ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 18 ಬುಧವಾರ 2023

ಗ್ರಂಥಾಲಯದಲ್ಲಿ ಸೌಲಭ್ಯ ಕಲ್ಪಿಸಿ

ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯಾಗಿ ದಶಕವೇ ಕಳೆದಿದ್ದು, ಸಮರ್ಪಕ ಸೌಲಭ್ಯಗಳಿಲ್ಲದೇ ಉಪ ಯೋಗಕ್ಕೆ ಬಾರದಂತಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಓದುಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಂಥಾಲಯವು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿತ್ತು. ಆದರೆ, ಗ್ರಂಥಾಲಯದಲ್ಲಿ ಯಾವುದೇ ರೀತಿಯ ಸೌಲಭ್ಯಗಳೂ ಓದುಗರಿಗೆ ಲಭ್ಯತೆ ಇಲ್ಲ. ಇದಲ್ಲದೆ, ಗ್ರಂಥಾಲಯದಲ್ಲಿ ಕುರ್ಚಿಗಳು ತೀರಾ ಕಡಿಮೆ ಸಂಖ್ಯೆಯಲ್ಲಿವೆ. ಅಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ಆಕಾಂಕ್ಷಿಗಳಿಗೆ ಪರಮಾರ್ಶನ ಪುಸ್ತಕಗಳ ಕೊರತೆಯೂ ಹೆಚ್ಚಾಗಿದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಗ್ರಂಥಪಾಲಕರಿಗೆ ಮನವಿ ಮಾಡಿದ್ದರೂ ಅವರು ಅದರ ಬಗ್ಗೆ ಸೂಕ್ತ ಕ್ರಮವಹಿಸುತ್ತಿಲ್ಲ. ಇದರೊಂದಿಗೆ ಗ್ರಂಥಾಲಯ ತೆರೆದಿರುವ ಸಮಯವನ್ನೂ ಹೆಚ್ಚಿಸಬೇಕು. ಇದರ ಬಗ್ಗೆಯೂ ಗ್ರಂಥಪಾಲಕರು ಗಮನ ಹರಿಸಿ ಅನುಕೂಲ ಮಾಡಿಕೊಡಬೇಕು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಓದುಗರ ಅನುಕೂಲಕ್ಕೆ ತಕ್ಕಂತೆ ಕ್ರಮಕೈಗೊಳ್ಳಬೇಕು.

ಆರ್.ಅಜಿತ್ ಕುಮಾರ್,

ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.


ಮದ್ಯವ್ಯಸನಿಗಳ ಹಾವಳಿ ತಪ್ಪಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಗಳ ಆವರಣದಲ್ಲಿ ಮದ್ಯ ವ್ಯಸನಿಗಳ ಮದ್ಯದ ಕೂಟಗಳು ಹೆಚ್ಚಾಗತೊಡಗಿವೆ. ಪ್ರತಿನಿತ್ಯ ರಾತ್ರಿಯಾಗುತ್ತಲೇ ಅಲ್ಲಿ ಕುಡುಕರು ಗುಂಪಾಗಿ ಕುಳಿತು ಮದ್ಯ ಸೇವಿಸುವುದಲ್ಲದೇ ಬಾಟಲಿಗಳನ್ನು ಅಲ್ಲಲ್ಲೇ ಬೀಸಾಡಿ ಹೋಗುತ್ತಿದ್ದಾರೆ. ಇದರಿಂದಾಗಿ ಕಾಲೇಜು ಆವರಣದಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲಿ, ಪ್ಯಾಕೆಟ್‌ಗಳು ಬಿದ್ದಿರುತ್ತವೆ. ಅಂತರಸಂತೆ ಕಾಲೇಜು ಆವರಣದಲ್ಲೇ ಮಹದೇಶ್ವರಸ್ವಾಮಿ ದೇವಾಲಯವೂ ಇದೆ. ಅಲ್ಲದೇ ಪ್ರೌಢಶಾಲೆಯೂ ಪಕ್ಕದಲ್ಲೇ ಇದ್ದು, ಈ ರೀತಿ ಅನೈತಿಕ ಚಟುವಟಿಕೆ ಗಳು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಗಮನ ನೀಡಿ ಪ್ರತಿದಿನ ರಾತ್ರಿ ಗಸ್ತು ತಿರುಗುತ್ತಿದ್ದರೂ ಅವರ ಗಮನಕ್ಕೆ ಬಾರದಂತೆ ಇಲ್ಲಿ ಮದ್ಯದ ಕೂಟಗಳು ನಡೆಯುತ್ತಿವೆ. ಇನ್ನು ದೇವಾಲಯಕ್ಕೆ ಬರುವವರು ಕೂಡ ಅಲ್ಲಿ ಬಿದ್ದಿರುವ ಮದ್ಯದ ಬಾಟಲಿಗಳನ್ನು ನೋಡಿ ಮುಜುಗರ ಅನುಭವಿಸುತ್ತಿದ್ದು, ಇದು ಅಲ್ಲಿನ ವಾತಾವರಣವನ್ನು ಹಾಳು ಮಾಡಿದೆ. ಸಂಬಂಧಪಟ್ಟವರು ಕಾಲೇಜು ಆವರಣದಲ್ಲಿ ಇಂಥ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ.

ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

6 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

6 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

6 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

9 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago