ಓದುಗರ ಪತ್ರ
ಈ ಬಾರಿ ಪರಿಸರ ಸ್ನೇಹಿ ಗಣಪ ಇರಲಿ!
ಪ್ರತಿ ವರ್ಷದಂತೆ ಈ ವರ್ಷವೂ ಗೌರಿ ಗಣೇಶ ಹಬ್ಬ ಬಂದಿದೆ. ಈ ಸಂದರ್ಭದಲ್ಲಿ ಪ್ರತಿ ಮನೆ, ಗ್ರಾಮ, ನಗರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಕೂರಿಸಿ ಸಂಭ್ರಮಿಸುವ ಭಕ್ತಸಮೂಹ ದೊಡ್ಡದಿದೆ. ಇತ್ತೀಚೆಗೆ ಜನರು ಭಕ್ತಿಭಾವದ ಜೊತೆಗೆ ಆಡಂಬರದ ಪೂಜೆಯನ್ನು ಮಾಡುತ್ತಿದ್ದಾರೆ. ಬಹುದೊಡ್ಡ ಗಾತ್ರದ ಮತ್ತು ರಾಸಾಯನಿಕ ಬಣ್ಣಗಳಿಂದ ಹೊಳೆಯುವ ಗಣೇಶನನ್ನು ಕೂರಿಸುತ್ತಾರೆ. ಈ ನಿಟ್ಟಿನಲ್ಲಿ ದೊಡ್ಡ ದೊಡ್ಡ ಧ್ವನಿವರ್ಧಕಗಳನ್ನು ಬಳಸಿ, ಬೆಳಿಗ್ಗೆಯಿಂದ ಸಂಜೆ ತನಕ ಹಾಡನ್ನು ಹಚ್ಚಿಯೇ ಇಡುವುದು, ವಾಯು ಮಾಲಿನ್ಯ ಉಂಟಾಗುವಷ್ಟು ಪಟಾಕಿ ಸಿಡಿಸುವುದು ತಪ್ಪಬೇಕಿದೆ. ಇದರಿಂದ ವೃದ್ಧರಿಗೆ, ಪುಟಾಣಿಗಳಿಗೆ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕಷ್ಟವಾಗುತ್ತದೆ. ಮಣ್ಣು ಮತ್ತು ಪರಿಸರ ಸ್ನೇಹಿ ಬಣ್ಣಗಳಿಂದ ಮಾಡಿದ ಮೂರ್ತಿಯ ಹೊರತಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್, ಥರ್ಮಕೋಲ್, ರಾಸಾಯನಿಕ ಬಳಿದ ಮೂರ್ತಿಗಳು, ಅಂಟು ವಸ್ತುಗಳಿಂದ ಮಾಡಿದ, ಪ್ಲಾಸ್ಟಿಕ್ನಿಂದ ಮಾಡಿದ ಮೂರ್ತಿಗಳೆಲ್ಲವೂ ತೀವ್ರ ಹಾನಿಕರ ಮತ್ತು ವಿಷಕಾರಿ. ಕಾರಣ ಇವುಗಳು ನೀರಲ್ಲಿ ಕರಗುವುದಿಲ್ಲ. ಸಂಯೋಜಿತ ಬಣ್ಣಗಳಲ್ಲಿ ಅಪಾಯಕಾರಿ ಭಾರ ಲೋಹಗಳಾದ ಸತು, ಕ್ರೋಮಿಯಂ, ಸೀಸ, ನಿಕಲ್, ಕ್ಯಾಡ್ಮಿಯಂ ಇತ್ಯಾದಿಗಳಿರುತ್ತವೆ. ಇವುಗಳು ಮನುಷ್ಯರು, ಪ್ರಾಣಿ ಸಸ್ಯಗಳಿಗೆ ತೀವ್ರ ಹಾನಿಕರ. ಇನ್ನು ಪ್ಲಾಸ್ಟರ್ ಆಫ್ ಪ್ಯಾರಿಸ್ನಲ್ಲಿ ಕ್ಯಾನ್ಸರ್ ಕಾರಕ ಅಸ್ಬೆಸ್ಟಾಸ್ ಇರುತ್ತದೆ. ಇದಕ್ಕೆ ಬಳಿಯುವ ಆಯಿಲ್ ಪೈಂಟ್ಗಳಲ್ಲೂ ರಾಸಾಯನಿಕಗಳಿದ್ದು, ಗಣಪತಿ ವಿಸರ್ಜನೆ ಮಾಡಿದ ಕೆರೆ, ನದಿ ನೀರನ್ನು ಬಳಸುವುದರಿಂದ ಆರೋಗ್ಯದ ಮೇಲೆ ಅಲ್ಪಾವಧಿ ಮತ್ತು ದೀರ್ಘಾವಧಿ ಪರಿಣಾಮ ಬೀರಬಹುದು! ಆದ ಕಾರಣ ನಮ್ಮನ್ನು ಸಲಹುತ್ತಿರುವ ಪರಿಸರಕ್ಕೆ ಕ್ಷೋಭೆಯಾಗದಂತೆ ಗಣೇಶನ ಮೂರ್ತಿಯನ್ನು ಸಿದ್ಧಪಡಿಸಿ ಪೂಜಿಸುವುದು ನಮ್ಮ ಕೆಲಸವಾಗಬೇಕಿದೆ. ನಾವೆಲ್ಲರೂ ಪರಿಸರ ಕಾಪಾಡಿದರೆ ಪರಿಸರ ನಮ್ಮನ್ನು ಅಷ್ಟೇ ಚೆನ್ನಾಗಿ ಕಾಪಾಡಿಕೊಳ್ಳುತ್ತೆ ಎನ್ನುವುದನ್ನು ನೆನಪಿನಲ್ಲಿ ಇಡೋಣ. ಈ ಬಾರಿಯ ಗಣೇಶನ ಹಬ್ಬದಲ್ಲಿ ಎಲ್ಲರೂ ಪರಿಸರ ಸ್ನೇಹಿ ಗಣಪನ ಮೊರೆ ಹೋಗುವ ಮೂಲಕ ಪರಿಸರ ಸ್ನೇಹಿಯಾಗಿ ಸಂಭ್ರಮಿಸೋಣ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಹಿಂದಿ ಮೋಹಕ್ಕೆ ಕಡಿವಾಣ ಯಾವಾಗ?
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…