ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 22 ಶನಿವಾರ 2022

ಟ್ಯುಟೋರಿಯಲ್ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಕ್ಕೆ ತರಬೇಕು

ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಇತ್ತೀಚಿಗೆ ಕೋಚಿಂಗ್ ಕೇಂದ್ರದ ಒಬ್ಬ ವ್ಯಕ್ತಿ ಹತ್ತು ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಕರ್ನಾಟಕವನ್ನು ಧಿಗ್ಭ್ರಮೆಗೊಳಿಸಿದೆ. ಜನಪರ ಸಂಘಟನೆಗಳು ತಕ್ಷಣ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶವನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಕ್ಕೆ ಹಣದ ಪರಿಹಾರ ಘೋಷಿಸಿದೆ.

ಈ ಘಟನೆಯನ್ನು ಪೋಸ್ಕೊ ಪ್ರಕರಣದ ಹಿನ್ನಲೆಯಲ್ಲಿ ನೋಡಬೇಕಾಗುತ್ತದೆ. ಇಲ್ಲಿಯ ಸಂತ್ರಸ್ತರು ಸಾಮಾನ್ಯ ಪ್ರಜೆಗಳ ಹೆಣ್ಣು ಮಕ್ಕಳಾಗಿದ್ದಾರೆ. ಇವರ ಆರ್ಥಿಕ ಸಾಮಾಜಿಕ ಪರಿಸ್ಥಿತಿಯನ್ನು ವಿಮರ್ಶಿಸಿ, ಗಮನಿಸುವುದಾದರೆ ಮಕ್ಕಳ ವಿದ್ಯಾಭ್ಯಾಸದ ವ್ಯವಸ್ಥೆಯ ಕೊರತೆಗಳೆ ಮೂಲ ಕಾರಣವಾಗಿವೆ. ಸರ್ಕಾರಿ ಶಾಲೆಗಳ ಹೀನಾಯ ಪರಿಸ್ಥಿತಿಯಿಂದಾಗಿ ಖಾಸಗೀ ಕೋಚಿಂಗ್ ಬೆಳೆದಿವೆ. ಇಡೀ ಕರ್ನಾಟಕದಲ್ಲಿ ಬಹುಪಾಲು ಕೋಚಿಂಗ್ ಸಂಸ್ಥೆಗಳು ನೊಂದಣಿ ಆಗಿಲ್ಲ. ಕರ್ನಾಟಕ ಶಿಕ್ಷಣ ಕಾನೂನು ೧೯೮೩ರ ಅನುಬಂಧ ೩೫ರ ಮತ್ತು ಕರ್ನಾಟಕ ಟುಟೋರಿಯಲ್ ಇನ್ಸ್ಟಿಟ್ಯೂಷನ್ ಕಾನೂನು ೨೦೦೧ರ ಪ್ರಕಾರ ಸ್ಥಳೀಯ ಬ್ಲಾಕ್ ಎಜುಕೇಷನ್ ಅಧಿಕಾರಿಗಳು ಈ ಕೋಚಿಂಗ್ ಕೇಂದ್ರಗಳನ್ನು ನೊಂದಣಿ ಮಾಡಲು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಳವಳ್ಳಿಯ ಘಟನೆ ಇಡೀ ಸಮಾಜಕ್ಕೆ ಮತ್ತು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

ಕರ್ನಾಟಕದಲ್ಲಿ ಒಂದು ಅಂದಾಜಿನ ಪ್ರಕಾರ, ಒಂದು ಕೋಟಿಯಷ್ಟು ಮಕ್ಕಳು ಶಾಲೆಗಳಿಗೆ ಹೋಗುತ್ತಾರೆ. ಇವರಲ್ಲಿ ಸರ್ಕಾರಿ ಶಾಲೆಗಳಲ್ಲೇ ೫೪ ಲಕ್ಷ ಮಕ್ಕಳು ಓದುತ್ತಿದ್ದಾರೆ. ೨೦ಲ ಕ್ಷ ಮಕ್ಕಳು ಕೋಚಿಂಗ್ ಕೇಂದ್ರಗಳಿಗೆ ಹೋಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಪ್ರತಿಯೊಂದು ಕೋಚಿಂಗ್ ಕೇಂದ್ರಕ್ಕೆ ೫೦೦ ಜನ ಮಕ್ಕಳು ಹೋದರು ಎಂದು ಅಂದಾಜಿಸಿದರೂ ಇಂದು ೪,೦೦೦ ಖಾಸಗೀ ಕೋಚಿಂಗ್ ಕೇಂದ್ರಗಳಿವೆ. ಜತೆಗೆ ನೂರಾರು ಆನ್‌ಲೈನ್ ಕೋಚಿಂಗ್ ಕೇಂದ್ರಗಳಿವೆ.
ಈ ಶೈಕ್ಷಣಿಕ ದಂಧೆಯನ್ನು ಕಾನೂನಿನ ಚೌಕಟ್ಟಿನ ಒಳಗೆ ತರುವ ಅವಶ್ಯಕತೆ ಇದೆ. ಹೀಗಾದಾಗ ಮಾತ್ರ ಇಂತಹ ಭಯಂಕರ ಮಾರಣಾಂತಿಕ ಘಟನೆಗಳನ್ನು ತಪ್ಪಿಸಬಹುದು.

ಜತೆಗೆ, ಚಿತ್ರದುರ್ಗದ ಮುರುಘಾ ಮಠದ ಪ್ರಕರಣದ ಹಿನ್ನೆಲೆಯಲ್ಲಿ, ಕರ್ನಾಟಕದ ಮಠ ಮಾನ್ಯಗಳ ವಸತಿ ಶಾಲೆಗಳನ್ನು ಸಹ ಅರೆ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಈ ವರೆಗೆ ಸರ್ಕಾರದಿಂದ ಈ ವಿಷಯದಲ್ಲಿ ಆಗಿರುವ ಕಾನೂನು ಜಾರಿಯ ಲೋಪವನ್ನು ಸರಿಪಡಿಸಬೇಕೆಂದು ಈ ಮೂಲಕ ನಾವು ಒತ್ತಾಯಿಸುತ್ತೇವೆ.

ರತಿರಾವ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ, ಮೈಸೂರು. -ಸಬಿಹಾ ಭೂಮಿ ಗೌಡ, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಮೈಸೂರು, -ಡಾ. ವಿ. ಲಕ್ಷ್ಮೀ ನಾರಾಯಣ, ಅಖಿಲ ಭಾರತ ಪ್ರಜಾ ವೇದಿಕೆ, ಮೈಸೂರು.

andolanait

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago