ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 22 ಶನಿವಾರ 2022

ಟ್ಯುಟೋರಿಯಲ್ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಕ್ಕೆ ತರಬೇಕು

ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಇತ್ತೀಚಿಗೆ ಕೋಚಿಂಗ್ ಕೇಂದ್ರದ ಒಬ್ಬ ವ್ಯಕ್ತಿ ಹತ್ತು ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಕರ್ನಾಟಕವನ್ನು ಧಿಗ್ಭ್ರಮೆಗೊಳಿಸಿದೆ. ಜನಪರ ಸಂಘಟನೆಗಳು ತಕ್ಷಣ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶವನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಕ್ಕೆ ಹಣದ ಪರಿಹಾರ ಘೋಷಿಸಿದೆ.

ಈ ಘಟನೆಯನ್ನು ಪೋಸ್ಕೊ ಪ್ರಕರಣದ ಹಿನ್ನಲೆಯಲ್ಲಿ ನೋಡಬೇಕಾಗುತ್ತದೆ. ಇಲ್ಲಿಯ ಸಂತ್ರಸ್ತರು ಸಾಮಾನ್ಯ ಪ್ರಜೆಗಳ ಹೆಣ್ಣು ಮಕ್ಕಳಾಗಿದ್ದಾರೆ. ಇವರ ಆರ್ಥಿಕ ಸಾಮಾಜಿಕ ಪರಿಸ್ಥಿತಿಯನ್ನು ವಿಮರ್ಶಿಸಿ, ಗಮನಿಸುವುದಾದರೆ ಮಕ್ಕಳ ವಿದ್ಯಾಭ್ಯಾಸದ ವ್ಯವಸ್ಥೆಯ ಕೊರತೆಗಳೆ ಮೂಲ ಕಾರಣವಾಗಿವೆ. ಸರ್ಕಾರಿ ಶಾಲೆಗಳ ಹೀನಾಯ ಪರಿಸ್ಥಿತಿಯಿಂದಾಗಿ ಖಾಸಗೀ ಕೋಚಿಂಗ್ ಬೆಳೆದಿವೆ. ಇಡೀ ಕರ್ನಾಟಕದಲ್ಲಿ ಬಹುಪಾಲು ಕೋಚಿಂಗ್ ಸಂಸ್ಥೆಗಳು ನೊಂದಣಿ ಆಗಿಲ್ಲ. ಕರ್ನಾಟಕ ಶಿಕ್ಷಣ ಕಾನೂನು ೧೯೮೩ರ ಅನುಬಂಧ ೩೫ರ ಮತ್ತು ಕರ್ನಾಟಕ ಟುಟೋರಿಯಲ್ ಇನ್ಸ್ಟಿಟ್ಯೂಷನ್ ಕಾನೂನು ೨೦೦೧ರ ಪ್ರಕಾರ ಸ್ಥಳೀಯ ಬ್ಲಾಕ್ ಎಜುಕೇಷನ್ ಅಧಿಕಾರಿಗಳು ಈ ಕೋಚಿಂಗ್ ಕೇಂದ್ರಗಳನ್ನು ನೊಂದಣಿ ಮಾಡಲು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಳವಳ್ಳಿಯ ಘಟನೆ ಇಡೀ ಸಮಾಜಕ್ಕೆ ಮತ್ತು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

ಕರ್ನಾಟಕದಲ್ಲಿ ಒಂದು ಅಂದಾಜಿನ ಪ್ರಕಾರ, ಒಂದು ಕೋಟಿಯಷ್ಟು ಮಕ್ಕಳು ಶಾಲೆಗಳಿಗೆ ಹೋಗುತ್ತಾರೆ. ಇವರಲ್ಲಿ ಸರ್ಕಾರಿ ಶಾಲೆಗಳಲ್ಲೇ ೫೪ ಲಕ್ಷ ಮಕ್ಕಳು ಓದುತ್ತಿದ್ದಾರೆ. ೨೦ಲ ಕ್ಷ ಮಕ್ಕಳು ಕೋಚಿಂಗ್ ಕೇಂದ್ರಗಳಿಗೆ ಹೋಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಪ್ರತಿಯೊಂದು ಕೋಚಿಂಗ್ ಕೇಂದ್ರಕ್ಕೆ ೫೦೦ ಜನ ಮಕ್ಕಳು ಹೋದರು ಎಂದು ಅಂದಾಜಿಸಿದರೂ ಇಂದು ೪,೦೦೦ ಖಾಸಗೀ ಕೋಚಿಂಗ್ ಕೇಂದ್ರಗಳಿವೆ. ಜತೆಗೆ ನೂರಾರು ಆನ್‌ಲೈನ್ ಕೋಚಿಂಗ್ ಕೇಂದ್ರಗಳಿವೆ.
ಈ ಶೈಕ್ಷಣಿಕ ದಂಧೆಯನ್ನು ಕಾನೂನಿನ ಚೌಕಟ್ಟಿನ ಒಳಗೆ ತರುವ ಅವಶ್ಯಕತೆ ಇದೆ. ಹೀಗಾದಾಗ ಮಾತ್ರ ಇಂತಹ ಭಯಂಕರ ಮಾರಣಾಂತಿಕ ಘಟನೆಗಳನ್ನು ತಪ್ಪಿಸಬಹುದು.

ಜತೆಗೆ, ಚಿತ್ರದುರ್ಗದ ಮುರುಘಾ ಮಠದ ಪ್ರಕರಣದ ಹಿನ್ನೆಲೆಯಲ್ಲಿ, ಕರ್ನಾಟಕದ ಮಠ ಮಾನ್ಯಗಳ ವಸತಿ ಶಾಲೆಗಳನ್ನು ಸಹ ಅರೆ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಈ ವರೆಗೆ ಸರ್ಕಾರದಿಂದ ಈ ವಿಷಯದಲ್ಲಿ ಆಗಿರುವ ಕಾನೂನು ಜಾರಿಯ ಲೋಪವನ್ನು ಸರಿಪಡಿಸಬೇಕೆಂದು ಈ ಮೂಲಕ ನಾವು ಒತ್ತಾಯಿಸುತ್ತೇವೆ.

ರತಿರಾವ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ, ಮೈಸೂರು. -ಸಬಿಹಾ ಭೂಮಿ ಗೌಡ, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಮೈಸೂರು, -ಡಾ. ವಿ. ಲಕ್ಷ್ಮೀ ನಾರಾಯಣ, ಅಖಿಲ ಭಾರತ ಪ್ರಜಾ ವೇದಿಕೆ, ಮೈಸೂರು.

andolanait

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

54 mins ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

1 hour ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

1 hour ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

1 hour ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

1 hour ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

1 hour ago