ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 22 ಶನಿವಾರ 2022

ಟ್ಯುಟೋರಿಯಲ್ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಕ್ಕೆ ತರಬೇಕು

ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಇತ್ತೀಚಿಗೆ ಕೋಚಿಂಗ್ ಕೇಂದ್ರದ ಒಬ್ಬ ವ್ಯಕ್ತಿ ಹತ್ತು ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಕರ್ನಾಟಕವನ್ನು ಧಿಗ್ಭ್ರಮೆಗೊಳಿಸಿದೆ. ಜನಪರ ಸಂಘಟನೆಗಳು ತಕ್ಷಣ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶವನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಕ್ಕೆ ಹಣದ ಪರಿಹಾರ ಘೋಷಿಸಿದೆ.

ಈ ಘಟನೆಯನ್ನು ಪೋಸ್ಕೊ ಪ್ರಕರಣದ ಹಿನ್ನಲೆಯಲ್ಲಿ ನೋಡಬೇಕಾಗುತ್ತದೆ. ಇಲ್ಲಿಯ ಸಂತ್ರಸ್ತರು ಸಾಮಾನ್ಯ ಪ್ರಜೆಗಳ ಹೆಣ್ಣು ಮಕ್ಕಳಾಗಿದ್ದಾರೆ. ಇವರ ಆರ್ಥಿಕ ಸಾಮಾಜಿಕ ಪರಿಸ್ಥಿತಿಯನ್ನು ವಿಮರ್ಶಿಸಿ, ಗಮನಿಸುವುದಾದರೆ ಮಕ್ಕಳ ವಿದ್ಯಾಭ್ಯಾಸದ ವ್ಯವಸ್ಥೆಯ ಕೊರತೆಗಳೆ ಮೂಲ ಕಾರಣವಾಗಿವೆ. ಸರ್ಕಾರಿ ಶಾಲೆಗಳ ಹೀನಾಯ ಪರಿಸ್ಥಿತಿಯಿಂದಾಗಿ ಖಾಸಗೀ ಕೋಚಿಂಗ್ ಬೆಳೆದಿವೆ. ಇಡೀ ಕರ್ನಾಟಕದಲ್ಲಿ ಬಹುಪಾಲು ಕೋಚಿಂಗ್ ಸಂಸ್ಥೆಗಳು ನೊಂದಣಿ ಆಗಿಲ್ಲ. ಕರ್ನಾಟಕ ಶಿಕ್ಷಣ ಕಾನೂನು ೧೯೮೩ರ ಅನುಬಂಧ ೩೫ರ ಮತ್ತು ಕರ್ನಾಟಕ ಟುಟೋರಿಯಲ್ ಇನ್ಸ್ಟಿಟ್ಯೂಷನ್ ಕಾನೂನು ೨೦೦೧ರ ಪ್ರಕಾರ ಸ್ಥಳೀಯ ಬ್ಲಾಕ್ ಎಜುಕೇಷನ್ ಅಧಿಕಾರಿಗಳು ಈ ಕೋಚಿಂಗ್ ಕೇಂದ್ರಗಳನ್ನು ನೊಂದಣಿ ಮಾಡಲು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಳವಳ್ಳಿಯ ಘಟನೆ ಇಡೀ ಸಮಾಜಕ್ಕೆ ಮತ್ತು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

ಕರ್ನಾಟಕದಲ್ಲಿ ಒಂದು ಅಂದಾಜಿನ ಪ್ರಕಾರ, ಒಂದು ಕೋಟಿಯಷ್ಟು ಮಕ್ಕಳು ಶಾಲೆಗಳಿಗೆ ಹೋಗುತ್ತಾರೆ. ಇವರಲ್ಲಿ ಸರ್ಕಾರಿ ಶಾಲೆಗಳಲ್ಲೇ ೫೪ ಲಕ್ಷ ಮಕ್ಕಳು ಓದುತ್ತಿದ್ದಾರೆ. ೨೦ಲ ಕ್ಷ ಮಕ್ಕಳು ಕೋಚಿಂಗ್ ಕೇಂದ್ರಗಳಿಗೆ ಹೋಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಪ್ರತಿಯೊಂದು ಕೋಚಿಂಗ್ ಕೇಂದ್ರಕ್ಕೆ ೫೦೦ ಜನ ಮಕ್ಕಳು ಹೋದರು ಎಂದು ಅಂದಾಜಿಸಿದರೂ ಇಂದು ೪,೦೦೦ ಖಾಸಗೀ ಕೋಚಿಂಗ್ ಕೇಂದ್ರಗಳಿವೆ. ಜತೆಗೆ ನೂರಾರು ಆನ್‌ಲೈನ್ ಕೋಚಿಂಗ್ ಕೇಂದ್ರಗಳಿವೆ.
ಈ ಶೈಕ್ಷಣಿಕ ದಂಧೆಯನ್ನು ಕಾನೂನಿನ ಚೌಕಟ್ಟಿನ ಒಳಗೆ ತರುವ ಅವಶ್ಯಕತೆ ಇದೆ. ಹೀಗಾದಾಗ ಮಾತ್ರ ಇಂತಹ ಭಯಂಕರ ಮಾರಣಾಂತಿಕ ಘಟನೆಗಳನ್ನು ತಪ್ಪಿಸಬಹುದು.

ಜತೆಗೆ, ಚಿತ್ರದುರ್ಗದ ಮುರುಘಾ ಮಠದ ಪ್ರಕರಣದ ಹಿನ್ನೆಲೆಯಲ್ಲಿ, ಕರ್ನಾಟಕದ ಮಠ ಮಾನ್ಯಗಳ ವಸತಿ ಶಾಲೆಗಳನ್ನು ಸಹ ಅರೆ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಈ ವರೆಗೆ ಸರ್ಕಾರದಿಂದ ಈ ವಿಷಯದಲ್ಲಿ ಆಗಿರುವ ಕಾನೂನು ಜಾರಿಯ ಲೋಪವನ್ನು ಸರಿಪಡಿಸಬೇಕೆಂದು ಈ ಮೂಲಕ ನಾವು ಒತ್ತಾಯಿಸುತ್ತೇವೆ.

ರತಿರಾವ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ, ಮೈಸೂರು. -ಸಬಿಹಾ ಭೂಮಿ ಗೌಡ, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಮೈಸೂರು, -ಡಾ. ವಿ. ಲಕ್ಷ್ಮೀ ನಾರಾಯಣ, ಅಖಿಲ ಭಾರತ ಪ್ರಜಾ ವೇದಿಕೆ, ಮೈಸೂರು.

andolanait

Recent Posts

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

1 min ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

8 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

42 mins ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

1 hour ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

1 hour ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…

2 hours ago