ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 13 ಗುರುವಾರ 2022

ಓದುಗರ ಪತ್ರ

ಗುರವೇ ನಮಃ!

ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಕ್ಷಕಿ (ಆಂ.ಸುದ್ದಿ,ಅ.೧೨)

ಅಂಗಾಂಗ ದಾನ ಮಾಡಿ
ಏಳೆಂಟು

ಮಂದಿಯ ಬಾಳಿಗೆ
’ಆಶಾ’ದೀಪವಾದರು

ಸಂಕಟದಲ್ಲಿರುವ ವಿದ್ಯಾರ್ಥಿಗಳಿಗೆ
‘ ವೆಂಕಟರಮಣ’ನಂತಾಗಿದ್ದಾರೆ!

ಸಿದ್ದಯ್ಯನಪುರದ ಶಿಕ್ಷಕ ನಾರಾಯಣ!

ಗುರುಗಳ ಉದಾರ ಗುಣಕೆ

ಹೇಳೋಣ ನಮೋ ನಮಃ

ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಯಾತ್ರೆಗಳ ಜಾತ್ರೆ

ರಾಜ್ಯದಲ್ಲೀಗ ಯಾತ್ರೆಗಳ ಜಾತ್ರೆಯೇ ನಡೆಯುತ್ತಿದೆ. ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಯಾತ್ರೆ ಮುಂದುವರೆದಿದೆ. ಈಗ ಆಡಳಿತಾರೂಢ ಬಿಜೆಪಿ ನಾಯಕರು ರಾಯಚೂರಿನಿಂದ ಜನಸಂಕಲ್ಪ ಯಾತ್ರೆ ಆರಂಭಿಸಿದ್ದಾರೆ. ಯಾತ್ರೆಗಳ ಉದ್ದೇಶ ಜನರ ಉದ್ದಾರಕ್ಕಾಗಿಯೇ ಇರಬಹುದು. ಆದರೆ, ಚುನಾವಣೆ ಸಮೀಪಿಸುತ್ತಿರುವುದರಿಂದ ಯಾತ್ರೆಗಳನ್ನು ಮತಗಳಿಕೆಗಾಗಿ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಬರುತ್ತದೆ. ಏರಿರುವ ಬೆಲೆ ಇಳಿದರೆ, ಜನರಿಗೆ ನೆಮ್ಮದಿ. ಆಡಳಿತಾರೂಢ ಪಕ್ಷವು ತೆರಿಗೆಗಳನ್ನು ಕಡಿತ ಮಾಡಿ ಏರಿರುವ ಬೆಲೆಯನ್ನು ಇಳಿಸುವ ಮೂಲಕ ಜನಸಂಕಲ್ಪ ಮಾಡಿದರೆ ಒಳಿತು. ಆಗ ಯಾತ್ರೆಯನ್ನು ಯಾರೂ ಅನುಮಾನದಿಂದ ನೋಡುವುದಿಲ್ಲ.

ನಂದಕುಮಾರ್, ಸರಸ್ವತಿ ಪುರಂ, ಮೈಸೂರು.


ಬೇಲಿಯೇ ಎದ್ದು ಹೊಲ ಮೇಯ್ದರೆ?

ಕಂಪೆನಿಯೊಂದರ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರಿಗೆ ಖಾತೆ ಮಾಡಿ ವಂಚಿಸಿರುವ ಪ್ರಕರಣದಲ್ಲಿ ತಹಶೀಲ್ದಾರ್, ರೆವಿನ್ಯೂ ಇನ್‌ಸ್ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿದಂತೆ ಐವರ ವಿರುದ್ಧ ದೂರು ದಾಖಲಾಗಿರುವ ಸುದ್ದಿ ಓದಿ ಅಚ್ಚರಿಯೇನೂ ಆಗಲಿಲ್ಲ. ಬೇಲಿಯೇ ಎದ್ದು ಹೊಲ ಮೇಯುವುದಿಲ್ಲಿ ಸಾಮಾನ್ಯವಾಗಿಬಿಟ್ಟಿದೆ. ನಕಲಿ ದಾಖಲೆ ಸೃಷ್ಟಿಸಿ ಆಸ್ತಿಯನ್ನು ಪರಭಾರೆ ಮಾಡುವ ಅಕ್ರಮ ವ್ಯವಹಾರಗಳಲ್ಲಿ ತಹಶೀಲ್ದಾರ್, ರೆವಿನ್ಯೂ ಇನ್‌ಸ್ಪೆಕ್ಟರ್, ಗ್ರಾಮಲೆಕ್ಕಗರು ಸೇರಿದಂತೆ ಕಂದಾಯ ಇಲಾಖೆಯವರ ಪಾತ್ರ ದೊಡ್ಡದು. ಅವರಿಗೆ ನಕಲಿ ಯಾವುದು ಅಸಲಿ ಯಾವುದು ಗೊತ್ತಿರುತ್ತದೆ. ಗೊತ್ತಿದ್ದೇ ಅಕ್ರಮ ವ್ಯವಹಾರ ಮಾಡುತ್ತಾರೆ. ಕೆಲವು ಪ್ರಕರಣಗಳಲ್ಲಿ ಸಿಕ್ಕಿ ಬೀಳುತ್ತಾರೆ. ಸರ್ಕಾರಿ ಭೂಮಿಗಳನ್ನು ಪರಭಾರೆ ಮಾಡಿದ ಪ್ರಕರಣಗಳಲ್ಲಿ ಸಿಕ್ಕಿ ಬೀಳುವುದು ಅಪರೂಪ. ಏನೇ ಆಗಲಿ, ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಆಗಮಾತ್ರ ಬೇಲಿಯೇ ಎದ್ದು ಹೊಲ ಮೇಯುವುದು ನಿಲ್ಲುತ್ತದೆ.

-ಚಂದ್ರಶೇಖರ್, ತಿಲಕ್ ನಗರ, ಮೈಸೂರು.


ಶುಚಿಪ್ಯಾಡ್ ವಿತರಣೆ ನಿಲ್ಲಿಸಿದ್ದೇಕೆ?

ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಅನೇಕ ಸೌಲಭ್ಯಗಳು ದೊರಕುತ್ತಿದ್ದವು. ಮಹಿಳೆಯರ ಶುಚಿತ್ವಕ್ಕಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ವಿತರಿಸಲಾಗುತ್ತಿತ್ತು. ಕೋವಿಡ್ ನಂತರದಲ್ಲಿ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸುತ್ತಿಲ್ಲ. ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದ ಹೆಣ್ಣು ಮಕ್ಕಳು, ಮಹಿಳೆಯರಿಗೆ ಅನನಕೂಲವಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಿ ತ್ವರಿತವಾಗಿ ಕ್ರಮಕೈಗೊಳ್ಳಬೇಕು.

ನಾಗೇಶ್, ಮಾನಸಗಂಗೋತ್ರಿ, ಮೈಸೂರು.


ಶಾಲೆಗಳು ಮಕ್ಕಳ ದಸರಾ ರಜೆ ಕಡಿತ!

ರಾಜ್ಯಸರ್ಕಾರ ಈ ಬಾರಿಯ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಆಚರಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಹಿಂದೆ ಇದ್ದಂತಹ ಒಂದು ತಿಂಗಳ ದಸರಾ ರಜೆಯನ್ನು ೧೪ ದಿನಗಳಿಗೆ ಕಡಿತಗೊಳಿಸಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತನ್ನು ಸರ್ಕಾರ ನೀಡಿದೆ. ಆದರೆ ಕೆಲವು ಖಾಸಗಿ ಶಾಲೆಗಳು ಸರ್ಕಾರ ನೀಡಿರುವ ೧೪ ದಿನಗಳ ದಸರಾ ರಜೆಯನ್ನು ಸಹ ಕಡಿತಗೊಳಿಸಿ, ಮಕ್ಕಳಿಗೆ ಕೇವಲ ಏಳೆಂಟು ದಿನಗಳಷ್ಟೇ ದಸರಾ ರಜೆಯನ್ನು ನೀಡಿ ಈಗಾಗಲೇ ಶಾಲೆಗಳನ್ನು ಪುನರಾರಂಭಿಸಿವೆ.
ರಾಜ್ಯಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಅಕ್ಟೋಬರ್ ೩ ರಿಂದ ೧೬ ರವರೆಗೆ ಅಂದರೆ ೧೪ ದಿನಗಳ ದಸರಾ ರಜೆಯನ್ನು ನೀಡಿ, ಅಕ್ಟೋಬರ್ ೧೭ರಿಂದ ಶಾಲೆಗಳನ್ನು ಪುನರಾರಂಭಿಸುವಂತೆ ಸೂಚಿಸಿದೆ. ಆದರೆ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನಿಯಮವನ್ನು ಗಾಳಿಗೆ ತೂರಿ, ಮಕ್ಕಳಿಗೆ ಕೊಟ್ಟಿರುವ ದಸರಾರಜೆಯನ್ನು ಕಡಿತಗೊಳಿಸಿ ಈಗಾಗಲೇ ಶಾಲೆಗಳನ್ನು ಒಂದು ವಾರ ಮುಂಚಿತವಾಗಿಯೇ ಆರಂಭಿಸಿವೆ!
ಸರ್ಕಾರ ನೀಡಿರುವ ೧೪ ದಿನಗಳ ದಸರಾ ರಜೆಯನ್ನು ಮೊಟುಕುಗೊಳಿಸಿ ಒಂದು ವಾರ ಮುಂಚಿತವಾಗಿ ಶಾಲೆಗಳನ್ನು ಆರಂಭಿಸಿರುವುದು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಲಿ.

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.

andolanait

Recent Posts

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

1 second ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

53 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

1 hour ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

2 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

3 hours ago