ಶ್ರೀ ಸಿದ್ದೇಶ್ವರ ಸ್ವಾಮೀಜಿ ಓರ್ವ ಶ್ರೇಷ್ಠ ಸಂತ
ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಧ್ಯಾತ್ಮದ ಬಗ್ಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಸಂತ, ಅನುಭವಿಯಾಗಿದ್ದರು. ವಿಜಯಪುರದ ಜ್ಞಾನ ಯೋಗಾಶ್ರಮವು ಪ್ರಪಂಚದ ಜನತೆಗೆ ಜ್ಞಾನ ದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿತ್ತು. ಯಾರ ಹಂಗಿಗೂ ಒಳಗಾಗದೆ ಸರ್ವ ಜನರಿಂದ ಪ್ರೀತಿ ಪಡೆದುಕೊಂಡಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಅನೇಕ ಪದವಿ, ಸನ್ಮಾನ ಮತ್ತು ಸರ್ಕಾರದ ಅನುದಾನವನ್ನೇ ನಯವಾಗಿ ತಿರಸ್ಕರಿಸಿದ ಮಹಾನುಭಾವರು. ಅವರು ಐದು ಭಾಷೆಗಳಲ್ಲಿ ನಿರರ್ಗಳವಾಗಿ ಪ್ರವಚನ ಮಾಡುತ್ತಿದ್ದರು, ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಪ್ರವಚನ ಕೇಳಲು ಆಗಮಿಸಿ ಶಾಂತ ಚಿತ್ತತೆಯಿಂದ ಆಲಿಸಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಯತ್ನ ಮಾಡುತ್ತಿ ದ್ದರು. ಅದೆಷ್ಟೋ ಜನರು ತಾವು ಮಾಡು ತ್ತಿದ್ದ ಕೊಲೆ, ಸುಲಿಗೆ, ಮೋಸ, ವಂಚನೆ, ಕೆಟ್ಟ ಕೆಲಸಗಳಿಗೆ ತಿಲಾಂಜಲಿ ಇಟ್ಟು, ಬದುಕಿನಲ್ಲಿ ಪರಿವರ್ತನೆಯಾಗಿ ನೆಮ್ಮದಿಯ ಜೀವನವನ್ನು ಕಟ್ಟಿಕೊಂಡಿದ್ದಾರೆ, ಆಡುಭಾಷೆಯಲ್ಲಿ ಅವರು ಮಾತನಾಡುವ ಪರಿ, ಅಸಂಖ್ಯಾತ ಭಕ್ತರ ಮನ ಮತ್ತು ಹೃದಯವನ್ನು ತಲುಪುತ್ತಿತ್ತು, ಸೂಜಿ ಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದ ಪ್ರಯೋಗ, ಕಥೆ ಮತ್ತು ಉದಾಹರಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿ ಸುತ್ತಿದ್ದರು, ಜೊತೆಗೆ ಪರಿಸರವೆಂದರೆ ಪಂಚಪ್ರಾಣ ಅದರಲ್ಲಿರುವ ಕಲ್ಲು, ಮಣ್ಣು, ಗಿಡ, ಮರ, ಹೂ, ಪಕ್ಷಿ, ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ವಿವರಿಸುವ ರೀತಿ ಅದ್ಬುತ ಮತ್ತು ಜನರನ್ನು ಮೂಕವಿಸ್ಮಿತ ರನ್ನಾಗಿ ಮಾಡುತ್ತಿದ್ದುದು ಸೋಜಿಗವಾಗಿತ್ತು. ಅವರ ನಿಧನದಿಂದ ಈ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹೇಳಬಹುದು.
-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…