ಶ್ರೀ ಸಿದ್ದೇಶ್ವರ ಸ್ವಾಮೀಜಿ ಓರ್ವ ಶ್ರೇಷ್ಠ ಸಂತ
ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಧ್ಯಾತ್ಮದ ಬಗ್ಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಸಂತ, ಅನುಭವಿಯಾಗಿದ್ದರು. ವಿಜಯಪುರದ ಜ್ಞಾನ ಯೋಗಾಶ್ರಮವು ಪ್ರಪಂಚದ ಜನತೆಗೆ ಜ್ಞಾನ ದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿತ್ತು. ಯಾರ ಹಂಗಿಗೂ ಒಳಗಾಗದೆ ಸರ್ವ ಜನರಿಂದ ಪ್ರೀತಿ ಪಡೆದುಕೊಂಡಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಅನೇಕ ಪದವಿ, ಸನ್ಮಾನ ಮತ್ತು ಸರ್ಕಾರದ ಅನುದಾನವನ್ನೇ ನಯವಾಗಿ ತಿರಸ್ಕರಿಸಿದ ಮಹಾನುಭಾವರು. ಅವರು ಐದು ಭಾಷೆಗಳಲ್ಲಿ ನಿರರ್ಗಳವಾಗಿ ಪ್ರವಚನ ಮಾಡುತ್ತಿದ್ದರು, ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಪ್ರವಚನ ಕೇಳಲು ಆಗಮಿಸಿ ಶಾಂತ ಚಿತ್ತತೆಯಿಂದ ಆಲಿಸಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಯತ್ನ ಮಾಡುತ್ತಿ ದ್ದರು. ಅದೆಷ್ಟೋ ಜನರು ತಾವು ಮಾಡು ತ್ತಿದ್ದ ಕೊಲೆ, ಸುಲಿಗೆ, ಮೋಸ, ವಂಚನೆ, ಕೆಟ್ಟ ಕೆಲಸಗಳಿಗೆ ತಿಲಾಂಜಲಿ ಇಟ್ಟು, ಬದುಕಿನಲ್ಲಿ ಪರಿವರ್ತನೆಯಾಗಿ ನೆಮ್ಮದಿಯ ಜೀವನವನ್ನು ಕಟ್ಟಿಕೊಂಡಿದ್ದಾರೆ, ಆಡುಭಾಷೆಯಲ್ಲಿ ಅವರು ಮಾತನಾಡುವ ಪರಿ, ಅಸಂಖ್ಯಾತ ಭಕ್ತರ ಮನ ಮತ್ತು ಹೃದಯವನ್ನು ತಲುಪುತ್ತಿತ್ತು, ಸೂಜಿ ಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದ ಪ್ರಯೋಗ, ಕಥೆ ಮತ್ತು ಉದಾಹರಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿ ಸುತ್ತಿದ್ದರು, ಜೊತೆಗೆ ಪರಿಸರವೆಂದರೆ ಪಂಚಪ್ರಾಣ ಅದರಲ್ಲಿರುವ ಕಲ್ಲು, ಮಣ್ಣು, ಗಿಡ, ಮರ, ಹೂ, ಪಕ್ಷಿ, ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ವಿವರಿಸುವ ರೀತಿ ಅದ್ಬುತ ಮತ್ತು ಜನರನ್ನು ಮೂಕವಿಸ್ಮಿತ ರನ್ನಾಗಿ ಮಾಡುತ್ತಿದ್ದುದು ಸೋಜಿಗವಾಗಿತ್ತು. ಅವರ ನಿಧನದಿಂದ ಈ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹೇಳಬಹುದು.
-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…
ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…
ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…
ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…