ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 22 ಶನಿವಾರ 2022

ಟ್ಯುಟೋರಿಯಲ್ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಕ್ಕೆ ತರಬೇಕು

ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಇತ್ತೀಚಿಗೆ ಕೋಚಿಂಗ್ ಕೇಂದ್ರದ ಒಬ್ಬ ವ್ಯಕ್ತಿ ಹತ್ತು ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಕರ್ನಾಟಕವನ್ನು ಧಿಗ್ಭ್ರಮೆಗೊಳಿಸಿದೆ. ಜನಪರ ಸಂಘಟನೆಗಳು ತಕ್ಷಣ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶವನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಕ್ಕೆ ಹಣದ ಪರಿಹಾರ ಘೋಷಿಸಿದೆ.

ಈ ಘಟನೆಯನ್ನು ಪೋಸ್ಕೊ ಪ್ರಕರಣದ ಹಿನ್ನಲೆಯಲ್ಲಿ ನೋಡಬೇಕಾಗುತ್ತದೆ. ಇಲ್ಲಿಯ ಸಂತ್ರಸ್ತರು ಸಾಮಾನ್ಯ ಪ್ರಜೆಗಳ ಹೆಣ್ಣು ಮಕ್ಕಳಾಗಿದ್ದಾರೆ. ಇವರ ಆರ್ಥಿಕ ಸಾಮಾಜಿಕ ಪರಿಸ್ಥಿತಿಯನ್ನು ವಿಮರ್ಶಿಸಿ, ಗಮನಿಸುವುದಾದರೆ ಮಕ್ಕಳ ವಿದ್ಯಾಭ್ಯಾಸದ ವ್ಯವಸ್ಥೆಯ ಕೊರತೆಗಳೆ ಮೂಲ ಕಾರಣವಾಗಿವೆ. ಸರ್ಕಾರಿ ಶಾಲೆಗಳ ಹೀನಾಯ ಪರಿಸ್ಥಿತಿಯಿಂದಾಗಿ ಖಾಸಗೀ ಕೋಚಿಂಗ್ ಬೆಳೆದಿವೆ. ಇಡೀ ಕರ್ನಾಟಕದಲ್ಲಿ ಬಹುಪಾಲು ಕೋಚಿಂಗ್ ಸಂಸ್ಥೆಗಳು ನೊಂದಣಿ ಆಗಿಲ್ಲ. ಕರ್ನಾಟಕ ಶಿಕ್ಷಣ ಕಾನೂನು ೧೯೮೩ರ ಅನುಬಂಧ ೩೫ರ ಮತ್ತು ಕರ್ನಾಟಕ ಟುಟೋರಿಯಲ್ ಇನ್ಸ್ಟಿಟ್ಯೂಷನ್ ಕಾನೂನು ೨೦೦೧ರ ಪ್ರಕಾರ ಸ್ಥಳೀಯ ಬ್ಲಾಕ್ ಎಜುಕೇಷನ್ ಅಧಿಕಾರಿಗಳು ಈ ಕೋಚಿಂಗ್ ಕೇಂದ್ರಗಳನ್ನು ನೊಂದಣಿ ಮಾಡಲು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಳವಳ್ಳಿಯ ಘಟನೆ ಇಡೀ ಸಮಾಜಕ್ಕೆ ಮತ್ತು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

ಕರ್ನಾಟಕದಲ್ಲಿ ಒಂದು ಅಂದಾಜಿನ ಪ್ರಕಾರ, ಒಂದು ಕೋಟಿಯಷ್ಟು ಮಕ್ಕಳು ಶಾಲೆಗಳಿಗೆ ಹೋಗುತ್ತಾರೆ. ಇವರಲ್ಲಿ ಸರ್ಕಾರಿ ಶಾಲೆಗಳಲ್ಲೇ ೫೪ ಲಕ್ಷ ಮಕ್ಕಳು ಓದುತ್ತಿದ್ದಾರೆ. ೨೦ಲ ಕ್ಷ ಮಕ್ಕಳು ಕೋಚಿಂಗ್ ಕೇಂದ್ರಗಳಿಗೆ ಹೋಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಪ್ರತಿಯೊಂದು ಕೋಚಿಂಗ್ ಕೇಂದ್ರಕ್ಕೆ ೫೦೦ ಜನ ಮಕ್ಕಳು ಹೋದರು ಎಂದು ಅಂದಾಜಿಸಿದರೂ ಇಂದು ೪,೦೦೦ ಖಾಸಗೀ ಕೋಚಿಂಗ್ ಕೇಂದ್ರಗಳಿವೆ. ಜತೆಗೆ ನೂರಾರು ಆನ್‌ಲೈನ್ ಕೋಚಿಂಗ್ ಕೇಂದ್ರಗಳಿವೆ.
ಈ ಶೈಕ್ಷಣಿಕ ದಂಧೆಯನ್ನು ಕಾನೂನಿನ ಚೌಕಟ್ಟಿನ ಒಳಗೆ ತರುವ ಅವಶ್ಯಕತೆ ಇದೆ. ಹೀಗಾದಾಗ ಮಾತ್ರ ಇಂತಹ ಭಯಂಕರ ಮಾರಣಾಂತಿಕ ಘಟನೆಗಳನ್ನು ತಪ್ಪಿಸಬಹುದು.

ಜತೆಗೆ, ಚಿತ್ರದುರ್ಗದ ಮುರುಘಾ ಮಠದ ಪ್ರಕರಣದ ಹಿನ್ನೆಲೆಯಲ್ಲಿ, ಕರ್ನಾಟಕದ ಮಠ ಮಾನ್ಯಗಳ ವಸತಿ ಶಾಲೆಗಳನ್ನು ಸಹ ಅರೆ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಈ ವರೆಗೆ ಸರ್ಕಾರದಿಂದ ಈ ವಿಷಯದಲ್ಲಿ ಆಗಿರುವ ಕಾನೂನು ಜಾರಿಯ ಲೋಪವನ್ನು ಸರಿಪಡಿಸಬೇಕೆಂದು ಈ ಮೂಲಕ ನಾವು ಒತ್ತಾಯಿಸುತ್ತೇವೆ.

ರತಿರಾವ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ, ಮೈಸೂರು. -ಸಬಿಹಾ ಭೂಮಿ ಗೌಡ, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಮೈಸೂರು, -ಡಾ. ವಿ. ಲಕ್ಷ್ಮೀ ನಾರಾಯಣ, ಅಖಿಲ ಭಾರತ ಪ್ರಜಾ ವೇದಿಕೆ, ಮೈಸೂರು.

andolanait

Recent Posts

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

3 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

50 mins ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

3 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

3 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

4 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

4 hours ago