ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 15 ಶನಿವಾರ 2022

ಓದುಗರಪತ್ರ

ಸುಳ್ಳು ಹೇಳಿದ ಸರಕಾರ !

ದಸರೆಗೆ ಮಾಡಿದ ದೀಪಾಲಂಕಾರವನ್ನು ಅಕ್ಟೋಬರ್ ೧೦ ರವರೆಗೆ ವಿಸ್ತರಣೆ ಮಾಡಲಾಗಿದೆಯೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚೆಸ್ಕಾಂ ಎಂ.ಡಿ. ಜಯವಿಭವ ಸ್ವಾಮಿಯವರು ಹೇಳಿದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅದನ್ನು ಕಂಡು ನಾವು ದಿನಾಂಕ ೭ರ ಶುಕ್ರವಾರ ರಾತ್ರಿ ಎಂಟರ ನಂತರ ಮೈಸೂರು ನಗರದ ದೀಪಾಲಂಕಾರ ನೋಡಲು ಕೃಷ್ಣರಾಜ ಬೂಲ್‌ವಾರ್ಡ್ ರಸ್ತೆಯಿಂದ ಹೊರಟು

ಹುಣಸೂರು ರಸ್ತೆಗೆ ಸೇರಿದೆವು. ಅಲ್ಲಿಂದಲೇ ಉರಿಯದ ದೀಪಸಾಲುಗಳು ನಮ್ಮನ್ನು ಸ್ವಾಗತಿಸಿದವು. ಹಾಗೇ ಮುಂದೆ ಸಾಗಿ ಬಿ.ಎಂ. ಆಸ್ಪತ್ರೆಯ ಬಳಿ ತಿರಗಿಕೊಂಡು ಕೆ.ಆರ್.ಎಸ್. ರಸ್ತೆಯ ಕಡೆ ಸಾಗಿದೆವು. ಅಲ್ಲಿಂದ ಝಾನ್ಸಿ ಲಕ್ಷ್ಮೀಬಾಯಿ ರಸ್ತೆಗೆ ತಿರುಗಿ ರೈಲ್ವೇ ಸ್ಟೇಶನ್ ದಾಟಿ ಆರ್.ಎಂ.ಸಿ. ಕಡೆಯಿಂದ ಮಿಲೇನಿಯಂ ಸರ್ಕಲ್ ಕಡೆ ಹೋದೆವು.ಅಲ್ಲಿಂದ ಗ್ರಾಮಾಂತರ ಬಸ್ ನಿಲ್ದಾಣದ ಕಡೆ ಹೋದೆವು. ಮುಖ್ಯ ರಸ್ತೆಗಳಲ್ಲಿ ದೀಪಾಲಂಕಾರವಿತ್ತಾದರೂ ಬಹಳಷ್ಟು ರಸ್ತೆಯಲ್ಲಿ ಹಾಕಿದ್ದ ಸಾಲು ದೀಪಗಳು ಉರಿಯುತ್ತಿರಲಿಲ್ಲ. ಶೇ.೮೫ ರಷ್ಟು ಉರಿಯದ ಸಾಲು ದೀಪಗಳನ್ನು ನೋಡಿ ಬೇಸರವಾಯಿತು. ಎರಡು ದಿವಸ ದೀಪಾಲಂಕಾರ ಮುಂದುವರೆಸಲಾಗುತ್ತದೆಯೆಂಬ ಉಸ್ತುವಾರಿ ಸಚಿವರ ಮಾತನ್ನು ನಂಬಿ ನಾವು ಮೂರ್ಖರಾದೆವು. ದೀಪಾಲಂಕಾರವನ್ನು ಪೂರ್ಣಪ್ರಮಾಣದಲ್ಲಿ ಮುಂದುವರೆಸಲಾಗದಿದ್ದರೆ ಸಚಿವರು ಹಾಗೂ ಚೆಸ್ಕಾಂ ಎಂ.ಡಿ .ಸುಮ್ಮನಿರಬೇಕಿತ್ತು.
ಸುಳ್ಳು ಹೇಳಿ ಜನರಿಗೆ ಮೋಸಮಾಡಬಾರದಾಗಿತ್ತು !
ಕೊ.ಸು.ನರಸಿಂಹ ಮೂರ್ತಿ, ಹಿರಿಯ ನಾಗರಿಕ, ಚಾಮರಾಜಪುರಂ, ಮೈಸೂರು. .


ಅವರೂ ಮನುಷ್ಯರಲ್ಲವೇ?

ಇತ್ತೀಚೆಗೆ ಕೆಲವು ರಾಜಕೀಯ ವ್ಯಕ್ತಿಗಳು ಹರಿಜನರ ಮನೆಯಲ್ಲಿ ಊಟ ಮಾಡುವುದು ಮಾಧ್ಯಮಗಳಲ್ಲಿ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗುತ್ತಿರುವುದು ದುರಂತದ ವಿಷಯ. ಹರಿಜನರು ಮನುಷ್ಯರಲ್ಲವೇ ? ಅವರ ಮನೆಯಲ್ಲಿ ಊಟ ಮಾಡುವುದನ್ನೇಕೆ ವೈಭಿಕರಿಸಬೇಕು? ಇದರಿಂದ ಮುಂದಿನ ಪೀಳಿಗೆಗೆ ಕೊಡುವ ಸಂದೇಶವೇನು?

-ಬೂಕನಕೆರೆ ವಿಜೇಂದ್ರ, ಮೈಸೂರು 


ಪರಿಣತಿಮತಿಗಳ್?!

ಆ ಕವಿರಾಜಮಾರ್ಗಕಾರ

ಈಗೇನಾದರೂ ಇದ್ದಿದ್ದರೆ

ಹೇಳುತ್ತಿದ್ದರೇನೊ!

(ಕ್ಷಮಿಸಿ)

ಕನ್ನಡಿಗರ್

ನುಡಿ ಸಮ್ಮೇಳನವಂ

ಮತ್ತೆ ಮತ್ತೆ
ಮುಂದೂಡಬಲ್ಲ

ಪರಿಣತಿಮತಿಗಳ್ ?!

-ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ದೇವರ ದುಬಾರಿ ದರ್ಶನ

ಹಾಸನಾಂಬ ದೇವಾಲಯದ ಬಾಗಿಲು ೧೪ ದಿನಗಳವರೆಗೆ ತೆರೆದಿದೆ. ಆದರೆ ದೇವರ ದರ್ಶನಕ್ಕೆ ಸಾವಿರ, ಮುನ್ನೂರು ರೂ. ವಿಶೇಷ ದರ್ಶನ ಶುಲ್ಕ ವಿಧಿಸಿರುವುದು ದೇವಾಲಯಗಳ ಮಾರುಕಟ್ಟೆ ಮುಖವನ್ನು ತೆರೆದಿಡುತ್ತವೆ!
ಅಲ್ಲದೆ ದೇವರ ದರ್ಶನವನ್ನು ಕೆಲವೇ ದಿನಗಳಿಗೆ ಸೀಮಿತಗೊಳಿಸಲಾಗಿದೆ. ಆದರೆ ಬರುವ ಭಕ್ತರಿಗೆ ಸರದಿ ಸಾಲಿನಲ್ಲಿ ನಿಲ್ಲುವಂತೆ ಮಾಡಿ ಮದ್ಯಹ್ನ ೨ ಗಂಟೆ ದೇವಸ್ಥಾನದ ಬಾಗಿಲು ಮುಚ್ಚಿ ಭಕ್ತರನ್ನು ಕಾಯಿಸುವುದು ಏಕೆ? ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರಿಗೆ ಅಲ್ಲಿ ಊಟ, ಶೌಚಾಲಯದ ವ್ಯವಸ್ಥೆ ಯನ್ನು ಜಿಲ್ಲಾಡಳಿತ ಮಾಡಿದೆಯೇ?
ಇನ್ನು ಹಾಸನಾಂಬ ದೇವಾಲಯದಲ್ಲಿ ಹಚ್ಚಿದ ದೀಪ ವರ್ಷವಿಡೀ ಆರದೆ ಉರಿಯುತ್ತಿರುತ್ತದೆ ಎಂದು ಭಕ್ತರನ್ನು ನಂಬಿಸಲಾಗಿದೆ. ವಿಪರ್ಯಾಸವೆಂದರೆ ಇದನ್ನು ನಮ್ಮ ಬಹಳಷ್ಟು ವಿದ್ಯಾವಂತ ಭಕ್ತರೇ ನಂಬುತ್ತಾರೆ! ಅಲ್ಲಿ ವರ್ಷವಿಡೀ ದೀಪ ಉರಿಯುತ್ತದೆ ಎನ್ನುವುದನ್ನು ಕಳೆದ ವರ್ಷ ಅಲ್ಲಿನ ಆಡಳಿತ ಮಂಡಳಿಯೇ ನಿರಾಕರಿಸಿತ್ತು. ದೇವಾಲಯದ ಬಾಗಿಲು ತೆರೆದ ದಿನದಿಂದ ದೇವಾಲಯದ ಬಾಗಿಲು ಮುಚ್ಚುವವರೆಗಿನ ದಿನಗಳವರೆಗೆ ಹಗಲು -ರಾತ್ರಿ ದೀಪ ಆರದಂತೆ ನೋಡಿ ಕೊಳ್ಳ ಲಾಗು ತ್ತದೆ ಎನ್ನುವುದು ಮಾತ್ರ ವಾಸ್ತವ.

-ಮುಳ್ಳೂರು ಪ್ರಕಾಶ್, ಕನಕ ದಾಸ ನಗರ, ಮೈಸೂರು

andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

8 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

11 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago