ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 18 ಬುಧವಾರ 2023

ಗ್ರಂಥಾಲಯದಲ್ಲಿ ಸೌಲಭ್ಯ ಕಲ್ಪಿಸಿ

ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯಾಗಿ ದಶಕವೇ ಕಳೆದಿದ್ದು, ಸಮರ್ಪಕ ಸೌಲಭ್ಯಗಳಿಲ್ಲದೇ ಉಪ ಯೋಗಕ್ಕೆ ಬಾರದಂತಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಓದುಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಂಥಾಲಯವು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿತ್ತು. ಆದರೆ, ಗ್ರಂಥಾಲಯದಲ್ಲಿ ಯಾವುದೇ ರೀತಿಯ ಸೌಲಭ್ಯಗಳೂ ಓದುಗರಿಗೆ ಲಭ್ಯತೆ ಇಲ್ಲ. ಇದಲ್ಲದೆ, ಗ್ರಂಥಾಲಯದಲ್ಲಿ ಕುರ್ಚಿಗಳು ತೀರಾ ಕಡಿಮೆ ಸಂಖ್ಯೆಯಲ್ಲಿವೆ. ಅಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ಆಕಾಂಕ್ಷಿಗಳಿಗೆ ಪರಮಾರ್ಶನ ಪುಸ್ತಕಗಳ ಕೊರತೆಯೂ ಹೆಚ್ಚಾಗಿದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಗ್ರಂಥಪಾಲಕರಿಗೆ ಮನವಿ ಮಾಡಿದ್ದರೂ ಅವರು ಅದರ ಬಗ್ಗೆ ಸೂಕ್ತ ಕ್ರಮವಹಿಸುತ್ತಿಲ್ಲ. ಇದರೊಂದಿಗೆ ಗ್ರಂಥಾಲಯ ತೆರೆದಿರುವ ಸಮಯವನ್ನೂ ಹೆಚ್ಚಿಸಬೇಕು. ಇದರ ಬಗ್ಗೆಯೂ ಗ್ರಂಥಪಾಲಕರು ಗಮನ ಹರಿಸಿ ಅನುಕೂಲ ಮಾಡಿಕೊಡಬೇಕು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಓದುಗರ ಅನುಕೂಲಕ್ಕೆ ತಕ್ಕಂತೆ ಕ್ರಮಕೈಗೊಳ್ಳಬೇಕು.

ಆರ್.ಅಜಿತ್ ಕುಮಾರ್,

ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.


ಮದ್ಯವ್ಯಸನಿಗಳ ಹಾವಳಿ ತಪ್ಪಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಗಳ ಆವರಣದಲ್ಲಿ ಮದ್ಯ ವ್ಯಸನಿಗಳ ಮದ್ಯದ ಕೂಟಗಳು ಹೆಚ್ಚಾಗತೊಡಗಿವೆ. ಪ್ರತಿನಿತ್ಯ ರಾತ್ರಿಯಾಗುತ್ತಲೇ ಅಲ್ಲಿ ಕುಡುಕರು ಗುಂಪಾಗಿ ಕುಳಿತು ಮದ್ಯ ಸೇವಿಸುವುದಲ್ಲದೇ ಬಾಟಲಿಗಳನ್ನು ಅಲ್ಲಲ್ಲೇ ಬೀಸಾಡಿ ಹೋಗುತ್ತಿದ್ದಾರೆ. ಇದರಿಂದಾಗಿ ಕಾಲೇಜು ಆವರಣದಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲಿ, ಪ್ಯಾಕೆಟ್‌ಗಳು ಬಿದ್ದಿರುತ್ತವೆ. ಅಂತರಸಂತೆ ಕಾಲೇಜು ಆವರಣದಲ್ಲೇ ಮಹದೇಶ್ವರಸ್ವಾಮಿ ದೇವಾಲಯವೂ ಇದೆ. ಅಲ್ಲದೇ ಪ್ರೌಢಶಾಲೆಯೂ ಪಕ್ಕದಲ್ಲೇ ಇದ್ದು, ಈ ರೀತಿ ಅನೈತಿಕ ಚಟುವಟಿಕೆ ಗಳು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಗಮನ ನೀಡಿ ಪ್ರತಿದಿನ ರಾತ್ರಿ ಗಸ್ತು ತಿರುಗುತ್ತಿದ್ದರೂ ಅವರ ಗಮನಕ್ಕೆ ಬಾರದಂತೆ ಇಲ್ಲಿ ಮದ್ಯದ ಕೂಟಗಳು ನಡೆಯುತ್ತಿವೆ. ಇನ್ನು ದೇವಾಲಯಕ್ಕೆ ಬರುವವರು ಕೂಡ ಅಲ್ಲಿ ಬಿದ್ದಿರುವ ಮದ್ಯದ ಬಾಟಲಿಗಳನ್ನು ನೋಡಿ ಮುಜುಗರ ಅನುಭವಿಸುತ್ತಿದ್ದು, ಇದು ಅಲ್ಲಿನ ವಾತಾವರಣವನ್ನು ಹಾಳು ಮಾಡಿದೆ. ಸಂಬಂಧಪಟ್ಟವರು ಕಾಲೇಜು ಆವರಣದಲ್ಲಿ ಇಂಥ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ.

ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

1 hour ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

1 hour ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

1 hour ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

1 hour ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

1 hour ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

1 hour ago