ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 22 ಶನಿವಾರ 2022

ಟ್ಯುಟೋರಿಯಲ್ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಕ್ಕೆ ತರಬೇಕು

ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಇತ್ತೀಚಿಗೆ ಕೋಚಿಂಗ್ ಕೇಂದ್ರದ ಒಬ್ಬ ವ್ಯಕ್ತಿ ಹತ್ತು ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಕರ್ನಾಟಕವನ್ನು ಧಿಗ್ಭ್ರಮೆಗೊಳಿಸಿದೆ. ಜನಪರ ಸಂಘಟನೆಗಳು ತಕ್ಷಣ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶವನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಕ್ಕೆ ಹಣದ ಪರಿಹಾರ ಘೋಷಿಸಿದೆ.

ಈ ಘಟನೆಯನ್ನು ಪೋಸ್ಕೊ ಪ್ರಕರಣದ ಹಿನ್ನಲೆಯಲ್ಲಿ ನೋಡಬೇಕಾಗುತ್ತದೆ. ಇಲ್ಲಿಯ ಸಂತ್ರಸ್ತರು ಸಾಮಾನ್ಯ ಪ್ರಜೆಗಳ ಹೆಣ್ಣು ಮಕ್ಕಳಾಗಿದ್ದಾರೆ. ಇವರ ಆರ್ಥಿಕ ಸಾಮಾಜಿಕ ಪರಿಸ್ಥಿತಿಯನ್ನು ವಿಮರ್ಶಿಸಿ, ಗಮನಿಸುವುದಾದರೆ ಮಕ್ಕಳ ವಿದ್ಯಾಭ್ಯಾಸದ ವ್ಯವಸ್ಥೆಯ ಕೊರತೆಗಳೆ ಮೂಲ ಕಾರಣವಾಗಿವೆ. ಸರ್ಕಾರಿ ಶಾಲೆಗಳ ಹೀನಾಯ ಪರಿಸ್ಥಿತಿಯಿಂದಾಗಿ ಖಾಸಗೀ ಕೋಚಿಂಗ್ ಬೆಳೆದಿವೆ. ಇಡೀ ಕರ್ನಾಟಕದಲ್ಲಿ ಬಹುಪಾಲು ಕೋಚಿಂಗ್ ಸಂಸ್ಥೆಗಳು ನೊಂದಣಿ ಆಗಿಲ್ಲ. ಕರ್ನಾಟಕ ಶಿಕ್ಷಣ ಕಾನೂನು ೧೯೮೩ರ ಅನುಬಂಧ ೩೫ರ ಮತ್ತು ಕರ್ನಾಟಕ ಟುಟೋರಿಯಲ್ ಇನ್ಸ್ಟಿಟ್ಯೂಷನ್ ಕಾನೂನು ೨೦೦೧ರ ಪ್ರಕಾರ ಸ್ಥಳೀಯ ಬ್ಲಾಕ್ ಎಜುಕೇಷನ್ ಅಧಿಕಾರಿಗಳು ಈ ಕೋಚಿಂಗ್ ಕೇಂದ್ರಗಳನ್ನು ನೊಂದಣಿ ಮಾಡಲು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಳವಳ್ಳಿಯ ಘಟನೆ ಇಡೀ ಸಮಾಜಕ್ಕೆ ಮತ್ತು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

ಕರ್ನಾಟಕದಲ್ಲಿ ಒಂದು ಅಂದಾಜಿನ ಪ್ರಕಾರ, ಒಂದು ಕೋಟಿಯಷ್ಟು ಮಕ್ಕಳು ಶಾಲೆಗಳಿಗೆ ಹೋಗುತ್ತಾರೆ. ಇವರಲ್ಲಿ ಸರ್ಕಾರಿ ಶಾಲೆಗಳಲ್ಲೇ ೫೪ ಲಕ್ಷ ಮಕ್ಕಳು ಓದುತ್ತಿದ್ದಾರೆ. ೨೦ಲ ಕ್ಷ ಮಕ್ಕಳು ಕೋಚಿಂಗ್ ಕೇಂದ್ರಗಳಿಗೆ ಹೋಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಪ್ರತಿಯೊಂದು ಕೋಚಿಂಗ್ ಕೇಂದ್ರಕ್ಕೆ ೫೦೦ ಜನ ಮಕ್ಕಳು ಹೋದರು ಎಂದು ಅಂದಾಜಿಸಿದರೂ ಇಂದು ೪,೦೦೦ ಖಾಸಗೀ ಕೋಚಿಂಗ್ ಕೇಂದ್ರಗಳಿವೆ. ಜತೆಗೆ ನೂರಾರು ಆನ್‌ಲೈನ್ ಕೋಚಿಂಗ್ ಕೇಂದ್ರಗಳಿವೆ.
ಈ ಶೈಕ್ಷಣಿಕ ದಂಧೆಯನ್ನು ಕಾನೂನಿನ ಚೌಕಟ್ಟಿನ ಒಳಗೆ ತರುವ ಅವಶ್ಯಕತೆ ಇದೆ. ಹೀಗಾದಾಗ ಮಾತ್ರ ಇಂತಹ ಭಯಂಕರ ಮಾರಣಾಂತಿಕ ಘಟನೆಗಳನ್ನು ತಪ್ಪಿಸಬಹುದು.

ಜತೆಗೆ, ಚಿತ್ರದುರ್ಗದ ಮುರುಘಾ ಮಠದ ಪ್ರಕರಣದ ಹಿನ್ನೆಲೆಯಲ್ಲಿ, ಕರ್ನಾಟಕದ ಮಠ ಮಾನ್ಯಗಳ ವಸತಿ ಶಾಲೆಗಳನ್ನು ಸಹ ಅರೆ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಈ ವರೆಗೆ ಸರ್ಕಾರದಿಂದ ಈ ವಿಷಯದಲ್ಲಿ ಆಗಿರುವ ಕಾನೂನು ಜಾರಿಯ ಲೋಪವನ್ನು ಸರಿಪಡಿಸಬೇಕೆಂದು ಈ ಮೂಲಕ ನಾವು ಒತ್ತಾಯಿಸುತ್ತೇವೆ.

ರತಿರಾವ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ, ಮೈಸೂರು. -ಸಬಿಹಾ ಭೂಮಿ ಗೌಡ, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಮೈಸೂರು, -ಡಾ. ವಿ. ಲಕ್ಷ್ಮೀ ನಾರಾಯಣ, ಅಖಿಲ ಭಾರತ ಪ್ರಜಾ ವೇದಿಕೆ, ಮೈಸೂರು.

andolanait

Recent Posts

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

32 mins ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

1 hour ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

2 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

3 hours ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

4 hours ago