ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 18 ಬುಧವಾರ 2023

ಗ್ರಂಥಾಲಯದಲ್ಲಿ ಸೌಲಭ್ಯ ಕಲ್ಪಿಸಿ

ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯಾಗಿ ದಶಕವೇ ಕಳೆದಿದ್ದು, ಸಮರ್ಪಕ ಸೌಲಭ್ಯಗಳಿಲ್ಲದೇ ಉಪ ಯೋಗಕ್ಕೆ ಬಾರದಂತಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಓದುಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಂಥಾಲಯವು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿತ್ತು. ಆದರೆ, ಗ್ರಂಥಾಲಯದಲ್ಲಿ ಯಾವುದೇ ರೀತಿಯ ಸೌಲಭ್ಯಗಳೂ ಓದುಗರಿಗೆ ಲಭ್ಯತೆ ಇಲ್ಲ. ಇದಲ್ಲದೆ, ಗ್ರಂಥಾಲಯದಲ್ಲಿ ಕುರ್ಚಿಗಳು ತೀರಾ ಕಡಿಮೆ ಸಂಖ್ಯೆಯಲ್ಲಿವೆ. ಅಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ಆಕಾಂಕ್ಷಿಗಳಿಗೆ ಪರಮಾರ್ಶನ ಪುಸ್ತಕಗಳ ಕೊರತೆಯೂ ಹೆಚ್ಚಾಗಿದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಗ್ರಂಥಪಾಲಕರಿಗೆ ಮನವಿ ಮಾಡಿದ್ದರೂ ಅವರು ಅದರ ಬಗ್ಗೆ ಸೂಕ್ತ ಕ್ರಮವಹಿಸುತ್ತಿಲ್ಲ. ಇದರೊಂದಿಗೆ ಗ್ರಂಥಾಲಯ ತೆರೆದಿರುವ ಸಮಯವನ್ನೂ ಹೆಚ್ಚಿಸಬೇಕು. ಇದರ ಬಗ್ಗೆಯೂ ಗ್ರಂಥಪಾಲಕರು ಗಮನ ಹರಿಸಿ ಅನುಕೂಲ ಮಾಡಿಕೊಡಬೇಕು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಓದುಗರ ಅನುಕೂಲಕ್ಕೆ ತಕ್ಕಂತೆ ಕ್ರಮಕೈಗೊಳ್ಳಬೇಕು.

ಆರ್.ಅಜಿತ್ ಕುಮಾರ್,

ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.


ಮದ್ಯವ್ಯಸನಿಗಳ ಹಾವಳಿ ತಪ್ಪಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಗಳ ಆವರಣದಲ್ಲಿ ಮದ್ಯ ವ್ಯಸನಿಗಳ ಮದ್ಯದ ಕೂಟಗಳು ಹೆಚ್ಚಾಗತೊಡಗಿವೆ. ಪ್ರತಿನಿತ್ಯ ರಾತ್ರಿಯಾಗುತ್ತಲೇ ಅಲ್ಲಿ ಕುಡುಕರು ಗುಂಪಾಗಿ ಕುಳಿತು ಮದ್ಯ ಸೇವಿಸುವುದಲ್ಲದೇ ಬಾಟಲಿಗಳನ್ನು ಅಲ್ಲಲ್ಲೇ ಬೀಸಾಡಿ ಹೋಗುತ್ತಿದ್ದಾರೆ. ಇದರಿಂದಾಗಿ ಕಾಲೇಜು ಆವರಣದಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲಿ, ಪ್ಯಾಕೆಟ್‌ಗಳು ಬಿದ್ದಿರುತ್ತವೆ. ಅಂತರಸಂತೆ ಕಾಲೇಜು ಆವರಣದಲ್ಲೇ ಮಹದೇಶ್ವರಸ್ವಾಮಿ ದೇವಾಲಯವೂ ಇದೆ. ಅಲ್ಲದೇ ಪ್ರೌಢಶಾಲೆಯೂ ಪಕ್ಕದಲ್ಲೇ ಇದ್ದು, ಈ ರೀತಿ ಅನೈತಿಕ ಚಟುವಟಿಕೆ ಗಳು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಗಮನ ನೀಡಿ ಪ್ರತಿದಿನ ರಾತ್ರಿ ಗಸ್ತು ತಿರುಗುತ್ತಿದ್ದರೂ ಅವರ ಗಮನಕ್ಕೆ ಬಾರದಂತೆ ಇಲ್ಲಿ ಮದ್ಯದ ಕೂಟಗಳು ನಡೆಯುತ್ತಿವೆ. ಇನ್ನು ದೇವಾಲಯಕ್ಕೆ ಬರುವವರು ಕೂಡ ಅಲ್ಲಿ ಬಿದ್ದಿರುವ ಮದ್ಯದ ಬಾಟಲಿಗಳನ್ನು ನೋಡಿ ಮುಜುಗರ ಅನುಭವಿಸುತ್ತಿದ್ದು, ಇದು ಅಲ್ಲಿನ ವಾತಾವರಣವನ್ನು ಹಾಳು ಮಾಡಿದೆ. ಸಂಬಂಧಪಟ್ಟವರು ಕಾಲೇಜು ಆವರಣದಲ್ಲಿ ಇಂಥ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ.

ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

6 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

10 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

10 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

10 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

11 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

11 hours ago