್ಭಪಾತಗಳು ಸುರಕ್ಷಿತವಾಗಿಲ್ಲ. ಸುರಕ್ಷಿತ ಗರ್ಭಪಾತ ಸೇವೆಗಳಿಗೆ ಅವಕಾಶ ನಿರಾಕರಿಸುವುದು, ನಿರ್ಬಂಧಿತ ಗರ್ಭಪಾತ ಅಭ್ಯಾಸಗಳು ಅಸುರಕ್ಷಿತ ಗರ್ಭಪಾತಗಳಿಗೆ ಎಡೆಮಾಡಿಕೊಡುತ್ತವೆ ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಹೆಣ್ಣಿನ ಹಕ್ಕು ಮತ್ತು ಘನತೆಗೆ ಹೆಚ್ಚಿನ ಒತ್ತಾಸೆ ನೀಡಿದಂತಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…