ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ!
ಗರ್ಭಪಾತದ ಹಕ್ಕುಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹಿಳೆಗೆ ತನ್ನ ದೇಹದ ವಿಚಾರದಲ್ಲಿ ಇರುವ ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಂತಿದೆ. ವಿವಾಹಿತರೇ ಇರಲಿ, ಅವಿವಾಹಿತರೇ ಆಗಲಿ ಎಲ್ಲಾ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಲು ಅರ್ಹರು, ಇವರ ನಡುವೆ ತಾರತಮ್ಯ ಮಾಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹವಾಗಿದೆ. ಸಾಮಾನ್ಯವಾಗಿ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ತಮ್ಮ ದೇಹದ ಮೇಲೆ ಹಕ್ಕನ್ನು ಚಲಾಯಿಸಲು ಹೆಚ್ಚಿನ ಅಡೆತಡೆಗಳನ್ನು ಎದುರಿಸುತ್ತಾರೆ. ಇದರಿಂದಾಗಿ ಅಪಾಯಗಳು ಮತ್ತು ತೊಡಕುಗಳಿಗೆ ಕಾರಣವಾಗುತ್ತದೆ. ಸುಪ್ರೀಂ ಕೋರ್ಟ್ ಗಮನಿಸಿರುವಂತೆ ಆಸುರಕ್ಷಿತ ಗರ್ಭಪಾತಗಳು ತಾಯಂದಿರ ಮರಣಕ್ಕೆ ಪ್ರಮುಖ ಕಾರಣವಾಗುತ್ತವೆ. ಅಸುರಕ್ಷಿತ ಗರ್ಭಪಾತಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಭಾರತದಲ್ಲಿ ನಡೆಸಲಾಗುವ ಶೇ. ೬೦ರಷ್ಟು ಗರ್ಭಪಾತಗಳು ಸುರಕ್ಷಿತವಾಗಿಲ್ಲ. ಸುರಕ್ಷಿತ ಗರ್ಭಪಾತ ಸೇವೆಗಳಿಗೆ ಅವಕಾಶ ನಿರಾಕರಿಸುವುದು, ನಿರ್ಬಂಧಿತ ಗರ್ಭಪಾತ ಅಭ್ಯಾಸಗಳು ಅಸುರಕ್ಷಿತ ಗರ್ಭಪಾತಗಳಿಗೆ ಎಡೆಮಾಡಿಕೊಡುತ್ತವೆ ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಹೆಣ್ಣಿನ ಹಕ್ಕು ಮತ್ತು ಘನತೆಗೆ ಹೆಚ್ಚಿನ ಒತ್ತಾಸೆ ನೀಡಿದಂತಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…