ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 08 ಶನಿವಾರ 2022

ಏನಿರಬಹುದು  ಕಾರಣ?!
ಅಬ್ಬಾ, ಆ ಜನಸಾಗರದ ನಡುವೆ
ಸಾಗಿತು
ಅದ್ಧೂರಿ ಜಂಬೂಸವಾರಿ
750 ಕೆ.ಜಿ. ತೂಕದ ಅಂಬಾರಿ
ಹೊತ್ತ ಮೂರನೇ ಬಾರಿ
ಅಭಿಮನ್ಯು,
ಎಲ್ಲೂ ಮಾಡಲಿಲ್ಲ
ಕಿರಿ ಕಿರಿ
ಏನಿರಬಹುದು ಕಾರಣ ?!
ಜೊತೆ ಜೊತೆಯಲೇ
ಇದ್ದರು
ಈರ್ವರು ಅಕ್ಕ ಪಕ್ಕ
ಕರಿ- ಸುಂದರಿಯರು
ಚೈತ್ರ-ಕಾವೇರಿ !!
-ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಅದ್ಧೂರಿ ದಸರಾ ‘ಪಾಸು’ಆಯ್ತೆ?
ರಾಜಪಥದಲ್ಲಿ ಗಜಗಾಂಭೀರ್ಯದಿಂದ ವಿದ್ಯುತ್ ಬೆಳಕಿನಡಿ ಸಾಗಿದ ಅದ್ಧೂರಿ ದಸರಾವನ್ನು ರಸ್ತೆಯುದ್ದಕ್ಕೂ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಸೇರಿದ್ದ ಜನರು ಕಣ್ತುಂಬಿಕೊಂಡು ಪುಳಕಿತಗೊಂಡರು, ಚಾಮುಂಡೇಶ್ವರಿ  ಎಲ್ಲರಿಗೂ ದರ್ಶನ ನೀಡಿ ಆಶೀರ್ವದಿಸಿದಳು. ಅವರ್ಯಾರಿಗೂ ಜಿಲ್ಲಾಡಳಿತ ಮುದ್ರಿಸುವ ಪಾಸುಗಳ ಬಗ್ಗೆ ಚಿಂತೆ ಇರಲಿಲ್ಲ. ಆದರೆ ಚುನಾಯಿತ ಜನಪ್ರತಿನಿಧಿಗಳ ಕೂಗು ಒಂದೇ.. ನಮಗೆ ಹೆಚ್ಚು ಪಾಸುಗಳನ್ನು ಕೊಡಲಿಲ್ಲ ಎಂಬುದು. ಪ್ರತೀ ದಸರಾದಲ್ಲೂ  ಪಾಸುಗಳನ್ನು ನೀಡುವಲ್ಲಿ ಆಗುವ ತಾರತಮ್ಯದ ಜಟಾಪಟಿ ಗಜಕಾಳಗದಂತಿರುತ್ತದೆ.  ಮೊದಲು ಬಂದವರಿಗೆ ಮೊದಲ ಆದ್ಯತೆಯ ನಿಯಮದಂತೆ ಪಾಸು ರಹಿತವಾಗಿ ಸಾರ್ವಜನಿಕ ದಸರಾ ಮಾಡಿದರೆ ಒಳಿತಲ್ಲವೆ? ದಸರಾ ಹಬ್ಬದಲ್ಲಿ ಯಾವಾಗಲೂ ಕಪ್ಪುಚುಕ್ಕೆಯಾಗಿ ಕಾಡುವ ಪ್ರವೇಶಪಾಸುಗಳನ್ನು  ಕೈಬಿಡಬಾರದೇಕೆ? ಜಿಲ್ಲೆಯ ಸಂಸದರು, ಶಾಸಕರು ಮತ್ತು ನಗರಪಾಲಿಕೆ ಸದಸ್ಯರನ್ನು ಹೊರತುಪಡಿಸಿ ಎಲ್ಲರೂ ಒಂದೇ ಎಂದು ಪರಿಗಣಿಸಿ, ಇದರಿಂದ ಸ್ವಪಕ್ಷಿಯರಿಂದಲೇ ಉದಭವಿಸುವ ಪ್ರತಿಭಟನೆಗಳಿಗೆ ಆಸ್ಪದ ಇರುವುದಿಲ್ಲ. ಜನಪ್ರತಿನಿಧಿಗಳು ಭಿನ್ನಾಭಿಪ್ರಾಯ ಇಲ್ಲದೆ ಸ್ವಚ್ಛ ಮನಸ್ಸಿನಿಂದ ಭಾಗವಹಿಸಿ ನಿರಾತಂಕವಾಗಿ ದಸರಾ ನಡೆಯುವಂತೆ ಕಟ್ಟನಿಟ್ಟಿನ ನಿಯಮ ಜಾರಿಯಾಗಲಿ.
-ಮಿರ್ಲೆ ಚಂದ್ರಶೇಖರ, ಲೇಖಕರು, ಮೈಸೂರು.

ರಾಸುಗಳ ಆಹಾರ ಕಸದ ರಾಶಿಗೆ ಸೇರಿಬಿಟ್ಟಿತು
ಆಯುಧ ಪೂಜೆಗೆಂದು ಮಾರಾಟ ಮಾಡಲು ತಂದು ಉಳಿದ ಬೂದುಗುಂಬಳ ಮತ್ತು ಬಾಳೆ ಕಂದುಗಳನ್ನು ರಸ್ತೆ ಬದಿಯಲ್ಲಿಯೇ ಬಿಟ್ಟು ಹೋಗುತ್ತಿದ್ದರು. ಅದನ್ನು ಗಮನಿಸಿದ್ದ ನಾನು ಕೆಲ ಸಮಾನ ಮನಸ್ಕ ವಕೀಲರುಗಳು ಮತ್ತು ಮೈಸೂರಿನ ಪಿಂಜರಾಪೋಲ್‌ನ ಆಡಳಿತ ಮಂಡಳಿಯ ಸದಸ್ಯರೊಡಗೂಡಿ ಸಂಗ್ರಹಿಸಿ ಪಿಂಜರಾಪೋಲ್‌ನ ಅಶಕ್ತ ರಾಸುಗಳಿಗೆಂದು ಕಳೆದ ವರ್ಷ ಸಾಗಿಸಿದ್ದೆವು. ಅದೇ ಕಾರ್ಯವನ್ನು ಮುಂದುವರೆಸುವ ಉದ್ದೇಶದಿಂದ ಈ ಬಾರಿ ಇನ್ನೂ ಹೆಚ್ಚಿನ ತಯಾರಿಯೊಡನೆ ಮಂಗಳವಾರ ಸಂಜೆ ಬೀದಿಗಿಳಿದೆವು. ಆದರೆ ದುರದೃಷ್ಟಕ್ಕೆ ನಗರಪಾಲಿಕೆಯ ಸಿಬ್ಬಂದಿ ರಾಸುಗಳ ಆಹಾರವಾಗಬಲ್ಲ  ಕುಂಬಳ ಮತ್ತು ಬಾಳೆಕಂದುಗಳನ್ನು ಕಸದ ರಾಶಿಗೆ ಸೇರಿಸಿ ಸಾಗಿಸಿಬಿಟ್ಟಿದ್ದರು. ಇದರಲ್ಲಿ ಸಿಬ್ಬಂದಿಯ ತಪ್ಪಿಲ್ಲ. ಮರುದಿನ ದಸರಾಗೆ ಅಧಿಕ ಜನ ಸೇರುವ ಕಾರಣ ತುರ್ತಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ ಪಾಲಿಕೆಯ ಕಾರ್ಯ ಶ್ಲಾಘನೀಯವೇ, ಆದರೆ ಅನ್ಯಾಯವಾಗಿ ಬೆಲೆ ಬಾಳುವ ರಾಸಿನ ಆಹಾರ ಕಸದ ರಾಶಿ ಸೇರಿತಲ್ಲ ಎಂಬುದು ಬೇಸರದ ಸಂಗತಿ. ಇದೇ ತ್ಯಾಜ್ಯ ಪಿಂಜರಾಪೋಲ್ ಸೇರಿದ್ದರೆ ಅಲ್ಲಿನ ರಾಸುಗಳ ಒಂದು ದಿನದ ಮೇವಾಗುತಿತ್ತು. ಪಿಂಜರಾಪೋಲ್‌ನ  ದಿನದ ಮೇವಿನ ವೆಚ್ಚ ಎರಡು ಲಕ್ಷ ರೂ. ಗಳಿಗೂ ಅಧಿಕವಾಗಿದೆ. ಇನ್ನು ಮುಂದೆ ಈ ರೀತಿ ಸಂಗ್ರಹಿಸಿದ ತ್ಯಾಜ್ಯವನ್ನು ಪಿಂಜರಾಪೋಲ್ ಗೆ ಸಾಗಿಸಿದರೆ ಅಲ್ಲಿನ ಅಶಕ್ತ ರಾಸುಗಳಿಗೆ ಆಹಾರವಾದಂತಾಗುವುದು. ಪ್ರತಿದಿನ ದೇವರಾಜ ಮಾರುಕಟ್ಟೆಯ ತರಕಾರಿ,ಹಣ್ಣುಗಳ ಅಂಗಡಿಗಳಿಂದ ಸಂಗ್ರಹಿಸುವ ಟನ್ ಗಟ್ಟಲೇ ತ್ಯಾಜ್ಯವು ಪಿಂಜರಾಪೋಲ್ ತಲುಪಿದರೆ ಅಲ್ಲಿನ ರಾಸುಗಳಿಗೆ ಸಹಾಯವಾಗುತ್ತದೆ ಹಾಗೂ ಕಸದ ಉಪಯುಕ್ತ ವಿಲೇವಾರಿಯಾದಂತಾಗುವುದು. ಈ ಬಗ್ಗೆ ಪಾಲಿಕೆಯ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕು.
-ಎಸ್.ರವಿ, ವಕೀಲ, ಮೈಸೂರು.
andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

8 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

8 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

9 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

9 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

9 hours ago