ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 04 ಮಂಗಳವಾರ 2022

ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ!
ಗರ್ಭಪಾತದ ಹಕ್ಕುಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹಿಳೆಗೆ ತನ್ನ ದೇಹದ ವಿಚಾರದಲ್ಲಿ ಇರುವ  ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಂತಿದೆ. ವಿವಾಹಿತರೇ ಇರಲಿ, ಅವಿವಾಹಿತರೇ ಆಗಲಿ ಎಲ್ಲಾ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಲು ಅರ್ಹರು, ಇವರ ನಡುವೆ ತಾರತಮ್ಯ ಮಾಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹವಾಗಿದೆ. ಸಾಮಾನ್ಯವಾಗಿ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ತಮ್ಮ ದೇಹದ ಮೇಲೆ ಹಕ್ಕನ್ನು ಚಲಾಯಿಸಲು ಹೆಚ್ಚಿನ ಅಡೆತಡೆಗಳನ್ನು ಎದುರಿಸುತ್ತಾರೆ. ಇದರಿಂದಾಗಿ ಅಪಾಯಗಳು ಮತ್ತು ತೊಡಕುಗಳಿಗೆ ಕಾರಣವಾಗುತ್ತದೆ.  ಸುಪ್ರೀಂ ಕೋರ್ಟ್ ಗಮನಿಸಿರುವಂತೆ ಆಸುರಕ್ಷಿತ ಗರ್ಭಪಾತಗಳು ತಾಯಂದಿರ ಮರಣಕ್ಕೆ ಪ್ರಮುಖ ಕಾರಣವಾಗುತ್ತವೆ. ಅಸುರಕ್ಷಿತ ಗರ್ಭಪಾತಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಭಾರತದಲ್ಲಿ ನಡೆಸಲಾಗುವ ಶೇ. ೬೦ರಷ್ಟು ಗರ್ಭಪಾತಗಳು ಸುರಕ್ಷಿತವಾಗಿಲ್ಲ. ಸುರಕ್ಷಿತ ಗರ್ಭಪಾತ ಸೇವೆಗಳಿಗೆ ಅವಕಾಶ ನಿರಾಕರಿಸುವುದು, ನಿರ್ಬಂಧಿತ ಗರ್ಭಪಾತ ಅಭ್ಯಾಸಗಳು ಅಸುರಕ್ಷಿತ ಗರ್ಭಪಾತಗಳಿಗೆ ಎಡೆಮಾಡಿಕೊಡುತ್ತವೆ ಎಂದು ಅಭಿಪ್ರಾಯಪಟ್ಟಿದೆ.  ಪ್ರಸ್ತುತ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಹೆಣ್ಣಿನ ಹಕ್ಕು ಮತ್ತು ಘನತೆಗೆ ಹೆಚ್ಚಿನ ಒತ್ತಾಸೆ ನೀಡಿದಂತಾಗಿದೆ.
 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.


ಮೈಸೂರೆಂಬ ಸ್ವರ್ಗ- ನರಕ
ಮೈಸೂರಿನ ಪ್ರಸಕ್ತ ಸನ್ನಿವೇಶವನ್ನು ಗಮನಿಸಿದರೆ ‘ಸ್ವರ್ಗ ನರಕವೆಲ್ಲ ಮೇಲೆಲ್ಲೂ ಇಲ್ಲ ಮನುಜ’ ಎಂಬ ಅರ್ಥಪೂರ್ಣ ಸಾಲುಗಳು ನೆನಪಾಗುತ್ತವೆ. ರಾತ್ರಿ ಸ್ವರ್ಗದಂತೆ ಕಂಗೊಳಿಸುವ ಮೈಸೂರಿನ ದೀಪಾಲಂಕಾರ, ಬೆಳಿಗ್ಗೆಯಾದೊಡನೆ ಮೈಸೂರಿನ ಹೃದಯ ಭಾಗದಿಂದ ಹಿಡಿದು ರಾಜ
ಮಾರ್ಗದುದ್ದಕ್ಕೂ ಹೊಂದಿಕೊಂಡಿರುವ ರಸ್ತೆಗಳ ಗುಂಡಿಗಳು ನರಕ ದರ್ಶನ ಮಾಡಿಸುತ್ತವೆ. ಕಳೆದ ಎರಡು ವರ್ಷಗಳಿಂದ ‘ಕೋವಿಡ್ ಮಹಾಮಾರಿ’ ರೌದ್ರ ನರ್ತನಕ್ಕೆ ನಲುಗಿದ್ದ ಜನಸಾಮಾನ್ಯರು ದಸರಾ ಮೆರವಣಿಗೆ ನೋಡುವ ಭಾಗ್ಯದಿಂದ ವಂಚಿತರಾಗಿದ್ದರು.  ಈ ಬಾರಿ  ಅದ್ಧೂರಿ ದಸರಾ
ಆಚರಣೆ ನಡೆಸುತ್ತಿದ್ದು, ಇದಕ್ಕೆ ಪೂರಕವಾಗುವಂತೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತ ಪೂರ್ಣ ಪ್ರಮಾಣದಲ್ಲಿ ಸಿದ್ಧತೆ ಮಾಡಿಕೊಳ್ಳದಿರುವುದು ಅಧಿಕಾರಿ ವಲಯ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ದಸರಾ ಕಣ್ತುಂಬಿಕೊಳ್ಳಲು  ಹೊರ ಜಿಲ್ಲೆ, ಹೊರ ರಾಜ್ಯ, ಹೊರ ದೇಶಗಳಿಂದ ಬರುವ ಪ್ರವಾಸಿಗರಿಗೆ  ಗುಂಡಿಗಳ ನರಕದರ್ಶನ ಮಾಡಿಸುವುದು ನಿಜ. ಅಕ್ಕ ಪಕ್ಕದ ತಾಲ್ಲೂಕು, ಜಿಲ್ಲೆಗಳಿಂದ ಬರುವ ಜನಸಾಮಾನ್ಯರು ರಾಜಮಾರ್ಗದ ಬದಿಗಳಲ್ಲಿ ಮೆರವಣಿಗೆ
ವೀಕ್ಷಿಸಲು ಜಮಾಯಿಸುತ್ತಾರೆ.    ಇರುವ ಇನ್ನೊಂದೆರಡು ದಿನಗಳಲ್ಲಾದರೂ ನಗರದ ಹೃದಯ ಭಾಗದಿಂದ ರಾಜಮಾರ್ಗಕ್ಕೆ ಅಂಟಿಕೊಂಡಿರುವ ರಸ್ತೆಗಳ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಪ್ರಯತ್ನ ಮಾಡಲಿ.
-ಎಂ.ಎನ್ ತುಕಾರಾಮ್ ರಾವ್, ವಿ.ವಿ ಮೊಹಲ್ಲಾ , ಮೈಸೂರು.

ಅಡಕೆ ಆಮದು ಆತಂಕಕಾರಿ
ಕೇಂದ್ರ ಸರಕಾರ ಭೂತಾನ್‌ನಿಂದ ೧೭,೦೦೦ ಟನ್ ಅಡಕೆ ಆಮದು ಮಾಡಿಕೊಳ್ಳುವ ನಿರ್ಧಾರ ಅಡಕೆ ಬೆಳೆಗಾರರಿಗೆ ತುಂಬಾ ಆತಂಕಕಾರಿ ಸಂಗತಿ. ನಮ್ಮ ದೇಶದಲ್ಲಿ ಒಂದು ಕೋಟಿಗೂ ಅಧಿಕ ಅಡಕೆ ಬೆಳೆಗಾರರ ಕುಟುಂಬಗಳಿವೆ ಎಂದು ಅಂದಾಜಿಸಲಾಗಿದೆ ಹಾಗೂ ಅಡಕೆ ಕೃಷಿ ಮತ್ತು ಅಡಕೆಗೆ ಸಂಬಂಧಿಸಿದ ಉದ್ಯಮದ ಮೇಲೆ ಅವಲಂಬಿತರು ಸುಮಾರು ಹತ್ತು ಕೋಟಿಗೂ ಅಧಿಕ ಎನ್ನಲಾಗಿದೆ, ಹೀಗಿರುವಾಗ ಈ ಹಿಂದೆ ಈ ಭಾರಿ ಪ್ರಮಾಣದ ಅಡಿಕೆ ಆಮದು ಆಗದಿರುವುದು ಈಗ ಏತಕ್ಕೆ ಎಂಬುದೇ  ಪ್ರಶ್ನೆ. ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಡಕೆ ಬೆಳೆಗಾರರ ಸಂಖ್ಯೆ ಅಧಿಕ. ಅತಿವೃಷ್ಟಿ,  ಅನಾವೃಷ್ಟಿ ಸಮಯದಲ್ಲೂ ಅಡಕೆ ತನ್ನ ಬೆಳೆಗಾರರ ಕೈ ಹಿಡಿಯುತ್ತಿದೆ ಎಂದರೆ ತಪ್ಪಾಗಲಾರದು. ಈ ಮಧ್ಯೆ ದೇಶದೆಲ್ಲೆಡೆ ಅಡಕೆ ಉತ್ಪಾದನೆ ಮತ್ತು ಉದ್ಯಮಗಳು ವೇಗವಾಗಿ ಬೆಳವಣಿಗೆ ಕಾಣುತ್ತಿವೆ.  ಕೇಂದ್ರ ಸರಕಾರದ ಆಮದಿನ ನಿರ್ಧಾರ ತೀರಾ ಖಂಡನಾರ್ಹ. ಅಡಕೆ ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರ ಸರಕಾರ ಈ ದೊಡ್ಡ ಪ್ರಮಾಣದ ಅಡಕೆಯ ಆಮದಿನ ನಿರ್ಧಾರದ ಕೈ ಬಿಡಬೇಕು, ಇಲ್ಲದಿದ್ದರೆ ಈ ಆಮದು ಪಟ್ಟಭದ್ರ ಹಿತಾಸಕ್ತಿಗಳನ್ನು ಓಲೈಸಲು ಎಂಬ ಅನುಮಾನ ಅಡಕೆ ಅವಲಂಬಿತರಲ್ಲಿ ಮೂಡುವುದು ಸಹಜ.
-ವಿಜಯಕುಮಾರ್ ಎಚ್.ಕೆ., ಸಾಮಾಜಿಕ ಕಾರ್ಯಕರ್ತ.
andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago