ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ!
ಗರ್ಭಪಾತದ ಹಕ್ಕುಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹಿಳೆಗೆ ತನ್ನ ದೇಹದ ವಿಚಾರದಲ್ಲಿ ಇರುವ ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಂತಿದೆ. ವಿವಾಹಿತರೇ ಇರಲಿ, ಅವಿವಾಹಿತರೇ ಆಗಲಿ ಎಲ್ಲಾ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಲು ಅರ್ಹರು, ಇವರ ನಡುವೆ ತಾರತಮ್ಯ ಮಾಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹವಾಗಿದೆ. ಸಾಮಾನ್ಯವಾಗಿ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ತಮ್ಮ ದೇಹದ ಮೇಲೆ ಹಕ್ಕನ್ನು ಚಲಾಯಿಸಲು ಹೆಚ್ಚಿನ ಅಡೆತಡೆಗಳನ್ನು ಎದುರಿಸುತ್ತಾರೆ. ಇದರಿಂದಾಗಿ ಅಪಾಯಗಳು ಮತ್ತು ತೊಡಕುಗಳಿಗೆ ಕಾರಣವಾಗುತ್ತದೆ. ಸುಪ್ರೀಂ ಕೋರ್ಟ್ ಗಮನಿಸಿರುವಂತೆ ಆಸುರಕ್ಷಿತ ಗರ್ಭಪಾತಗಳು ತಾಯಂದಿರ ಮರಣಕ್ಕೆ ಪ್ರಮುಖ ಕಾರಣವಾಗುತ್ತವೆ. ಅಸುರಕ್ಷಿತ ಗರ್ಭಪಾತಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಭಾರತದಲ್ಲಿ ನಡೆಸಲಾಗುವ ಶೇ. ೬೦ರಷ್ಟು ಗರ್ಭಪಾತಗಳು ಸುರಕ್ಷಿತವಾಗಿಲ್ಲ. ಸುರಕ್ಷಿತ ಗರ್ಭಪಾತ ಸೇವೆಗಳಿಗೆ ಅವಕಾಶ ನಿರಾಕರಿಸುವುದು, ನಿರ್ಬಂಧಿತ ಗರ್ಭಪಾತ ಅಭ್ಯಾಸಗಳು ಅಸುರಕ್ಷಿತ ಗರ್ಭಪಾತಗಳಿಗೆ ಎಡೆಮಾಡಿಕೊಡುತ್ತವೆ ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಹೆಣ್ಣಿನ ಹಕ್ಕು ಮತ್ತು ಘನತೆಗೆ ಹೆಚ್ಚಿನ ಒತ್ತಾಸೆ ನೀಡಿದಂತಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…