ಶ್ರೀ ಸಿದ್ದೇಶ್ವರ ಸ್ವಾಮೀಜಿ ಓರ್ವ ಶ್ರೇಷ್ಠ ಸಂತ
ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಧ್ಯಾತ್ಮದ ಬಗ್ಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಸಂತ, ಅನುಭವಿಯಾಗಿದ್ದರು. ವಿಜಯಪುರದ ಜ್ಞಾನ ಯೋಗಾಶ್ರಮವು ಪ್ರಪಂಚದ ಜನತೆಗೆ ಜ್ಞಾನ ದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿತ್ತು. ಯಾರ ಹಂಗಿಗೂ ಒಳಗಾಗದೆ ಸರ್ವ ಜನರಿಂದ ಪ್ರೀತಿ ಪಡೆದುಕೊಂಡಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಅನೇಕ ಪದವಿ, ಸನ್ಮಾನ ಮತ್ತು ಸರ್ಕಾರದ ಅನುದಾನವನ್ನೇ ನಯವಾಗಿ ತಿರಸ್ಕರಿಸಿದ ಮಹಾನುಭಾವರು. ಅವರು ಐದು ಭಾಷೆಗಳಲ್ಲಿ ನಿರರ್ಗಳವಾಗಿ ಪ್ರವಚನ ಮಾಡುತ್ತಿದ್ದರು, ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಪ್ರವಚನ ಕೇಳಲು ಆಗಮಿಸಿ ಶಾಂತ ಚಿತ್ತತೆಯಿಂದ ಆಲಿಸಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಯತ್ನ ಮಾಡುತ್ತಿ ದ್ದರು. ಅದೆಷ್ಟೋ ಜನರು ತಾವು ಮಾಡು ತ್ತಿದ್ದ ಕೊಲೆ, ಸುಲಿಗೆ, ಮೋಸ, ವಂಚನೆ, ಕೆಟ್ಟ ಕೆಲಸಗಳಿಗೆ ತಿಲಾಂಜಲಿ ಇಟ್ಟು, ಬದುಕಿನಲ್ಲಿ ಪರಿವರ್ತನೆಯಾಗಿ ನೆಮ್ಮದಿಯ ಜೀವನವನ್ನು ಕಟ್ಟಿಕೊಂಡಿದ್ದಾರೆ, ಆಡುಭಾಷೆಯಲ್ಲಿ ಅವರು ಮಾತನಾಡುವ ಪರಿ, ಅಸಂಖ್ಯಾತ ಭಕ್ತರ ಮನ ಮತ್ತು ಹೃದಯವನ್ನು ತಲುಪುತ್ತಿತ್ತು, ಸೂಜಿ ಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದ ಪ್ರಯೋಗ, ಕಥೆ ಮತ್ತು ಉದಾಹರಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿ ಸುತ್ತಿದ್ದರು, ಜೊತೆಗೆ ಪರಿಸರವೆಂದರೆ ಪಂಚಪ್ರಾಣ ಅದರಲ್ಲಿರುವ ಕಲ್ಲು, ಮಣ್ಣು, ಗಿಡ, ಮರ, ಹೂ, ಪಕ್ಷಿ, ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ವಿವರಿಸುವ ರೀತಿ ಅದ್ಬುತ ಮತ್ತು ಜನರನ್ನು ಮೂಕವಿಸ್ಮಿತ ರನ್ನಾಗಿ ಮಾಡುತ್ತಿದ್ದುದು ಸೋಜಿಗವಾಗಿತ್ತು. ಅವರ ನಿಧನದಿಂದ ಈ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹೇಳಬಹುದು.
-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…